Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

ನೀಟ್‌ ಅವ್ಯವಸ್ಥೆ: ನಿರ್ಲಕ್ಷ್ಯ, ಉತ್ತರದಾಯಿತ್ವವಿಲ್ಲದ ಆಡಳಿತದ ಫಲ

ಮೇ 3, 2026ರಂದು ನೀಟ್-ಯುಜಿಸಿ(ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತೆ ಪರೀಕ್ಷೆ) ಪರೀಕ್ಷೆ ನಡೆದ 9 ದಿನಗಳ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್‌ಟಿಎ) ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸಿತು; ಸರ್ಕಾರ ಸಿಬಿಐ ತನಿಖೆಗೆ ಮುಂದಾಯಿತು. ವೈದ್ಯರ ಸಂಘಟನೆಯೊಂದು ಸುಪ್ರೀಂ ಕೋರ್ಟ್‌ ಕದ ತಟ್ಟಿತು. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಒಂದು ವಿಷವೃತ್ತ. ರಾಜಕೀಯ ನಾಯಕರ ಖಾಸಗಿ ವೈದ್ಯ ಕಾಲೇಜುಗಳು, ಹಲವು ಸಾವಿರ ಕೋಟಿ ರೂ. ಮೌಲ್ಯದ ಕೋಚಿಂಗ್‌ ಉದ್ಯಮ ಮತ್ತು ವೈದ್ಯ ಪದವಿಯ ಸಾಮಾಜಿಕ ಪ್ರತಿಷ್ಠೆ ಇದರಲ್ಲಿ ಕೈ […]

ಬಿಜೆಪಿ ಸರಣಿ ವಿಜಯ: ಕಾಂಗ್ರೆಸ್‌, ಪ್ರತಿಪಕ್ಷಗಳ ಕಾರ್ಯನೀತಿ ಏನು?

ಐದು ರಾಜ್ಯಗಳ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಹಾಗೂ ಕೇರಳದಲ್ಲಿ ಎಡ ರಂಗ ಸೋಲುಂಡಿವೆ. ಅಸ್ಸಾಮಿನಲ್ಲಿ ಎನ್‌ಡಿಎ 3ನೇ ಅವಧಿಗೆ ಹಾಗೂ ಪುದು ಚೆರಿಯಲ್ಲಿ ಎನ್.ರಂಗಸ್ವಾಮಿ ಮತ್ತೊಮ್ಮೆ ಗದ್ದುಗೆ ಹಿಡಿದಿದ್ದಾರೆ. ಪ್ರತಿಪಕ್ಷಗಳಿಗೆ 2024ರ ಲೋಕಸಭೆ ಚುನಾವಣೆ ತೆರೆದಿದ್ದ ಬಾಗಿಲು ಈಗ ಬಹುತೇಕ ಮುಚ್ಚಿಹೋಗಿದೆ; ಧರ್ಮ, ಭಾಷೆ ಮತ್ತು ಜಾತಿಗಳ ವಿಸ್ತೃತ ವೈವಿಧ್ಯವಿದ್ದರೂ, ಶೇ.80 ರಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ ಮತ್ತು ಕಾಂಗ್ರೆಸ್‌ ನಾಲ್ಕು ರಾಜ್ಯಗಳಿಗೆ ಸೀಮಿತವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ […]

