ದೇಶಕ್ಕೆ ಇನ್ನಷ್ಟು ರಾಡ್ರಿಗಸ್, ಕೌರ್ ಮತ್ತು ಖುರೇಷಿಗಳು ಅಗತ್ಯ
ಮಹಿಳಾ ವಿಶ್ವ ಕಪ್ ನಮ್ಮ ಪಾಲಾಗಿದೆ. 1983ರಲ್ಲಿ ಪುರುಷರ ವಿಶ್ವ ಕಪ್, 2011ರಲ್ಲಿ ಐಸಿಸಿ ವಿಶ್ವ ಕಪ್ ಗೆಲುವಿನ ನಂತರದ ಚರಿತ್ರಾರ್ಹ ಗೆಲುವು ಇದು. 2005ರಲ್ಲಿ ಆಸ್ಟ್ರೇಲಿಯ ಹಾಗೂ 2017ರಲ್ಲಿ ಇಂಗ್ಲೆಂಡ್ ವಿರುದ್ಧ ಮಹಿಳಾ ತಂಡ ಸೋಲುಂಡಿತ್ತು. ಗೆಲುವಿನ ಬಳಿಕ ತಂಡ ಘನತೆಯಿಂದ ನಡೆದುಕೊಂಡಿತು. ಪ್ರತಿಯಾಗಿ 2025ರ ಏಷ್ಯಾ ಕಪ್ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಾಯಕ ಸೂರ್ಯಕುಮಾರ್ ಯಾದವ್, ಎದುರಾಳಿ ತಂಡದ ನಾಯಕನ ಹಸ್ತಲಾಘವ ಮಾಡಲಿಲ್ಲ; ಎರಡು ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆ ಮತ್ತು ಕಾಶ್ಮೀರದಲ್ಲಿ […]
ಪ್ರತಿದಿನ 2,000 ರೈತರು ಬೇಸಾಯದಿಂದ ಹೊರಗೆ
ಕರ್ನಾಟಕದ ರಾಜ್ಯ ಪಕ್ಷಿ ನೀಲಕಂಠ(ಇಂಡಿಯನ್ ರೋಲರ್, ಕೊರಾಸಿಯಸ್ ಬೆಂಗಾಲೆನ್ಸಿಸ್)ನ ವೈಶಿಷ್ಟ್ಯವೇನೆಂದರೆ, ಅವನು ಆಂಧ್ರಪ್ರದೇಶ, ಬಿಹಾರ ಮತ್ತು ಒಡಿಷಾದ ರಾಜ್ಯ ಪಕ್ಷಿಯೂ ಹೌದು. ಒಡಿಷಾದಲ್ಲಿ ನೀಲಕಂಠನನ್ನು ತಿಹಾ ಎಂದು ಕರೆಯುತ್ತಾರೆ. ಬೇಡಿದ್ದನ್ನು ನೀಡುತ್ತಾನೆ ಎಂದು ರೈತರು ನಂಬಿರುವುದರಿಂದ, ದಸರಾ ಹಬ್ಬದಂದು ನೀಲಕಂಠನನ್ನು ನೋಡುವ ಸಂಪ್ರದಾಯವಿದೆ. ಆದರೆ, ಈ ವರ್ಷ ಮತುಪಲಿ ಗ್ರಾಮದ ರೈತ ಪಿತಬಷಾ, ಹಕ್ಕಿ ಯನ್ನು ನೋಡಲು ಹೋಗಲಿಲ್ಲ. ಏಕೆ ಎಂಬ ಪ್ರಶ್ನೆಗೆ ʼನಾನು ಬೇಡಿಕೊಳ್ಳುವುದನ್ನು ನಿಲ್ಲಿಸಿದ್ದೇನೆʼ ಎಂಬ ಪ್ರತಿಕ್ರಿಯೆ ಬಂದಿತು. 2025ರ ಸೆಪ್ಟೆಂಬರ್ನಲ್ಲಿ ಸುರಿದ ನಿರಂತರ […]
ಜಾತಿಯೆಂಬುದು ಕಣ್ಣಿಗೆ ಇರಿಯುವ ವಾಸ್ತವ, ನಿವಾರಣೆಯಾಗದ ಜಾಡ್ಯ
ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಒಂದು ವರ್ಗದ ಜನರು, ಧನಾಡ್ಯರು ಹಾಗೂ ಪ್ರತಿಪಕ್ಷ ಬಿಜೆಪಿ ಸಮೀಕ್ಷೆಯನ್ನು ಹೀನಯಿಸಿದ್ದಲ್ಲದೆ, ಸಮಾಜವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ. ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಸ್ನೇಹಿತರಾದ ಎಚ್.