Author: Rutha Editor

Journalist,Translator,avid bibliophile

ಲ್ಯಾಟರಲ್‌ ಎಂಟ್ರಿಯೂ, ಐಎಎಸ್‌ ವ್ಯವಸ್ಥೆಯೂ………..

ಕ್ರೋನಾಲಜಿ ಇಂತಿದೆ: ಆಗಸ್ಟ್‌ 17ರಂದು ಕೇಂದ್ರ ನಾಗರಿಕ ಸೇವೆಗಳ ಆಯೋಗ(ಯುಪಿಎಸ್‌ಸಿ) ವಿವಿಧ ಮಂತ್ರಾಲಯಗಳ 45 ಜಂಟಿ ಕಾರ್ಯದರ್ಶಿ, ನಿರ್ದೇಶಕ ಹಾಗೂ ಉಪ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಜಾಹೀರಾತು ಪ್ರಕಟಿಸಿತು. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ʻಇದು ರಾಷ್ಟ್ರವಿರೋಧಿ ಹೆಜ್ಜೆಯಾಗಿದ್ದು, ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ-ವರ್ಗ ಹಾಗೂ ಒಬಿಸಿಗಳ ಮೀಸಲು ಕಿತ್ತುಕೊಳ್ಳುವ ಪ್ರಯತ್ನʼ ಎಂದು ಟೀಕಿಸಿದರು. ಎನ್‌ಡಿಎ 3.0ಯ ಮೈತ್ರಿ ಪಕ್ಷಗಳಾದ ಲೋಕ ಜನಶಕ್ತಿ ಪಾರ್ಟಿಯ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಮತ್ತು ಜೆಡಿಯು ಕೂಡ ಪ್ರಸ್ತಾವವನ್ನು […]

ಹಳಿ ತಪ್ಪುತ್ತಿರುವ ರೈಲುಗಳಿಗೆ ದಾರಿ ಯಾವುದು?

ಇತ್ತೀಚೆಗೆ ಕಾನ್ಪುರದ ಬಳಿ ಸಬರಮತಿ ಎಕ್ಸ್‌ಪ್ರೆಸ್‌ನ 20 ಬೋಗಿಗಳು ಹಳಿ ತಪ್ಪಿದವು. ಅದಕ್ಕಿಂತ ಮೊದಲು ಜುಲೈ 18ರಂದು ಉತ್ತರಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರೂಗಢ ಎಕ್ಸ್‌ಪ್ರೆಸ್‌(ಇಬ್ಬರು ಸಾವು, ಹಲವರಿಗೆ ಗಾಯ), ಜುಲೈ 29ರಂದು ಜಾರ್ಖಂಡದಲ್ಲಿ ಹೌರಾ-ಮುಂಬೈ ಎಕ್ಸ್‌ಪ್ರೆಸ್‌(ಇಬ್ಬರು ಸಾವು, 20 ಮಂದಿಗೆ ಗಾಯ) ಹಾಗೂ ಜುಲೈ 31ರಂದು ಪಶ್ಚಿಮ ಬಂಗಾಳದ ರಂಗಪಾನಿ ರೈಲ್ವೆ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿನ ಎರಡು ವ್ಯಾಗನ್‌ಗಳು ಹಳಿ ತಪ್ಪಿ ಉರುಳಿದವು. 2024ರ ಮೊದಲ 7 ತಿಂಗಳಿನಲ್ಲಿ ರೈಲು ಹಳಿ ತಪ್ಪಿದ 19 ಪ್ರಕರಣಗಳು(ಜನವರಿಯಲ್ಲಿ […]

ನೀಟ್‌ ಎನ್ನುವುದು ಒಂದು ರಾಜಕೀಯ ಕಾರ್ಯಕ್ರಮ

2017ರಲ್ಲಿ ತಮಿಳುನಾಡು ಪಿಯು ಪರೀಕ್ಷೆಯಲ್ಲಿ 1,176(1,200) ಅಂಕ ಗಳಿಸಿದ ಎಸ್.‌ಅನಿತಾ ವೈದ್ಯೆಯಾಗುವ ಕನಸು ಕಂಡವರು. ಆದರೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ಪಾಸ್‌‌ ಆಗಲಿಲ್ಲ. ಸಾಕಷ್ಟು ಹೋರಾಟದ ಬಳಿಕ ಆತ್ಮಹತ್ಯೆ ಮಾಡಿಕೊಂಡರು. ನೀಟ್‌ 720 ಅಂಕಗಳ 3 ಗಂಟೆ ಅವಧಿಯ ಪರೀಕ್ಷೆ. ಬಹು ಆಯ್ಕೆಯ ಪ್ರಶ್ನೆಗಳು ಇರುತ್ತವೆ. ತಪ್ಪು ಉತ್ತರಕ್ಕೆ ಅಂಕಗಳನ್ನು ಕಳೆಯಲಾಗುತ್ತದೆ. ಮೇ 5 ರಂದು ನಡೆದ ನೀಟ್‌ ಪರೀಕ್ಷೆಯಲ್ಲಿ 24,06,079 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಫಲಿತಾಂಶ ಬಂದಾಗ 67 ಮಂದಿ 720/720 ಅಂಕ ಗಳಿಸಿದರು. […]

