Author: Rutha Editor

Journalist,Translator,avid bibliophile

ಎಐ ಶೃಂಗ, ನಿರುದ್ಯೋಗ ಮತ್ತು ಶೈಕ್ಷಣಿಕ ವ್ಯವಸ್ಥೆ

ದಿಲ್ಲಿಯಲ್ಲಿ ನಡೆದ ಎಐ ಶೃಂಗದಲ್ಲಿ ಅಮೆರಿಕ, ಇಂಗ್ಲೆಂಡ್‌, ಬ್ರೆಜಿಲ್‌, ಆಸ್ಟ್ರೇಲಿಯ, ಆಸ್ಟ್ರಿಯ, ಚೀನಾ, ಕೆನಡಾ, ಸ್ವಿಡ್ಜರ್‌ಲ್ಯಾಂಡ್‌ ಸೇರಿದಂತೆ 89 ರಾಷ್ಟ್ರಗಳು ಎಐ ಸಂಪನ್ಮೂಲಗಳ ಪ್ರಜಾಪ್ರಭುತ್ವೀಕರಣ, ರಾಷ್ಟ್ರೀಯ ಸಾರ್ವಭೌಮತ್ವಕ್ಕೆ ಗೌರವ, ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಒಳಿತು, ಸುರಕ್ಷಿತ ಮತ್ತು ನಂಬಿಕಾರ್ಹ ಎಐ, ಸಾಮಾಜಿಕ ಪ್ರವೇಶಾವಕಾಶ, ಮಾನವ ಸಂಪನ್ಮೂಲದ ಪುನಶ್ಚೇತನ ಇತ್ಯಾದಿ ಒಳಗೊಂಡ ಒಪ್ಪಂದಕ್ಕೆ ಸಹಿ ಹಾಕಿವೆ. ಜತೆಗೆ, ಎಲೆಕ್ಟ್ರಾನಿಕ್ಸ್ ಮತ್ತು ಬಹುಮುಖ್ಯ ಖನಿಜಗಳ ಕೇಂದ್ರೀಕರಣದ ವಿರುದ್ಧದ ಅಮೆರಿಕ ನೇತೃತ್ವದ ʻಪ್ಯಾಕ್ಸ್‌ ಸಿಲಿಕಾ ಇನಿಷಿಯೇಟಿವ್‌ʼ ಅನ್ನು ಭಾರತ ಸೇರಿದೆ. […]

ಪೀಡೆನಾಶಕಗಳ ಅತಿಬಳಕೆ: ಆಹಾರ, ನೀರು ವಿಷಮಯ

ಕುಡಿಯುವ ನೀರು, ತಿನ್ನುವ ಆಹಾರ ಹಾಗೂ ಉಸಿರಾಡುವ ಗಾಳಿ ಮಲಿನಗೊಂಡು ವಿಷಮಯವಾಗಿರುವ ಜಗತ್ತಿನಲ್ಲಿ ನಾವು ಬದುಕುತ್ತಿದ್ದೇವೆ. ದಿಲ್ಲಿ ಸೇರಿದಂತೆ ದೇಶದ ಬಹುತೇಕ ನಗರಗಳು ವಾಯುಮಾಲಿನ್ಯದಿಂದ ಬಳ ಲುತ್ತಿವೆ; ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಕುಡಿಯುವ ನೀರು ಚರಂಡಿ ನೀರಿನೊಂದಿಗೆ ಮಿಶ್ರಗೊಂಡು, 23 ಮಂದಿ ಮರಣ ಹೊಂದಿದ ಪ್ರಕರಣ ತೇಲುತ್ತಿರುವ ನೀರ್ಗಲ್ಲಿನ ಕಾಣುತ್ತಿರುವ ತುದಿಯಷ್ಟೇ. ಇದರೊಟ್ಟಿಗೆ ಕೃಷಿಯಲ್ಲಿ ಪೀಡೆನಾಶಕಗಳ ಅತಿ ಬಳಕೆ, ದುರ್ಬಳಕೆ ಹಾಗೂ ವಿನಾಕಾರಣ ಬಳಕೆಯಿಂದ ತಿನ್ನುವ ಆಹಾರ ಮತ್ತು ಅಂತರ್ಜಲ ವಿಷವಾಗಿ ಪರಿಣಮಿಸಿದೆ. ʻನಮ್ಮದು ಕೃಷಿ ಪ್ರಧಾನ ದೇಶʼ […]

