Category: ಕೃಷಿ ಗ್ರಾಮಾಭಿವೃದ್ಧಿ

ದೇಶಿ ಕೃಷಿ ಕ್ಷೇತ್ರಕ್ಕೆ ಆಮದು-ಕುಲಾಂತರಿ ಪ್ರಹಾರ

ಡೊನಾಲ್ಡ್‌ ಟ್ರಂಪ್‌ ಅಧಿಕಾರಕ್ಕೆ ಬಂದ ಬಳಿಕ ಜಾಗತಿಕ ಮಟ್ಟದಲ್ಲಿ ಅಮೆರಿಕದ ದಬ್ಬಾಳಿಕೆ ಹೆಚ್ಚಿದೆ. ಮಾಗಾ(ಮೇಕ್‌ ಅಮೆರಿಕ ಗ್ರೇಟ್‌ ಎಗೇನ್‌) ಎಂದು ಘೋಷಿಸುತ್ತ, ಕುಸಿದಿರುವ ಉತ್ಪಾದನೆ ಪ್ರವೃತ್ತಿಯನ್ನು ಪ್ರೋತ್ಸಾಹಿ ಸಲು ಬೇರೆ ದೇಶಗಳ ಕುತ್ತಿಗೆಯನ್ನು ಹಿಚುಕಲಾಗುತ್ತಿದೆ. ಪಾಶ್ಚಾತ್ಯ ದೇಶಗಳ ದಬ್ಬಾಳಿಕೆ ಮನಸ್ಥಿತಿ ಈಗಲೂ ಬದಲಾಗಿಲ್ಲ. 19ನೇ ಶತಮಾನದಲ್ಲಿ ಚೀನಾದ ದೊರೆ ದೇಶದೆಲ್ಲೆಡೆ ಅಫೀಮನ್ನು ನಿಷೇಧಿಸಿದರು. ಭಾರತದಲ್ಲಿ ಬೆಳೆದ ಅಫೀಮನ್ನು ಚೀನಾಕ್ಕೆ ಕಳಿಸಿ ಹಣ ಲೂಟಿ ಹೊಡೆಯುತ್ತಿದ್ದ ಬ್ರಿಟಿಷ್‌ ವರ್ತಕರಿಗೆ ನಷ್ಟವುಂಟಾಗಿ, ಸಿಟ್ಟಿಗೆದ್ದರು. ವ್ಯಾಪಾರ ನೀತಿಯನ್ನು ಬದಲಿಸಬೇಕು ಹಾಗೂ ಚೀನಾದ […]

ಪ್ರತಿದಿನ 2,000 ರೈತರು ಬೇಸಾಯದಿಂದ ಹೊರಗೆ

ಕರ್ನಾಟಕದ ರಾಜ್ಯ ಪಕ್ಷಿ ನೀಲಕಂಠ(ಇಂಡಿಯನ್‌ ರೋಲರ್‌, ಕೊರಾಸಿಯಸ್‌ ಬೆಂಗಾಲೆನ್ಸಿಸ್)ನ ವೈಶಿಷ್ಟ್ಯವೇನೆಂದರೆ, ಅವನು ಆಂಧ್ರಪ್ರದೇಶ, ಬಿಹಾರ ಮತ್ತು ಒಡಿಷಾದ ರಾಜ್ಯ ಪಕ್ಷಿಯೂ ಹೌದು. ಒಡಿಷಾದಲ್ಲಿ ನೀಲಕಂಠನನ್ನು ತಿಹಾ ಎಂದು ಕರೆಯುತ್ತಾರೆ. ಬೇಡಿದ್ದನ್ನು ನೀಡುತ್ತಾನೆ ಎಂದು ರೈತರು ನಂಬಿರುವುದರಿಂದ, ದಸರಾ ಹಬ್ಬದಂದು ನೀಲಕಂಠನನ್ನು ನೋಡುವ ಸಂಪ್ರದಾಯವಿದೆ. ಆದರೆ, ಈ ವರ್ಷ ಮತುಪಲಿ ಗ್ರಾಮದ ರೈತ ಪಿತಬಷಾ, ಹಕ್ಕಿ ಯನ್ನು ನೋಡಲು ಹೋಗಲಿಲ್ಲ. ಏಕೆ ಎಂಬ ಪ್ರಶ್ನೆಗೆ ʼನಾನು ಬೇಡಿಕೊಳ್ಳುವುದನ್ನು ನಿಲ್ಲಿಸಿದ್ದೇನೆʼ ಎಂಬ ಪ್ರತಿಕ್ರಿಯೆ ಬಂದಿತು. 2025ರ ಸೆಪ್ಟೆಂಬರ್‌ನಲ್ಲಿ ಸುರಿದ ನಿರಂತರ […]