ಹವಾಮಾನ ಬದಲಾವಣೆ ವಿರುದ್ಧ ರಕ್ಷಣೆಗೆ ಕಾನೂನಿಗೆ ಮುನ್ನುಡಿ

ಅಂಕೋಲಾ ಬಳಿ ಗುಡ್ಡ ಜರಿದು ನದಿಯಲ್ಲಿ ತೇಲಿಹೋದ ಮತ್ತು ಮಣ್ಣಿನಲ್ಲಿ ಮುಚ್ಚಿಹೋದ 11 ಮಂದಿಗೆ ಕಣ್ಣೀರಾಗೋಣ. 90 ಡಿಗ್ರಿ ಕೋನದಲ್ಲಿ ಗುಡ್ಡೆ ಕೆತ್ತಿ ರಸ್ತೆ ನಿರ್ಮಿಸಿದ ಗುತ್ತಿಗೆದಾರ- ಎಂಜಿನಿಯರ್‌ಗಳಿಗೆ ವಿಷಾದ ವ್ಯಕ್ತಪಡಿಸೋಣ. ಇಂಥ ಮಾನವ ಪ್ರೇರಿತ ಪರಿಸರ ದುರಂತಗಳ ನಡುವೆಯೇ ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟಗಳು, ಹಿಮಾಲಯ, ವಿಂಧ್ಯ, ಅರಾವಳಿ ಮತ್ತಿತರ ಬೆಟ್ಟಸಾಲುಗಳ ಜೊತೆಗೆ ಮನುಷ್ಯರನ್ನೂ ಕಾಪಿಡಬಲ್ಲ ಸಣ್ಣದೊಂದು ಬೆಳಕಿನ ಕಿಂಡಿಯೊಂದು ಕಾಣಿಸಿಕೊಂಡಿದೆ. 2024-25ರ ಬಜೆಟ್‌ಗೆ ಮುನ್ನ ಮಂಡನೆಯಾದ ಆರ್ಥಿಕ ಸಮೀಕ್ಷೆ ಕೂಡ ಹವಾಮಾನ ಬದಲಾವಣೆ ಮತ್ತು […]

ಅತಿ ಶ್ರೀಮಂತರಿಗೆ ಅಧಿಕ ತೆರಿಗೆ ವಿಧಿಸಲು ಇದು ಸರಿಯಾದ ಕಾಲ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಮಂಡಿಸಿದ ಕೇಂದ್ರ ಬಜೆಟ್‌, ಜಿ-20ರ ಬ್ರೆಜಿಲ್‌ಅಧ್ಯಕ್ಷತೆಯಡಿ ಮುಂಚೂಣಿಗೆ ಬಂದಿರುವ ಐಶ್ವರ್ಯ ತೆರಿಗೆ ಹಾಗೂ ಅನಂತ್‌ಅಂಬಾನಿ ವಿವಾಹ-ಇವೆಲ್ಲವೂ ಪರಸ್ಪರ ಜೋಡಿಸಲ್ಪಟ್ಟ ಘಟನೆಗಳು. ಕಳೆದ ಸಾಲಿನ ಜಿ-20 ಸಮಾವೇಶದ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿತ್ತು ಹಾಗೂ ಅದನ್ನು ಮೋದಿ ಅವರ ಅಭೂತಪೂರ್ವ ಸಾಧನೆ ಎಂಬಂತೆ ಬಿಂಬಿಸಲಾಯಿತು. ಈ ಸಂಬಂಧ ಸಮಾವೇಶದ ವೇಳೆ ಬಿಡುಗಡೆಯಾದ ದ ರಿಸರ್ಚ್‌ಅಂಡ್‌ಇನ್ಫರ್ಮೇಷನ್‌ಸಿಸ್ಟಮ್‌ಫಾರ್‌ಡೆವಲಪಿಂಗ್‌ಕಂಟ್ರೀಸ್‌ಪ್ರಕಟಿಸಿದ 171 ಪುಟಗಳ ಇ-ದಾಖಲೆ ʼದ ಗ್ರಾಂಡ್‌ಸಕ್ಸೆಸ್‌ಆಫ್‌ಜಿ-20 ಭಾರತ್‌ಪ್ರೆಸಿಡೆನ್ಸಿ: ವಿಷನರಿ ಲೀಡರ್‌ಶಿಪ್‌, ಇನ್‌ಕ್ಲೂಸಿವ್‌ಅಪ್ರೋಚ್‌ʼ ನಲ್ಲಿ ಸರ್ಕಾರಿ ಅಧಿಕಾರಿಗಳು/ಕೃಪಾಪೋಷಿತ ಲೇಖಕರು ಬರೆದ ಲೇಖನಗಳಿದ್ದು, […]