ಶತಕ ಬಾರಿಸಿದ ಸರ್‌ ಡೇವಿಡ್‌ ಅಟೆನ್‌ಬರೋ

ʻಹಲ್ಲು ಬಹಳ ದೊಡ್ಡ ಇದೆʼ ಎಂಬ ಕಾರಣಕ್ಕೆ ಕ್ಯಾಮೆರಾ ಎದುರು ಅವಕಾಶ ಸಿಗದ ಯುವಕನೊಬ್ಬ 70 ವರ್ಷ ಕಾಲ ವನ್ಯಜೀವಿಗಳ ಕುರಿತು ನಿರಂತರವಾಗಿ ಕಾರ್ಯಕ್ರಮ ನೀಡುತ್ತ ಅರಿವು ಮೂಡಿ ಸಿದ್ದು ಒಂದು ಸೋಜಿಗ. ಅವರೇ ಸರ್‌ ಡೇವಿಡ್‌ ಅಟೆನ್‌ಬರೋ. ಸಾರ್ಥಕ ನೂರು ವರ್ಷ ಪೂರೈಸಿರುವ ಅವರು ಕಳೆದ 70 ವರ್ಷದಿಂದ ಬ್ರಿಟನ್‌ ಮಾತ್ರವಲ್ಲದೆ ಜಗತ್ತಿನ ಎಲ್ಲೆಡೆಯ ಜನರನ್ನು ವನ್ಯಜೀವಿ ಪ್ರಪಂಚಕ್ಕೆ ಪರಿಚಯಿಸಿದ ಶ್ರೇಷ್ಠ ಪ್ರಸಾರಕರಲ್ಲಿ ಒಬ್ಬರು. ತಂದೆ ಫ್ರೆಡೆರಿಕ್‌ ಅಟೆನ್‌ಬರೋ, ಲೀಸೆಸ್ಟರ್‌ ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ. ತಾಯಿ […]

ತೂಗುಯ್ಯಾಲೆಯಲ್ಲಿರುವ ಆಪ್‌ ಮತ್ತು ಕೇಜ್ರಿವಾಲ್‌ ಭವಿಷ್ಯ

2021-22ರ ದೆಹಲಿ ಮದ್ಯ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನಿಶ್‌ ಸಿಸೋಡಿಯಾ ಸೇರಿದಂತೆ 23 ಮಂದಿಗೆ ನ್ಯಾಯಾಲಯ ಉಪಶಮನ ನೀಡಿದೆ. 100 ಕೋಟಿ ಲಂಚ ಪಡೆಯಲಾಗಿದೆ ಎಂಬುದು ಊಹಾತ್ಮಕ ಮತ್ತು ಅದಕ್ಕೆ ಪುರಾವೆ ನೀಡುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. ಇದೇ ಹೊತ್ತಿನಲ್ಲಿ 7 ಸಂಸದರು ಆಮ್‌ ಆದ್ಮಿ ಪಕ್ಷವನ್ನು ತೊರೆದು, ಬಿಜೆಪಿ ಸೇರಿದ್ದಾರೆ. 2027ರಲ್ಲಿ ನಡೆಯಲಿರುವ ಪಂಜಾಬ್‌ ವಿಧಾನಸಭೆ ಚುನಾವಣೆ ಗೆ ಬಿಜೆಪಿ ಹತಾರಗಳನ್ನು ಸಜ್ಜುಗೊಳಿಸಲು ಆರಂಭಿಸಿದೆ. ದೆಹಲಿ ವಿಧಾನಸಭೆ ಚುನಾವಣೆ ವೇಳೆ ಮಫ್ಲರ್‌ ಧರಿಸಿ, ಕೆಮ್ಮುತ್ತ, ಭ್ರಷ್ಟಾಚಾರ […]