ನಿಜ ನಾಗರಗಳು ಬಡವರನ್ನೇ ಕಚ್ಚುತ್ತವೆ…….

ಇಂಡಿಯ ಸೇರಿದಂತೆ ಕಡಿಮೆ-ಮಧ್ಯಮ ಆದಾಯದ ದೇಶಗಳಲ್ಲಿ ಹಾವು ಕಡಿತದಿಂದ ಉಂಟಾಗುವ ಸಾವು ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ಸಮಸ್ಯೆ. ದೇಶದಲ್ಲಿ 2024ರಲ್ಲಿ 64,000 ಮಂದಿ ಮೃತಪಟ್ಟಿದ್ದಾರೆ. ಇದು ಜಗತ್ತಿನಲ್ಲಿ ಸಂಭವಿಸುತ್ತಿರುವ ಸಾವುಗಳಲ್ಲಿ ಶೇ.80. ಇದರಿಂದಾಗಿಯೇ ದೇಶವನ್ನು ಹಾವು ಕಡಿತದಲ್ಲಿ ʼಜಗತ್ತಿನ ರಾಜಧಾನಿʼ ಎಂದು ಹೆಸರಿಸಲಾಗಿದೆ. ಈ ಸಮಸ್ಯೆಯ ಮೂಲ-ಹಾವು, ಮಾನವ ಮತ್ತು ಪರಿಸರದ ನಡುವಿನ ಸಂಘರ್ಷ. ಇದು ಸಾಮಾಜಿಕ, ಆರ್ಥಿಕ, ಮಾನವಿಕ, ವೃತ್ತಿ ಸಂಬಂಧಿತ, ಪರಿಸರ ಹಾಗೂ ಧಾರ್ಮಿಕ ಆಯಾಮಗಳಿರುವ ಸಂಕೀರ್ಣ ಸಮಸ್ಯೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ) […]

ಮಾರುಕಟ್ಟೆಗೆ ಲಾಕ್‌ಡೌನ್ ಅಡಚಣೆ: ಬೆಳೆದ ಬಾಳೆ ಕಡಿದ ರೈತ

ಯಲ್ಲಾಪುರ: ಲಾಕ್‌ಡೌನ್ ಕಾರಣದಿಂದ ಬಾಳೆಕಾಯಿಗೂ ಮಾರುಕಟ್ಟೆ ಕುಸಿದಿದೆ. ಇದರಿಂದ ಚಿಂತಿತರಾದ ತಾಲ್ಲೂಕಿನ ಗ್ರಾಮೀಣ ಪ್ರದೇಶದ ರೈತರು ಬಾಳೆ ಗೊನೆ, ಬಾಳೆ ಗಿಡಗಳನ್ನು ಕತ್ತರಿಸಿ ಹಾಕುತ್ತಿದ್ದಾರೆ. ತಾಲ್ಲೂಕು ಅಡಿಕೆಗೆ ಎಷ್ಟು ಪ್ರಖ್ಯಾತವೋ ಬಾಳೆ ಕೃಷಿಗೂ ಅಷ್ಟೇ ಪ್ರಸಿದ್ಧವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ‍್ರವಾಸಿಗರು ಪಟ್ಟಣದಲ್ಲಿ ಬಾಳೆಹಣ್ಣುಗಳನ್ನು ಖರೀದಿಸಿ ಮುಂದೆ ಸಾಗುತ್ತಾರೆ. ಆದರೆ, ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಾದ ಬಳಿಕ ಬಾಳೆ ಬೆಳೆಗಾರರ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಾಳೆಹಣ್ಣುಗಳನ್ನು ಬಹಳ ದಿನ ಶೇಖರಿಸಿ ಇಡಲಾಗದು. ಹಣ್ಣಾದ ನಂತರ ಅವುಗಳನ್ನು ಮಾರಾಟ ಮಾಡದಿದ್ದರೆ […]