ಮಹಾಶ್ವೇತಾದೇವಿ, ಹೋರಾಟ ಮತ್ತು ಪ್ರಶಸ್ತಿಗಳಿಗೆ ಪರದಾಟ

ಇದು ಮಹಾಶ್ವೇತಾ ದೇವಿ ಅವರ ಶತಮಾನೋತ್ಸವ ವರ್ಷ(14 ಜನವರಿ 1926- 28 ಜುಲೈ 2016). 100 ಕ್ಕೂ ಅಧಿಕ ಕಾದಂಬರಿ ಮತ್ತು 20 ಕ್ಕೂ ಹೆಚ್ಚು ಸಣ್ಣ ಕಥೆಗಳ ಸಂಕಲನವನ್ನು ಬರೆದಿ ರುವ ಅವರ ಬದುಕು ಮುಖ್ಯವಾಗು ವುದು ಆದಿವಾಸಿಗಳ ಕುರಿತ ಕಾಳಜಿ-ಹೋರಾಟಗಳಿಂದ ಹಾಗೂ ಪ್ರಶಸ್ತಿಗಳ ಹಿಂದೆ ಓಡುವ ಇಂದಿನ ಯುಗಮಾನದಲ್ಲಿ ಆ ಬಗೆಗಿನ ದಿವ್ಯ ನಿರ್ಲಕ್ಷ್ಯದಿಂದ. ಪ್ರಶಸ್ತಿಗಿಂತ ಸೈದ್ಧಾಂತಿಕ ಮೌಲ್ಯಗಳು ಮುಖ್ಯ ಎಂಬ ದೃಢ ನಿಶ್ಚಯದಿಂದ ರಾಜ್ಯ ಸರ್ಕಾರ ಪ್ರಾಯೋಜಿತ ಸಾಹಿತ್ಯ ಪ್ರಶಸ್ತಿಗಳನ್ನು ಅವರು ತಿರಸ್ಕರಿಸಿದರು. […]

ಯುಜಿಸಿ, ಸುಪ್ರೀಂ ಮತ್ತು ಸಮಾನತೆಯ ಅವಸಾನ

ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ದ ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹೊಸ ನಿಯಮಗಳನ್ನು ವಿರೋಧಿಸಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮೇಲ್ಜಾತಿಗಳು- ಸಾಮಾನ್ಯ ವರ್ಗದ ವಿದ್ಯಾರ್ಥಿ ಗಳು ಪ್ರತಿಭಟನೆ ಆರಂಭಿಸಿದ್ದರು. ಬಿಜೆಪಿಯ ರಾಜಕೀಯ ಶಿಲ್ಪದ ಬುನಾದಿಯಾದ ಯುವಜನರಲ್ಲಿ ಜಾತಿ ಆಧರಿತ ಧ್ರುವೀಕರಣವು ಪಕ್ಷಕ್ಕೆ ದುಬಾರಿಯಾಗುವ ಸಾಧ್ಯತೆ ಇತ್ತು. ಆದರೆ, ಸುಪ್ರೀಂ ತೀರ್ಪಿನಿಂದ 2026ರಲ್ಲಿ ನಡೆಯ ಲಿರುವ ಮತ್ತು 2027ರಲ್ಲಿ ಉತ್ತರಪ್ರದೇಶದಲ್ಲಿ ನಡೆಯಬೇಕಿರುವ ಚುನಾವಣೆಯಲ್ಲಿ ಬಿಜೆಪಿಗೆ ಎದುರಾಗಿದ್ದ ಕಂಟಕವೊಂದು ನಿವಾರಣೆ ಆಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ […]