ಐಟಿ ಕಾಯಿದೆಗೆ ಮತ್ತೊಂದು ತಿದ್ದುಪಡಿ: ಹಳ್ಳ ಹಿಡಿದ ಅಭಿವ್ಯಕ್ತಿ ಸ್ವಾತಂತ್ರ್ಯ

ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ(ಎಂಇಐಟಿವೈ)ವು ಮಾಹಿತಿ ತಂತ್ರಜ್ಞಾನ(ಮಧ್ಯವರ್ತಿ ಮಾರ್ಗಸೂಚಿಗಳು ಹಾಗೂ ಡಿಜಿಟಲ್‌ ಮಾಧ್ಯಮ ನೀತಿಸಂಹಿತೆ) ನಿಯಮಗಳು 2021ಕ್ಕೆ ಮತ್ತೊಂದು ತಿದ್ದುಪಡಿ ತರಲು ಕರಡು ಪ್ರಸ್ತಾಪವನ್ನು ಪ್ರಕಟಿಸಿದೆ. ಒಂದು ವೇಳೆ ಅಂಗೀಕೃತಗೊಂಡರೆ, ವಾಕ್‌ ಸ್ವಾತಂತ್ರ್ಯದ ಮೇಲಿನ ನಿರ್ಬಂಧ ಇನ್ನಷ್ಟು ಬಿಗಿ ಯಾಗಲಿದೆ. ಶಾಸಕಾಂಗದ ಸಮ್ಮತಿ ಇಲ್ಲದೆ, ಸಂಸತ್ತಿನಲ್ಲಿ ಚರ್ಚೆ ನಡೆಸದೆ ಜನರ ಮೂಲಭೂತ ಹಕ್ಕುಗಳನ್ನು ಕಸಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಐಟಿ ಕಾಯಿದೆಯನ್ನು ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಸುಪ್ರೀಂ ಕೋರ್ಟ್ ಆನ್‌ಲೈನ್ ಗೋಪ್ಯತೆ ಮತ್ತು […]

ಅಸ್ಸಾಂ: ಮಾಘ್‌ ಬಿಹು ಬಳಿಕ ಸರ್ಕಾರ ರಚಿಸುವವರು ಯಾರು?

ಅಸ್ಸಾಂ ವಿಧಾನಸಭೆಯ 126 ಕ್ಷೇತ್ರಗಳ 789 ಅಭ್ಯರ್ಥಿಗಳ ಹಣೆಬರಹ ವಿದ್ಯುನ್ಮಾನ ಮತಯಂತ್ರಗಳಲ್ಲಿ ಸಂಗ್ರಹವಾಗಿದೆ. 25 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆದಿದೆ. ಹೊಸ ವರ್ಷವನ್ನು ಸ್ವಾಗತಿಸಲು ನಡೆಯುವ ಮಾಘ್‌ ಬಿಹು 15ರಿಂದ ಆರಂಭವಾಗಲಿದ್ದು, ಹಬ್ಬ ಮುಗಿದ ಬಳಿಕ ಹೊಸ ಸರ್ಕಾರ ರಚನೆಯಾಗಲಿದೆ. ನಿರಂತರ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌, ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಹಣಿಯುವುದೇ? ರಾಜ್ಯದ 35 ಜಿಲ್ಲೆಗಳನ್ನು 5 ವಿಭಾಗವಾಗಿ ವಿಭಜಿಸಲಾಗಿದೆ; ಕೆಳ ಅಸ್ಸಾಂ, ಉತ್ತರ ಅಸ್ಸಾಂ, ಮೇಲಣ ಅಸ್ಸಾಂ, ಕೇಂದ್ರ […]

ಮಮತಾ ಬ್ಯಾನರ್ಜಿ ಅವರ ʻಆಟʼ ಈ ಚುನಾವಣೆಯಲ್ಲೂ ನಡೆಯುವುದೇ?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಎಸ್‌ಐಆರ್‌, ಆಡಳಿತ ವಿರೋಧಿ ಅಲೆ, ರಾಜ್ಯಪಾಲರ ಪ್ರವೇಶ, ಕಣಕ್ಕಿಳಿದಿರುವ ಗಣ ಸಮೂಹ ಮತ್ತು ಚುನಾವಣೆ ಆಯೋಗ ಸಾರಾಸಗಟು ಅಧಿಕಾರಶಾಹಿಯನ್ನು ವರ್ಗಾಯಿಸಿರುವುದು ತೃಣಮೂಲ ಕಾಂಗ್ರೆಸ್‌ಗೆ ತಿರುಗುಬಾಣ ಆಗುವುದೇ? ಅಥವಾ, ಟಿಎಂಸಿ ಪ್ರತಿಪಾದಿಸುವ ಬಂಗಾಳಿ ಉಪರಾಷ್ಟ್ರೀಯತೆಗೆ ಜನ ಮಣೆ ಹಾಕುವರೇ? ರಾಜ್ಯದಲ್ಲಿ ಏಪ್ರಿಲ್‌ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಭಾರತೀಯ ಗೂರ್ಖಾ ಪ್ರಜಾತಾಂತ್ರಿಕ್‌ ಮೋರ್ಚಾ(ಬಿಜಿಪಿಎಂ) ಡಾರ್ಜಿಲಿಂಗ್‌ ಬೆಟ್ಟ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಟಿಎಂಸಿ ಮೈತ್ರಿಯಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ 3 ಅವಧಿಯಿಂದ […]