ಹಳದಿ ರೋಗಕ್ಕೆ ಹಾಳಾದ ಅಡಿಕೆ ಬೆಳೆಗಾರರ ಬದುಕು

ಸುಳ್ಯ: ಕರಾವಳಿ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ ಈಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲೂ ಇದೀಗ ವ್ಯಾಪಕವಾಗಿರುವ ಹಳದಿ ಎಲೆ ರೋಗ ಅಡಿಕೆಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ದ.ಕ. ಜಿಲ್ಲೆಯಲ್ಲಿ ಸಾವಿರಾರೂ ಎಕರೆ ಅಡಿಕೆ ಕೃಷಿ ಹಳದಿ ಎಲೆ ರೋಗಕ್ಕೆ ತುತ್ತಾಗಿದೆ. ಜಿಲ್ಲೆಯ ಸುಳ್ಯ ತಾಲೂಕೊಂದರಲ್ಲೇ ಸಾವಿರಾರು ಎಕರೆ ಅಡಿಕೆ ಕೃಷಿ ಈ ರೋಗ ಬಾಧೆಯಿಂದ ತತ್ತರಿಸಿದೆ. ಇದರಿಂದ ಸಾವಿರಾರು ಕೃಷಿಕರು ಕಂಗಾಲಾಗಿದ್ದಾರೆ. 25-30 ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಕಾಣಿಸಿಕೊಂಡ ಈ ಹಳದಿ ಎಲೆ […]

ಬಮೂಲ್ ನಿಂದ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ

ಇಂದು ಚನ್ನಪಟ್ಟಣ ಬಮೂಲ್ ಶಿಬಿರ ಕಚೇರಿಯಲ್ಲಿ ಬಮೂಲ್ ನಿರ್ದೇಶಕರಾದ ಹೆಚ್.ಸಿ. ಜಯಮುತ್ತು ರವರು 1.62.000  ರೂಪಾಯಿಗಳ ಸದಸ್ಯರ ಮರಣದ ಚೆಕ್ ಗಳು ಮಾದರಿ ಹಸು ಕೊಟ್ಟಿಗೆಯ ಚೆಕ್ಕಗಳು ಸದಸ್ಯರ ವೈದ್ಯಕೀಯ ಮರುಪಾವತಿಯ ಚೆಕ್ ಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕರಾದ ಡಾ: ಕೆಂಪರಾಜು ರವರು ಮುಖ್ಯ ಕಾರ್ಯನಿರ್ವಾಹಕರ ಗಳಾದ ರಾಜು. ಚೆನ್ನಪ್ಪ. ರವಿಕುಮಾರ್. ಶಿವಲಿಂಗು. ಸಿದ್ದಲಿಂಗರಾಜೇ ಅರಸ್. ನೀತೀನ್. ಹಾಗೂ ಫಲಾನುಭವಿಗಳು ಹಾಜರಿದ್ದರು.  