ಎಚ್. ರೇಣುಕಾರಾಧ್ಯ ಅವರ ಅನುಭವವು ಜಾತಿ ತನ್ನ ಬೇರನ್ನು ಎಷ್ಟು ಆಳವಾಗಿ ಬಿಟ್ಟಿದೆ ಎಂಬು ದನ್ನು ತೋರಿಸಿಕೊಡುತ್ತದೆ. ಇದೇ ಹೊತ್ತಿನಲ್ಲಿ ಅಧ್ಯಯನವೊಂದು ನಗರಗಳಲ್ಲಿ ಪೌರತ್ವವು ಕಾಗದದ ಮೇಲೆ ಮಾತ್ರ ಸಮಾನವಾಗಿದೆ; ಆದರೆ, ಆಚರಣೆಯಲ್ಲಿ ಅಸಮಾನವಾಗಿದೆ ಎಂದು ಹೇಳಿದೆ. ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರವು […]
ಸುಪ್ರೀಂ ಕೋರ್ಟಿಗೆ ಭಿನ್ನಮತದ ಮೆರುಗು
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನವು ಸನಾತನ ಮನಸ್ಥಿತಿಯ ಗಂಭೀರ ಪ್ರಕರಣ. ಸನಾತನ ಧರ್ಮಕ್ಕೆ ಅಪಮಾನ ವನ್ನು ಸಹಿಸುವುದಿಲ್ಲ ಎಂದು ಈ ಪ್ರಯತ್ನ ನಡೆಸಿದ ಕ್ರಿಮಿ ಹೇಳಿದೆ. ಆತ ಅಪ್ರಬುದ್ಧನಲ್ಲ; ಮಾನಸಿಕ ಅಸ್ವಸ್ಥನಲ್ಲ; ಅಕ್ಷರಸ್ಥ ಮತ್ತು ವೃತ್ತಿಯಲ್ಲಿ ವಕೀಲ. ನ್ಯಾಯಾಲಯದ ತೀರ್ಮಾನ ತಮ್ಮ ಧರ್ಮಕ್ಕೆ ವಿರುದ್ಧವಾಗಿದೆ ಎನ್ನುವ ಅಸಹನೆಯು ಗುಂಪು ಹಲ್ಲೆಗಳು ಮತ್ತು ಬುಲ್ಡೋಜರ್ ನ್ಯಾಯದ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರಜಾಸತ್ತೆಗೆ ಧಕ್ಕೆಯುಂಟು ಮಾಡುತ್ತಿದೆ. ದೇಶದ ನಾಯಕತ್ವ ವಹಿಸಿದವರ […]
ಸಂರಕ್ಷಣೆಯ ದಣಿವರಿಯದ ಧ್ವನಿ ಮೌನವಾಯಿತು
ಹವಾಮಾನ ಬದಲಾವಣೆ, ಯುದ್ಧ, ಸಂಪನ್ಮೂಲಗಳ ಬರಿದಾಗುವಿಕೆ ಸೇರಿದಂತೆ ಹೆಚ್ಚುತ್ತಿರುವ ಜಾಗತಿಕ ಬಿಕ್ಕಟ್ಟುಗಳ ನಡುವೆ ಸಂರಕ್ಷಣೆಗಾಗಿ ದಣಿವರಿಯದೆ ದುಡಿಯುತ್ತಿದ್ದ ಜೇನ್ ಗೂಡಾಲ್(91) ಇತ್ತೀಚೆಗೆ ಮೃತಪಟ್ಟರು. ಅವರ ದೀರ್ಘಕಾಲೀನ ಸಂರಕ್ಷಣೆ ಕಾರ್ಯಗಳು ಪ್ರಾಮುಖಿ(ಪ್ರೈಮೇಟ್) ಸ್ತನಿಗಳ ಅಧ್ಯಯನ ಕ್ಷೇತ್ರದಲ್ಲಿ ಕ್ರಾಂತಿಗೆ ಕಾರಣವಾದವು. ಚಿಂಪಾಂಜಿಗಳ ಜೀವನವಿವರಗಳನ್ನು ದಾಖಲಿಸಿ, ಬಹಿರಂಗಪಡಿಸಿದ ಅವರು ಆಧುನಿಕ ಜಗತ್ತಿಗೆ ಭರವಸೆಯ ಭಾಷೆಯೊಂದನ್ನು ನೀಡಿದರು. ಪ್ರಸಿದ್ಧ ಮಾನವಶಾಸ್ತ್ರಜ್ಞ ಲೂಯಿಸ್ ಸೇಮೋರ್ ಬಝೆಟ್ ಲೀಕಿ ಅವರ ಬಳಿ ಕೆಲಸ ಮಾಡಲು ನಿರ್ಧರಿಸಿ, ಜುಲೈ 1960ರಲ್ಲಿ ತಾಂಜಾನಿಯಾದ ತಾಂಗನಿಕಾ ಸರೋವರದ ತೀರದಲ್ಲಿರುವ ಗೊಂಬೆ […]
ಲಡಾಖಿನ ಗಾಯಗಳು ಮಾಯುವುದು ಎಂದು?