ನೇಪಥ್ಯಕ್ಕೆ ಸರಿದ ದಂತಕಥೆ ಮಾರ್ಕ್ ಟುಲ್ಲಿ

ಪತ್ರಕರ್ತ ವಿಲಿಯಂ ಮಾರ್ಕ್ ಟುಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಮೃತಪಟ್ಟಿದ್ದು (ಅಕ್ಟೋಬರ್ 24,1935 -ಜನವರಿ 25, 2026), ದಂತಕತೆಯೊಂದು ಕಣ್ಮರೆಯಾಗಿದೆ. ಆದರೆ, ಟುಲ್ಲಿ ಅವರ ಬೆಚ್ಚಗಿನ, ನಿರ್ಭೀತ ಮತ್ತು ನಿಷ್ಪಕ್ಷಪಾತ ಧ್ವನಿಯು ದಕ್ಷಿಣ ಏಷ್ಯಾ ಮತ್ತು ಪ್ರಪಂಚದಾದ್ಯಂತದ ಶ್ರೋತೃಗಳ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದುಕೊಳ್ಳಲಿದೆ. ಕಲ್ಕತ್ತಾದಲ್ಲಿ ಜನನ; ತಂದೆ ವಿಲಿಯಂ ಸ್ಕಾರ್ಥ್‌ ಕಾರ್ಲೈಸ್ಲ್‌ ಟುಲ್ಲಿ ಬ್ರಿಟಿಷ್ ಮ್ಯಾನೇಜಿಂಗ್ ಏಜೆನ್ಸಿ ಗಿಲ್ಯಾಂಡರ್ ಅರ್ಬುತ್‌ನಾಟ್ಸ್‌ನ ಹಿರಿಯ ಪಾಲುದಾರ ಮತ್ತು ತಾಯಿ ಪೇಷನ್ಸ್‌ ಟ್ರೆಬಿ. ತಾಯಿಯ ಹಿರಿಯರು ಬಾಂಗ್ಲಾದಲ್ಲಿ ತಲೆಮಾರುಗಳಿಂದ ನೆಲೆಸಿದ್ದರು. ಡಾರ್ಜಿಲಿಂಗ್‌ನ […]

ನೀರು, ವಿದ್ಯುತ್ ಕಸಿಯುವ ದತ್ತಾಂಶ ಕೇಂದ್ರಗಳು

ಕರ್ನಾಟಕಕ್ಕೆ ಡೇಟಾ ಸೆಂಟರ್(ದತ್ತಾಂಶ ಕೇಂದ್ರ)ಗಳು ಕೈತಪ್ಪಿಹೋಗಿ, ಆಂಧ್ರಪ್ರದೇಶದ ಪಾಲಾಗಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಯಿತು. ಕರಾವಳಿ ಜಿಲ್ಲೆಯಲ್ಲಿ ಇವುಗಳ ಸ್ಥಾಪನೆಗೆ ಅತ್ಯುತ್ಸಾಹ ವ್ಯಕ್ತವಾಗಿತ್ತು. ಇದು ಮಾಹಿತಿ ತಂತ್ರಜ್ಞಾನ ಮೇಲುಗೈ ಸಾಧಿಸಿರುವ, ದತ್ತಾಂಶವು ಚಿನ್ನ ಆಗಿರುವ ಯುಗ. ಕಟ್ಟು ಜಾಣ್ಮೆ(ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್)ಯ ಉಬ್ಬರದ ಈ ಕಾಲಮಾನದಲ್ಲಿ ದತ್ತಾಂಶ ಕೇಂದ್ರಗಳು ಅತ್ಯವಶ್ಯ. ಆದರೆ, ವಿದ್ಯುತ್‌ ಹಾಗೂ ನೀರಿನ ತೀವ್ರ ಕೊರತೆ ಇರುವಲ್ಲಿ ಇವು ಅಗತ್ಯವೇ? ರಾಜಸ್ಥಾನ ಹೊರತುಪಡಿಸಿದರೆ, ಕರ್ನಾಟಕ ಬರಕ್ಕೆ ತುತ್ತಾಗಬಲ್ಲ ಸಾಧ್ಯತೆ ಹೆಚ್ಚು ಇರುವ ಮತ್ತು ನೀರಿನ ತೀವ್ರ ಕೊರತೆ […]

ಹೋಗಿ ಬನ್ನಿ ಗಾಡ್ಗೀಳ್ ಸರ್‌…ನಮಸ್ಕಾರ

ಪಶ್ಚಿಮ ಘಟ್ಟದಲ್ಲಿ ಬೇಡ್ತಿ-ವರದಾ ಮತ್ತು ಅಘನಾಷಿನಿ-ವೇದಾವತಿ ನದಿ ಜೋಡಣೆ, ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ, ಆಗುಂಬೆ ಸುರಂಗ, ಹೊನ್ನಾವರ ರೈಲು ಮಾರ್ಗ, ಕ್ಯಾಸಲ್‌ರಾಕ್-ಕುಲೆಂ ಜೋಡಿ ಹಳಿ ಮಾರ್ಗ, ಕೊಡಚಾದ್ರಿಗೆ ರೋಪ್‌ವೇ ಸೇರಿದಂತೆ ಹಲವು ಯೋಜನೆಗಳನ್ನು ಉದ್ದೇಶಿಸಲಾಗಿದೆ. ಇದೇ ಹೊತ್ತಿನಲ್ಲಿ ನದಿಗಳಿಗೂ ಜೀವಿಸುವ ಹಕ್ಕು ನೀಡಬೇಕೆಂದು ಆಗ್ರಹಿಸಿ, ಜನವರಿ 11ರಂದು ಶಿರಸಿಯಲ್ಲಿ ಜನ ಸಮಾವೇಶ ನಡೆದಿದೆ. ಪ್ರತಿಯಾಗಿ ಹಾವೇರಿಯಲ್ಲಿ ನದಿ ಜೋಡಣೆ ಪರವಾಗಿ ಸಮಾವೇಶ ನಡೆದಿದೆ. ಇದೆಲ್ಲದರ ನಡುವೆ ಪಶ್ಚಿಮ ಘಟ್ಟಕ್ಕಾಗಿ ತಮ್ಮ ಜೀವವನ್ನೇ ಸವೆಸಿದ್ದ ಮಾಧವ ಗಾಡ್ಗೀಳ್(ಮೇ […]

