ಓಜೋನ್ ಮಾಲಿನ್ಯ: ಜನಾರೋಗ್ಯಕ್ಕೆ ಹಾನಿ, ಕೃಷಿಗೆ ಧಕ್ಕೆ
ಮಳೆಗಾಲದ ಅಂತ್ಯಕ್ಕೆ ಮುನ್ನವೇ ಬೆಂಗಳೂರು ಕಾದ ಹಂಚಿನಂತೆ ಸುಡುತ್ತಿದ್ದು, ತಾಪಮಾನ 34 ಡಿಗ್ರಿ ದಾಟಿದೆ. ಋತುಮಾನಗಳ ನಡುವೆ ವ್ಯತ್ಯಾಸವೇ ಇಲ್ಲದಂತೆ ಆಗಿದ್ದು, ಚಳಿಗಾಲಕ್ಕೆ ಮೊದಲೇ ಬೇಸಿಗೆ ಆರಂಭವಾದಂತೆ ಭಾಸವಾಗುತ್ತಿದೆ. ಉತ್ತರ ಭಾರತದ ರಾಜ್ಯಗಳನ್ನು ಚಳಿಗಾಲದಲ್ಲಿ ಮುಚ್ಚುವ ಕಾವಳ, ಹೊಂಜು(ಹೊಗೆ+ಮಂಜು) ಶಾಲೆಗಳನ್ನು ಬಂದ್ ಮಾಡಿಸುತ್ತದೆ; ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳ್ಳುತ್ತದೆ; ವಾಹನಗಳಿಗೆ ಸಮ-ಬೆಸ ದಿನಗಳ ಮೀಸಲು ಆರಂಭವಾಗುತ್ತದೆ. ಕೂಳೆ ದಹನ, ಪಳೆಯುಳಿಕೆ ಇಂಧನಗಳಿಂದ ಹೊರಬರುವ ಕೊಳೆ ಗಾಳಿ ಹಾಗೂ ಸೂಕ್ಷ್ಮಕಣಗಳಿಂದ ಪರಿಸ್ಥಿತಿ ಹದಗೆಡುತ್ತದೆ. ಇದು ಪ್ರತಿವರ್ಷದ ಕತೆ; ಮರುಕಳಿಸುತ್ತಲೇ […]