ಕಾಶ್ಮೀರ-ಜಮ್ಮು, ಲಡಾಖ್ ಸೇರಿದಂತೆ ಹಿಮಾವೃತ ಪರ್ವತಗಳು ಮತ್ತು ಅಲ್ಲಿನ ವಾಸಿಗಳು ಗಾಯಗೊಂಡಿದ್ದಾರೆ. ದೇಶದ ರಕ್ಷಣಾ ಕಾರ್ಯತಂತ್ರದ ದೃಷ್ಟಿಯಲ್ಲಿ ಲಡಾಖ್ ವಿಶಿಷ್ಟ ಸ್ಥಾನ ಹೊಂದಿದೆ; ಪಶ್ಚಿಮದಲ್ಲಿ ಪಾಕಿಸ್ತಾನ ಆಕ್ರಮಿತ ಪ್ರದೇಶ(ಪಿಒಕೆ) ಮತ್ತು ಪೂರ್ವದಲ್ಲಿ ಚೀನಾ ನಿಯಂತ್ರಿತ ಟಿಬೆಟ್ ಇದೆ. ದೇಶದ ಉತ್ತರ ಗಡಿಯನ್ನು ಲಡಾಖಿನ ಹಿಮಭರಿತ ಶಿಖರಗಳು ಮತ್ತು ಕಣಿವೆಗಳು ಬಹಳ ಹಿಂದಿನಿಂದಲೂ ಕಾಯ್ದುಕೊಂಡಿದೆ. ಆದರೆ, ಇಂದು ಲಡಾಖ್ ಜನರಲ್ಲಿ ಅಸಮಾಧಾನ ಕುದಿಯುತ್ತಿದೆ. ಲೆಹ್ ಅಪೆಕ್ಸ್ ಬಾಡಿ(ಎಲ್ಎಬಿ) ಮಾತುಕತೆಯಿಂದ ಹಿಂದೆ ಸರಿದಿರುವುದರಿಂದ, ಎಲ್ಲವೂ ಅಯೋಮಯವಾಗಿದೆ. ಕೇಂದ್ರ ಸರ್ಕಾರ ಆಗಸ್ಟ್ […]
ಸಂರಕ್ಷಣೆ ಕಾಯಿದೆಗಳು ನಿಶ್ಶಕ್ತ : ಭ್ರಷ್ಟಾಚಾರ, ಉದ್ಯಮಕ್ಕೆ ಕಾಡುಗಳ ಬಲಿ
ಆಗುಂಬೆಯ ಅರಣ್ಯದಲ್ಲಿ ಕಾಳಿಂಗ ಸರ್ಪಗಳ ದುರ್ಬಳಕೆ ಬಹಿರಂಗಗೊಂಡು ಈಸಂಬಂಧ ದೂರು ಸಲ್ಲಿಕೆಯಾಗಿದ್ದರೂ, ಅರಣ್ಯ ಇಲಾಖೆ-ಸರ್ಕಾರ ಮೌನವಾಗಿವೆ; ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್)ಯ ದೇವದಾರಿ ಗಣಿ ವಿರುದ್ಧ ಗ್ರಾಮಸಭೆ ನಿರ್ಣಯ ಕೈಗೊಂಡಿದೆ. ಕರ್ನಾಟಕ ವಿದ್ಯುತ್ ನಿಗಮ ಯೋಜಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್(ಪಿಎಸ್ಪಿ) ಕುರಿತ ಸಾರ್ವಜನಿಕ ಅಹವಾಲು ಸಭೆಯಲ್ಲಿ ಯೋಜನೆ ವಿರುದ್ಧ ಸುಮಾರು 10 ಸಾವಿರ ಅಹವಾಲುಗಳು ಸಲ್ಲಿಕೆಯಾಗಿವೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಜನ ಎಚ್ಚರಿಸಿದ್ದಾರೆ. ದೇಶದೆಲ್ಲೆಡೆ ಅರಣ್ಯಗಳು ಉದ್ಯಮಕ್ಕೆ, ಭ್ರಷ್ಟಾಚಾರಕ್ಕೆ ಬಲಿಯಾಗುತ್ತಿವೆ. ಸಂಪನ್ಮೂಲ ಸಮೃದ್ಧ ಛತ್ತೀಸ್ಗಢ ರಾಜ್ಯದಲ್ಲಿ […]