ನರನು ಕೊಲ್ಲಲು, ಹರನೂ ಕಾಯಲಾರನು

ವಯನಾಡಿನ ಮನುಷ್ಯ ನಿರ್ಮಿತ ಭೂಕುಸಿತದಲ್ಲಿ 231 ಮಂದಿ ಮೃತಪಟ್ಟಿದ್ದು, 130 ಮಂದಿ ನಾಪತ್ತೆಯಾಗಿದ್ದಾರೆ (ಆಗಸ್ಟ್‌ 13ರ ಮಾಹಿತಿ). ಈ ಭೀಕರ ದುರಂತದ ಬಳಿಕ ಪಶ್ಚಿಮ ಘಟ್ಟಗಳ ಸಂರಕ್ಷಣೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಆರು ರಾಜ್ಯಗಳಲ್ಲಿ ಹರಡಿಕೊಂಡಿರುವ ಈ ಪರ್ವತ ಶ್ರೇಣಿ ಈ ರಾಜ್ಯಗಳ ಜೀವದಾಯಿಯಾಗಿದ್ದರೂ, ತೀವ್ರ ಶೋಷಣೆಗೆ ಒಳಗಾಗಿದ್ದು, ಕೆಲವು ವರ್ಷಗಳಿಂದ ಉಗ್ರವಾಗಿ ಪ್ರತಿಕ್ರಿಯಿಸುತ್ತಿದೆ. ಪ್ರೊ. ಮಾಧವ ಗಾಡ್ಗೀಳ್‌ ಅವರು ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ನೀಡಿದ್ದ ಅತ್ಯಂತ ನಿಖರ ಹಾಗೂ ವೈಜ್ಞಾನಿಕವಾಗಿ ಪರಿಪೂರ್ಣವಾಗಿದ್ದ ವರದಿಯನ್ನು ಜನರ […]

ಯುರೋಪಿನಲ್ಲಿ ಬಲಪಂಥೀಯರ ಪ್ರಾಬಲ್ಯ ಹೆಚ್ಚಳ

ಯುರೋ 2024 ಫುಟ್ಬಾಲ್‌ ಟೂರ್ನಿ ಆರಂಭಕ್ಕೆ ಮುನ್ನ ಫ್ರಾನ್ಸ್‌ ತಂಡದ ನಾಯಕ ಕೈಲಿಯನ್‌ ಎಂಬಾಪ್ಪೆ ಪತ್ರಿಕಾಗೋಷ್ಟಿಯಲ್ಲಿ, ʻತೀವ್ರವಾದಿಗಳು ಅಧಿಕಾರದ ಹೊಸ್ತಿಲಲ್ಲಿ ಇದ್ದಾರೆ. ನನ್ನ ಮೌಲ್ಯ ಅಥವಾ ನಮ್ಮ ಮೌಲ್ಯ ಗಳಿಗೆ ಹೊಂದಿಕೆಯಾಗದ ದೇಶವನ್ನು ಪ್ರತಿನಿಧಿಸಲು ನಾನು ಇಚ್ಛಿಸುವುದಿಲ್ಲ,ʼ ಎಂದು ಹೇಳಿದ್ದರು. ಇನ್ನೊಂದು ಹೆಜ್ಜೆ ಮುಂದೆ ಹೋದ ಜೊತೆ ಆಟಗಾರ ಮಾರ್ಕಸ್‌ ತುರಂ, ʻಫ್ರೆಂಚರು ಲಿ ಪೆನ್‌ ಅವರ ನ್ಯಾಷನಲ್‌ ರ್ಯಾಲಿ(ಎನ್‌ಆರ್)ಪಕ್ಷ ಬಲಗೊಳ್ಳದಂತೆ ನೋಡಿಕೊಳ್ಳಬೇಕು,ʼ ಎಂದು ಒತ್ತಾಯಿಸಿದ್ದರು. ನಮ್ಮಲ್ಲಿ ಒಬ್ಬನೇ ಒಬ್ಬ ಕ್ರೀಡಾಪಟು ಇಂಥ ಹೇಳಿಕೆ ನೀಡಿದ್ದನ್ನು, ಸರ್ವಾಧಿಕಾರಿ […]