ಸ್ಪೀಕರ್‌, ಮುಖ್ಯ ಚುನಾವಣೆ ಆಯುಕ್ತ ಮತ್ತು ಸುಳ್ಳುಗಳ ಸುಗ್ಗಿ

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಅಂದುಕೊಂಡಂತೆ ಬಿದ್ದುಹೋಗಿದೆ. ಲೋಕಸಭೆ-ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಗೆ ಮಾತನ್ನಾಡಲು ಅವ ಕಾಶ ನೀಡದ ಹಾಗೂ ಮಾತನ್ನಾಡುತ್ತಿದ್ದಾಗ ಧ್ವನಿವರ್ಧಕ ಬಂದ್‌ ಮಾಡುವ ಸ್ಪೀಕರ್‌ಗೆ ಮುಖಭಂಗ ಆಗಿದೆ. ಇದೇ ಹೊತ್ತಿಗೆ ಪ್ರತಿಪಕ್ಷಗಳು ಮುಖ್ಯ ಚುನಾವಣೆ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರನ್ನು ಹುದ್ದೆಯಿಂದ ತೆರವುಗೊಳಿಸಬೇಕು ಎಂದು ನೋಟಿಸ್‌ ನೀಡಿವೆ. ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಹಿನ್ನೆ ಲೆಯಲ್ಲಿ ಆಯೋಗದ ಮುಖ್ಯಸ್ಥರ ಪಕ್ಷಪಾತ ಪ್ರವೃತ್ತಿಯನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ. ಹಿಂದಿನ ಎಲ್ಲ ಸ್ಪೀಕರ್‌ಗಳು […]

ನಾರಾಯಣ ಗುರುವಿನ ನೆಲದಲ್ಲಿ ಕೋಮುವಾದ ಸೋಲಲಿ

ಕೇರಳ ಈಗ ʻಕೇರಳಂʼ ಆಗಿದೆ. ಪಶ್ಚಿಮ ಬಂಗಾಳಕ್ಕಿಲ್ಲದ ಹೆಸರು ಬದಲಾವಣೆ ಭಾಗ್ಯ ರಾಜ್ಯಕ್ಕೆ ಲಭಿಸಿದೆ. ಇದೇ ಹೊತ್ತಿನಲ್ಲಿ ʻಕೇರಳ ಸ್ಟೋರಿ 2: ಗೋಸ್‌ ಬಿಯಾಂಡ್‌ʼ ಎನ್ನುವ ಸುಳ್ಳುಗಳೇ ತುಂಬಿರುವ ಪ್ರೊಪಗಾಂಡ ಸಿನೆಮಾ ಕೂಡ ಬಿಡುಗಡೆಯಾಗಿದೆ. ಈಮೂಲಕ ಬಿಜೆಪಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ತಿರುವನಂತಪುರ ಕಾರ್ಪೊರೇಷನ್‌ನಲ್ಲಿ ಮತ್ತು ಇತರೆಡೆ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಗೆಲುವು ಸಾಧಿಸಿವೆ; ಆಡಳಿತ ವಿರೋಧ ಅಲೆಯ ಹಿನ್ನೆಲೆಯಲ್ಲಿ ಎಡರಂಗ ನೇತೃತ್ವದ ಸರ್ಕಾರ ಹಿನ್ನಡೆ ಅನುಭವಿಸಿದೆ. ಪ್ರಶ್ನೆ ಏನೆಂದರೆ, ಗೆಲುವಿನ ಸಾಧ್ಯತೆ ಇರುವಾಗ […]

Back To Top