ವಾರ್ತಾಭಾರತಿಯಲ್ಲಿ 2023ರಲ್ಲಿ ಪ್ರಕಟವಾದ ಲೇಖನಗಳ ಗುಚ್ಛ;ನವಕರ್ನಾಟಕ ಪ್ರಕಾಶನ, ಬೆಂಗಳೂರು. ಪುಟ 232. ಬೆಲೆ ರೂ.290
ವಾರ್ತಾಭಾರತಿಯಲ್ಲಿ 2023ರಲ್ಲಿ ಪ್ರಕಟವಾದ ಲೇಖನಗಳ ಗುಚ್ಛ;ನವಕರ್ನಾಟಕ ಪ್ರಕಾಶನ, ಬೆಂಗಳೂರು. ಪುಟ 232. ಬೆಲೆ ರೂ.290
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಮರುಪರೀಕ್ಷೆ ನಡೆದಿದೆ. ಸರ್ಕಾರ ಪರೀಕ್ಷೆಗೆ ಮುನ್ನ ಟೆಲಿಗ್ರಾಂಗೆ ತಾತ್ಕಾಲಿಕ ನಿಷೇಧ ಹೇರಿತು; ಆನಂತರ ವಾಟ್ಸ್ಆಪ್ ತರಲು ಯೋಜಿಸಿದ್ದ ʻಯೂಸರ್ನೇಮ್ʼ ಸೌಲಭ್ಯದ ವಿವರ ನೀಡುವಂತೆ ನೋಟಿಸ್ ನೀಡಿತು. ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ಬೀಸುವ ದೊಣ್ಣೆಯಿಂದ ವಾಟ್ಸ್ಆಪ್ ತಪ್ಪಿಸಿಕೊಂಡಿದೆ. ಇಂಥದ್ದೇ ನೋಟಿಸ್ ಮೆಟಾ, ಅರಟ್ಟೈ ಹಾಗೂ ಸಿಗ್ನಲ್ಗೂ ರವಾನೆಯಾಗಿದೆ. ದೆಹಲಿ ಹೈಕೋರ್ಟ್ ಕಾಕ್ರೋಚ್ ಜನತಾ ಪಕ್ಷದ ಎಕ್ಸ್ ಖಾತೆಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಿದೆ. ಗೋದಿ ಮಾಧ್ಯಮಗಳ ಯುಗದಲ್ಲಿ ಜನಸಾಮಾನ್ಯರು ಸಂವಹನಕ್ಕೆ ಬಳಸುತ್ತಿರುವ ಸಾಮಾಜಿಕ ಮಾಧ್ಯಮಗಳ […]
ಕೇರಳ ಈ ಕೀಟನಾಶಕವನ್ನು 2011ರಲ್ಲಿ ನಿಷೇಧಿಸಿತ್ತು. ಆದರೆ, ಕೇರಳ ಹೈಕೋರ್ಟ್ ಫೆಬ್ರವರಿ 2022ರಲ್ಲಿ ನಿಷೇಧವನ್ನು ತೆಗೆದುಹಾಕಿತು. ಆನಂತರ ಒಡಿಷಾ ಅಕ್ಟೋಬರ್ 2023ರಲ್ಲಿ, ಬಳಿಕ ತೆಲಂ ಗಾಣ ಏಪ್ರಿಲ್ 1, 2026ರಲ್ಲಿ ಹಾಗೂ ಆಂಧ್ರಪ್ರದೇಶ ಜೂನ್ 2026ರಲ್ಲಿ ನಿಷೇಧಿಸಿದವು. ಅದೇ ಜಗತ್ತಿನಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಮತ್ತು ತೀವ್ರ ವಿಷಕರ ಕಳೆನಾಶಕ ಪ್ಯಾರಕ್ವಾಟ್ ಡೈ ಕ್ಲೋರೈಡ್(ರಸಾಯನಿಕ ಹೆಸರು-1,1 ಡೈಮೀಥೈಲ್ 4,4 ಬೈಪಿರಿಡಿನಿಯಂ ಡೈಕ್ಲೋರೈಡ್ ಅಥವಾ ಮೀಥೈಲ್ ವಯಲೋಜೆನ್). 2013ರಲ್ಲಿ ಕೃಷಿ ಸಚಿವಾಲಯ ನೇಮಿಸಿದ ಅನುಪಮ್ ವರ್ಮಾ ನೇತೃತ್ವದ ಪರಿಣತ ಪರಿಶೀಲನಾ […]
ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಮುಂಗಾರು ಹಿನ್ನಡೆ ಅನುಭವಿಸಿದೆ. 2026ರಲ್ಲಿ ಮುಂಗಾರು ವಾಡಿಕೆಗಿಂತ ದುರ್ಬಲ ಆಗಲಿದೆ ಎಂದು ಈ ಹಿಂದೆಯೇ ಸೂಚನೆ ಇತ್ತು. ರಾಷ್ಟ್ರ ಮಟ್ಟದಲ್ಲಿ ಶೇ.43 ಹಾಗೂ ರಾಜ್ಯದಲ್ಲಿ ಸರಾಸರಿ ಶೇ.37 ರಷ್ಟು ಮಳೆ ಕೊರತೆ ಆಗಿದೆ; ದಕ್ಷಿಣ ಒಳನಾಡಿನ 3, ಉತ್ತರ ಒಳನಾಡಿನ 5, ಮಲೆನಾಡಿನ 4 ಮತ್ತು ಕರಾವಳಿಯ 3 ಸೇರಿದಂತೆ 15 ಜಿಲ್ಲೆಗಳಲ್ಲಿ ಕೊರತೆ ತೀವ್ರವಾಗಿದೆ; ಬೀದರ್ ಗರಿಷ್ಠ(ಶೇ.67) ಮತ್ತು ಮೈಸೂರು ಕನಿಷ್ಠ(ಶೇ.42). ತುಂಗಭದ್ರಾ ಸೇರಿದಂತೆ ಜಲಾಶಯಗಳಲ್ಲಿ ನೀರು ಖಾಲಿಯಾಗುತ್ತಿದೆ. ಇದರಿಂದ ಮಲೆನಾಡು […]
ರಾಜ್ಯದೆಲ್ಲೆಡೆ ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದೊಂದು ವಾರ್ಷಿಕ ಕಾರ್ಯಕ್ರಮದಂತೆ ಆಗಿಬಿಟ್ಟಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಮೇ 30, 2008ರಂದು ಅಧಿಕಾರ ಸ್ವೀಕರಿಸಿತ್ತು. ಹಾವೇರಿಯ ಎಪಿಎಂಸಿ ಅಂಗಳದಲ್ಲಿ ಮುಂಗಾರು ಪೂರ್ವ ಬಿತ್ತನೆಗೆ ಸಬ್ಸಿಡಿ ರಸಗೊಬ್ಬರಗಳ ಕೊರತೆಯನ್ನು ಪ್ರತಿಭಟಿಸಿದ ರೈತರ ಮೇಲೆ ಪೊಲೀಸರು ಜೂನ್ 10 ರಂದು ಗುಂಡು ಹಾರಿಸಿದರು. ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನಟ್ಟಿ ಬಲಿಯಾಗಿ, 13 ಮಂದಿ ಗಾಯಗೊಂಡರು. ಸರ್ಕಾರ ವಿಚಾರಣೆಗೆ ನೇಮಿಸಿದ ಸುಪ್ರೀಂ ಕೋರ್ಟ್ ನಿವೃತ್ತ […]
ಬಿಡದಿಯಲ್ಲಿ ಸರ್ಕಾರ ಸ್ಥಾಪಿಸಲು ಪ್ರಸ್ತಾಪಿಸಿರುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್(ಜಿಬಿಐಟಿ) ರೈತರಲ್ಲಿ ಆತಂಕ ಮೂಡಿಸಿದೆ. ದೇಶದ ಮೊದಲ ಎಐ ಚಾಲಿತ ಉಪನಗರ ಇದಾ ಗಿದ್ದು, ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುತ್ತದೆ; ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಸುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ರೈತರು ಪ್ರಾಥಮಿಕ ಅಧಿಸೂಚನೆ ಹೊರಡಿ ಸಿದ ಬಳಿಕ ಮಾರ್ಚ್ 2025ರಿಂದ ಪ್ರತಿಭಟನೆ ಆರಂಭಿಸಿದ್ದಾರೆ. ʻನನ್ನ ಭೂಮಿ, ನನ್ನ ಹಕ್ಕುʼ ಎಂದು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಶೇ.80 ರಷ್ಟು ರೈತರು ಜಮೀನು ನೀಡಲು […]