ಬಲಪಂಥೀಯತೆ: ಒಂದು ಜಾಗತಿಕ ಪಿಡುಗು

ಇಂಡಿಯ ಸೇರಿದಂತೆ ಪ್ರಜಾಪ್ರಭುತ್ವವಿರುವ ದೇಶಗಳಿಗೆ ೨೦೨೪ ಸಂಕಷ್ಟದ ವರ್ಷವಾಗಲಿದೆಯೇ? ಜಗತ್ತಿನ ದೊಡ್ಡ ಪ್ರಜಾಪ್ರಭುತ್ವಗಳಾದ ಇಂಡಿಯ, ಅಮೆರಿಕ, ಬ್ರಿಟನ್‌, ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಥೈವಾನ್‌ ಸೇರಿದಂತೆ ಹಲವು ದೇಶಗಳಲ್ಲಿ ಚುನಾವಣೆ ನಡೆಯಬೇಕಿದೆ. ಚುನಾವಣೆಗಳು ಆವರ್ತೀಯ ಪ್ರಕ್ರಿಯೆ ಎಂದು ಹೇಳಿಬಿಡಬಹುದು. ಆದರೆ, ಅಂದಾಜು 2 ಶತಕೋಟಿ ಜನರು ಪ್ರಜ್ಞಾಪೂರ್ವಕವಾಗಿ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದು, ಈ ಆಯ್ಕೆಗಳು ದೇಶದ-ನಾಗರಿಕರ ಸಮಸ್ಯೆಗಳನ್ನು ಬಗೆಹರಿಸಲು ನೆರವಾಗುತ್ತವೆಯೇ ಎನ್ನುವುದು ಪ್ರಶ್ನೆ. ಮತ ಚಲಾವಣೆಯಂಥ ಸಹಜ ಪ್ರಕ್ರಿಯೆಯ ಫಲಿತಾಂಶಗಳು ತಾರ್ಕಿಕವಾಗಿರುತ್ತವೆ ಎಂದು ಭಾವಿಸಬೇಕಿಲ್ಲ. ಅಮೆರಿಕದ ಪ್ರಜಾಸತ್ತೆ […]

ನೋರಾ

– ವಿಜಯಲಕ್ಷ್ಮೀ ದಾನರಡ್ಡಿ   “ನಿನ್ನಲ್ಲಿ ಶಕ್ತಿ ಇಲ್ಲ ಎಂದು ಹೇಳಲಿಲ್ಲ. ಬರಹವನ್ನು ಗಂಭೀರವಾಗಿ ತೆಗೆದುಕೊಳ್ಳಲು ಸೂಚಿಸಿದೆ. ಒಳ್ಳೆಯ ಬರಹಕ್ಕೆ ಹೆಚ್ಚು ಶ್ರಮ ಹಾಕಬೇಕು” ಇವೇ ಸಾಲುಗಳು ಹಗಲು-ರಾತ್ರಿಯೆನ್ನದೆ ನನ್ನನ್ನು ಕಾಡಿ ನಿದ್ರಾಹೀನಳನ್ನಾಗಿ ಮಾಡಿದ್ದವು. ನಾನು ಮಾಡಿದ ಬರಹದ ಬಗ್ಗೆ ನನಗೇ ತೃಪ್ತಿ ಇಲ್ಲವೆಂದಾಗ ನನ್ನ ಗುರುಗಳಿಂದ ಅದನ್ನು ಒಪ್ಪಿಕೊಳ್ಳಲು ಹೇಗೆ ಸಾಧ್ಯ! ಯೋಚಿಸುತ್ತಲೇ ಮನಸ್ಸಿಲ್ಲದ ಮನಸ್ಸಿನಿಂದ ತಟ್ಟೆಯಲ್ಲಿ ಅನ್ನ ಸಾರು ಹಾಕಿಕೊಂಡು ಊಟಕ್ಕೆ ಕುಳಿತೆನು. ನನ್ನ ಗುರುಗಳು ನನ್ನ ಮೇಲೆ ಅಷ್ಟು ನಂಬಿಕೆ ಇಟ್ಟು ನೀಡಿದ ಒಂದೇ […]

Back To Top