ಅರುಂಧತಿ ಆತ್ಮಕಥನ: ಮೇರಿ ಅವರ ಕ್ರಾಂತಿ ಇನ್ನೂ ಅಪೂರ್ಣ
ನರ್ಮದಾ ಆಂದೋಲನ ಕುರಿತ ಅರುಂಧತಿ ರಾಯ್ ಅವರ ಲೇಖನಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಬ್ರಿಟಿಷ್ ಲೇಖಕ ಮತ್ತು ಸಾಂಸ್ಕೃತಿಕ ಚಿಂತಕ ಜಾನ್ ಬರ್ಗರ್, ʻನಿಮ್ಮ ಕಾದಂಬರಿಗಳು ಮತ್ತು ಕಾದಂಬರಿಯೇತರ ಬರಹಗಳು ನಿಮ್ಮೆರಡು ಕಾಲುಗಳಂತೆ ಜಗತ್ತಿನೆಲ್ಲೆಡೆ ಸುತ್ತುತ್ತವೆʼ ಎಂದು ಹೇಳಿದ್ದರು. ಇದನ್ನು ʻಮದರ್ ಮೇರಿ ಕಮ್ಸ್ ಟು ಮಿʼ ಹೊತ್ತಗೆಯಲ್ಲಿ ಉಲ್ಲೇಖಿಸಿರುವ ಅರುಂಧತಿ, ʼತಮ್ಮ ಎರಡು ರೀತಿಯ ಬರಹಗಳು ಒಂದರೊಂದಿಗೆ ಇನ್ನೊಂದು ಸಂಘರ್ಷದಲ್ಲಿ ಇಲ್ಲ ಎಂಬುದನ್ನು ಗುರುತಿಸಿದ ಕೆಲವೇ ಕೆಲವು ಜನರಲ್ಲಿ ಬರ್ಗರ್ ಒಬ್ಬರುʼ ಎಂದು ಹೇಳಿಕೊಂಡಿದ್ದಾರೆ. ಅರುಂಧತಿ ಅವರ […]
ಭೌಗೋಳಿಕ ಮಾನ್ಯತೆ ಮತ್ತು ಕಲಾಪ್ರಕಾರಗಳ ದುರ್ಬಳಕೆ ಸಮಸ್ಯೆ
ಇಟಲಿ ಮೂಲದ ಫ್ಯಾಷನ್ ಬ್ರಾಂಡ್ ಪ್ರಾಡಾ, ಕೊಲ್ಲಾಪುರ ಚಪ್ಪಲಿ ಮತ್ತು ಅಸ್ಸಾಂನ ಬೋಡೋಲ್ಯಾಂಡ್ ಟೆರಿಟೋರಿಯಲ್ ರೀಜನ್(ಬಿಟಿಆರ್) ಮಂಡಳಿಯ ಚುನಾವಣೆ; ಈ ಮೂರನ್ನು ಒಂದೆಳೆಯಲ್ಲಿ ಪೋಣಿಸಿದ ಸಂಗತಿಯೊಂದು ಇದೆ- ಭೌಗೋಳಿಕ ಮಾನ್ಯತೆ(ಜಿಯಾಗ್ರಫಿಕಲ್ ಇಂಡಿಕೇಷನ್, ಜಿಐ). ಮಿಲಾನ್ ಫ್ಯಾಷನ್ ಮೇಳದಲ್ಲಿ ಕೊಲ್ಲಾಪುರಿ ಚಪ್ಪಲಿಯನ್ನು ಹೋಲುವ ವಿನ್ಯಾಸವೊಂದನ್ನು ಪ್ರಾಡಾ ಪ್ರದರ್ಶಿಸಿತ್ತು. ದೇಶಿ ಉತ್ಪನ್ನವನ್ನು ನಕಲು ಮಾಡಲಾಗಿದೆ. ಇದು ʻದೇಶದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳ ದುರ್ಬಳಕೆʼ ಎಂದು ವ್ಯಾಪಕ ಟೀಕೆಗೆ ಒಳಗಾಯಿತು. ʻಜಿಐ ಉಲ್ಲಂಘನೆ ಆಗಿದೆʼ ಎಂದು ಲಿಡ್ಕರ್(ಡಾ.ಬಾಬು ಜಗಜೀವನ್ರಾಂ […]

