ಮೇಕೆದಾಟು: ಎನ್‍ಜಿಟಿಯಿಂದ ಜಂಟಿ ಸಮಿತಿ

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ದಕ್ಷಿಣ ಪೀಠ ಮೇಕೆದಾಟು ಪ್ರದೇಶದಲ್ಲಿ ಅಕ್ರಮ ನಿರ್ಮಾಣ ಕಾರ್ಯಗಳು ನಡೆಯುತ್ತಿವೆಯೇ ಎನ್ನುವುದನ್ನು ಪರಿಶೀಲಿಸಲು ಜಂಟಿ ಸಮಿತಿಯನ್ನು ರಚಿಸಿದೆ. ಜುಲೈ 5ರೊಳಗೆ ವರದಿ ಸಲ್ಲಿಸಬೇಕೆಂದು ನಿರ್ದೇಶಿಸಿದೆ.

ಈ ಕುರಿತು ಮಾಧ್ಯಮದಲ್ಲಿ ವರದಿಯೊಂದು ಪ್ರಕಟವಾಗಿತ್ತು. ಸೋಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಎನ್‍ಜಿಟಿ, ಪರಿಸರ ಪರಿಣಾಮ ಲೆಕ್ಕಾಚಾರ ನಡೆಸದೆ ಹಾಗೂ ಅಗತ್ಯವಿರುವ ಅನುಮತಿಗಳನ್ನು ಪಡೆಯದೆ, ನಿರ್ಮಾಣ ಕಾರ್ಯಕ್ಕೆ ಮುಂದಾಗುವುದು ಅಕ್ರಮವಾಗಲಿದೆ ಎಂದಿದೆ.
ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ.

****

Journalist,Translator,avid bibliophile

Leave a Reply

Your email address will not be published. Required fields are marked *

Back To Top