ಬಮೂಲ್ ನಿಂದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಚೆಕ್ ವಿತರಣೆ

ದೊಡ್ಡಮಳೂರಿನ ಶ್ರೀರಾಮಮಂದಿರ ದೇವಸ್ಥಾನದ ಆವರಣದಲ್ಲಿ ಬಮೂಲ್ ನಿರ್ದೇಶಕರಾದ ಎಚ್.ಸಿ. ಜಯಮುತ್ತು ರವರ ನೇತೃತ್ವದಲ್ಲಿ ಚನ್ನಪಟ್ಟಣ ತಾಲ್ಲೂಕು ಹಾಲು ಉತ್ಪಾದಕರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಹಾಗೂ ನಿವೃತ್ತಿ ಹೊಂದಿದ ಮುಖ್ಯ ಕಾರ್ಯನಿರ್ವಾಹಕರಿಗೆ ಸನ್ಮಾನ ಮತ್ತು ಅಕಾಲಿಕವಾಗಿ ಮರಣ ಹೊಂದಿದ ಸಿಬ್ಬಂದಿಯ ಕುಟುಂಬಗಳಿಗೆ ಪರಿಹಾರದ ಚೆಕ್ಕುಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಹಾಲು ಉತ್ಪಾದಕರ ನೌಕರರ  ಕ್ಷೇಮಭಿವೃದ್ಧಿ  ಸಂಘದ ಅಧ್ಯಕ್ಷರಾದ ಪುಟ್ಟೇಗೌಡ ರವರು. ಪದಾಧಿಕಾರಿಗಳಾದ ಪುಟ್ಟರಾಜು ಹೊಂಗನೂರು. ದೇವರಾಜು ತಗಚಗೆರೆ. ಕೆ.ಟಿ. ಲಕ್ಷ್ಮಮ್ಮ. ಬಿಳಿಗೌಡ. ಮಾಧು […]

ಮಲೆನಾಡಿನ ಕಾಫಿ ಬೆಳೆಗಾರ ಸೋತದ್ದೆಲ್ಲಿ ಮತ್ತು ಬೆಲೆಗಳ ಮೇಲೆ ಸರ್ಕಾರಿ ನಿಯಂತ್ರಣ ಯಾಕೆ ಬೇಕು?

ಒಂದು ಕಾಲಕ್ಕೆ ಅತ್ಯಂತ ಪ್ರತಿಷ್ಟಿತ ಹಾಗೂ ಸಧೃಡ ಕೃಷಿಯೆಂದು ಹೆಮ್ಮೆ ಪಡುತ್ತಿದ್ದ  ಕಾಫಿ ಬೆಳೆಗಾರರೆಂದರೆ ಐಷಾರಾಮೀ ದೊರೆಗಳೆಂದು ಬೇರೆಯವರು ಹೇಳುತ್ತಿದ್ದ  ಮಲೆನಾಡಿನ ಕಾಫಿ ಬೆಳೆ ಸೋತದ್ದೆಲ್ಲಿ. ಸುಮಾರಾಗಿ ಎಂಬತ್ತರ ದಶಕದವರೆಗೂ ಕಾಫಿಯ ಸ್ಥಿತಿ ಹಾಗೇ ಇತ್ತು. ಆಂತರಿಕ ಬಳಕೆ ಬಹಳ ಕಡಿಮೆ ಇದ್ದು ಅದು ವರ್ಷಕ್ಕೆ ಐವತ್ತು ಸಾವಿರ ಟನ್ ಮೀರುತ್ತಿರಲಿಲ್ಲ. ಅದರಲ್ಲೂ ತಮಿಳುನಾಡೇ ಮುಖ್ಯ ಗ್ರಾಹಕ ರಾಜ್ಯವಾಗಿತ್ತು. ಉಳಿದ ಎಲ್ಲಾ ಕಾಫಿ ರಫ್ತಾಗುತ್ತಿತ್ತು. ಅಂದಿನ ಕಾಲಕ್ಕೆ ದೊಡ್ಡ ಮೊತ್ತವೆನ್ನಬಹುದಾದ ನಾಲ್ಕು ನೂರು ಕೋಟಿ ರುಪಾಯಿಯಷ್ಟು ವಿದೇಶೀ […]

ಗ್ರಾಮಪಂಚಾಯ್ತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ಗ್ರಾಮಪಂಚಾಯ್ತಿಗಳ  ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟಗೊಂಡು  ಗ್ರಾಮ ಪಂಚಾಯ್ತಿಗಳಲ್ಲಿ  ಹಲವಾರು ರೀತಿಯ ವಿಧ್ಯಮಾನಗಳು ನಡೆದು ಅಂತಿಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯುತ್ತಿವೆ.

Back To Top