ರಕ್ತಸಿಕ್ತ ಲ್ಯಾಟಿನ್‌ ಅಮೆರಿಕ: ಪ್ರತಿರೋಧದ ಮೂಲಕ ಸ್ವಾತಂತ್ರ್ಯದ ಮರುವ್ಯಾಖ್ಯಾನ

ವೆನೆಜುವೆಲ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ಜ.3, 2026ರಂದು ಅಮೆರಿಕದ ಡೆಲ್ಟಾ ಫೋರ್ಸ್ ಅಪಹರಿಸಿದೆ. ಇದು 1989ರ ಪನಾಮ ಆಕ್ರಮ ಣದ ನಂತರ ಲ್ಯಾಟಿನ್ ಅಮೆರಿಕದಲ್ಲಿ ನಡೆದ ನೇರ ಮಿಲಿಟರಿ ಹಸ್ತಕ್ಷೇಪ. ಈ ಕಾರ್ಯಾಚರಣೆಯು ಟ್ರಂಪ್ ಆಡಳಿತದ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ (ನ್ಯಾಷನಲ್‌ ಸೆಕ್ಯುರಿಟಿ ಸ್ಟ್ರಾಟೆಜಿ) 2025ರ ಭಾಗ. ಅಮೆರಿಕವು ಪಶ್ಚಿಮ ಗೋಳಾರ್ಧದಲ್ಲಿ ತನ್ನ ಆಧಿಪತ್ಯದ ಮರುಸ್ಥಾಪನೆಗೆ ಮನ್ರೋ ಸಿದ್ಧಾಂತದ ಜಾರಿಗೆ ಮುಂದಾಗಿದೆ. ಲ್ಯಾಟಿನ್‌ ಅಮೆರಿಕದ ಉತ್ತರ ಭಾಗದಲ್ಲಿರುವ ವೆನೆಜುವೆಲ, […]

ಅರಾವಳಿ ಪರ್ವತಶ್ರೇಣಿ ಮೇಲೆ ಉದ್ಯಮದ ಕಾಕದೃಷ್ಟಿ

ಸುಪ್ರೀಂ ಕೋರ್ಟ್‌ ಡಿಸೆಂಬರ್‌ 29, 2025ರಂದು ಅರಾವಳಿಯ ಹೊಸ ವ್ಯಾಖ್ಯೆಗೆ ತಡೆ ನೀಡಿದೆ ಮತ್ತು ಈ ಸಂಬಂಧ ಅಧ್ಯಯನ ನಡೆಸಲು ಉನ್ನತಾಧಿಕಾರ ಸಮಿತಿ ರಚಿಸಬೇಕೆಂದು ಹೇಳಿದೆ. ಇದರಿಂದ ಬೀಸುವ ದೊಣ್ಣೆಯಿಂದ ಸದ್ಯಕ್ಕೆ ತಪ್ಪಿಸಿಕೊಂಡಂತಾಗಿದೆ. ಆದರೆ, ಪ್ರಶ್ನೆ ಇರುವುದು- ಪರಿಸರ ಮಂತ್ರಾಲಯದ ಅಧಿಕಾರಿಗಳು ನೀಡಿದ ವ್ಯಾಖ್ಯೆಯನ್ನು ನ್ಯಾಯಾಲಯ ಈಮೊದಲು ಒಪ್ಪಿದ್ದಾದರೂ ಏಕೆ? ನ್ಯಾಯಾಲಯಕ್ಕೆ ವಾಸ್ತವ ಸಂಗತಿ ತಿಳಿಸದೆ ಮುಚ್ಚಿಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ತನ್ನದೇ ಸಚಿವಾಲಯದ ಅಡಿ ಬರುವ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ)ಯ ಶಿಫಾರಸುಗಳನ್ನು ಕೂಡ ಪರಿಸರ ಸಚಿವಾಲಯ […]

Back To Top