ಮೇ 3, 2026ರಂದು ನೀಟ್-ಯುಜಿಸಿ(ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತೆ ಪರೀಕ್ಷೆ) ಪರೀಕ್ಷೆ ನಡೆದ 9 ದಿನಗಳ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸಿತು; ಸರ್ಕಾರ ಸಿಬಿಐ ತನಿಖೆಗೆ ಮುಂದಾಯಿತು. ವೈದ್ಯರ ಸಂಘಟನೆಯೊಂದು ಸುಪ್ರೀಂ ಕೋರ್ಟ್ ಕದ ತಟ್ಟಿತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಒಂದು ವಿಷವೃತ್ತ. ರಾಜಕೀಯ ನಾಯಕರ ಖಾಸಗಿ ವೈದ್ಯ ಕಾಲೇಜುಗಳು, ಹಲವು ಸಾವಿರ ಕೋಟಿ ರೂ. ಮೌಲ್ಯದ ಕೋಚಿಂಗ್ ಉದ್ಯಮ ಮತ್ತು ವೈದ್ಯ ಪದವಿಯ ಸಾಮಾಜಿಕ ಪ್ರತಿಷ್ಠೆ ಇದರಲ್ಲಿ ಕೈ […]
ಐದು ರಾಜ್ಯಗಳ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಕೇರಳದಲ್ಲಿ ಎಡ ರಂಗ ಸೋಲುಂಡಿವೆ. ಅಸ್ಸಾಮಿನಲ್ಲಿ ಎನ್ಡಿಎ 3ನೇ ಅವಧಿಗೆ ಹಾಗೂ ಪುದು ಚೆರಿಯಲ್ಲಿ ಎನ್.ರಂಗಸ್ವಾಮಿ ಮತ್ತೊಮ್ಮೆ ಗದ್ದುಗೆ ಹಿಡಿದಿದ್ದಾರೆ. ಪ್ರತಿಪಕ್ಷಗಳಿಗೆ 2024ರ ಲೋಕಸಭೆ ಚುನಾವಣೆ ತೆರೆದಿದ್ದ ಬಾಗಿಲು ಈಗ ಬಹುತೇಕ ಮುಚ್ಚಿಹೋಗಿದೆ; ಧರ್ಮ, ಭಾಷೆ ಮತ್ತು ಜಾತಿಗಳ ವಿಸ್ತೃತ ವೈವಿಧ್ಯವಿದ್ದರೂ, ಶೇ.80 ರಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ ಮತ್ತು ಕಾಂಗ್ರೆಸ್ ನಾಲ್ಕು ರಾಜ್ಯಗಳಿಗೆ ಸೀಮಿತವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ […]
ʻಹಲ್ಲು ಬಹಳ ದೊಡ್ಡ ಇದೆʼ ಎಂಬ ಕಾರಣಕ್ಕೆ ಕ್ಯಾಮೆರಾ ಎದುರು ಅವಕಾಶ ಸಿಗದ ಯುವಕನೊಬ್ಬ 70 ವರ್ಷ ಕಾಲ ವನ್ಯಜೀವಿಗಳ ಕುರಿತು ನಿರಂತರವಾಗಿ ಕಾರ್ಯಕ್ರಮ ನೀಡುತ್ತ ಅರಿವು ಮೂಡಿ ಸಿದ್ದು ಒಂದು ಸೋಜಿಗ. ಅವರೇ ಸರ್ ಡೇವಿಡ್ ಅಟೆನ್ಬರೋ. ಸಾರ್ಥಕ ನೂರು ವರ್ಷ ಪೂರೈಸಿರುವ ಅವರು ಕಳೆದ 70 ವರ್ಷದಿಂದ ಬ್ರಿಟನ್ ಮಾತ್ರವಲ್ಲದೆ ಜಗತ್ತಿನ ಎಲ್ಲೆಡೆಯ ಜನರನ್ನು ವನ್ಯಜೀವಿ ಪ್ರಪಂಚಕ್ಕೆ ಪರಿಚಯಿಸಿದ ಶ್ರೇಷ್ಠ ಪ್ರಸಾರಕರಲ್ಲಿ ಒಬ್ಬರು. ತಂದೆ ಫ್ರೆಡೆರಿಕ್ ಅಟೆನ್ಬರೋ, ಲೀಸೆಸ್ಟರ್ ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ. ತಾಯಿ […]