Category: ಕೃಷಿ ಗ್ರಾಮಾಭಿವೃದ್ಧಿ

ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂ ಚೆಕ್ ವಿತರಣೆ

ಚನ್ನಪಟ್ಟಣ ಶಿಬಿರ ಕಚೇರಿಯಲ್ಲಿ ಬಮುಲ್ ನಿರ್ದೇಶಕರಾದ ಹೆಚ್.ಸಿ. ಜಯಮುತ್ತು ರವರು ಚನ್ನಪಟ್ಟಣ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಸಹಕಾರ ಶಿಕ್ಷಣ ನಿಧಿಗೆ 4 ಲಕ್ಷ ರೂಪಾಯಿಗಳ ಚೆಕ್ಕನ್ನು ರಾಮನಗರ ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಸಿಂ.ಲಿಂ. ನಾಗರಾಜು ರವರಿಗೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕುಕ್ಕೂರುದೊಡ್ಡಿ ಜಯರಾಮು ರವರು ಉಪ ವ್ಯವಸ್ಥಾಪಕರಾದ ಡಾ. ಕೆಂಪರಾಜು ರವರು. ಹಾಗೂ ಮುಖಂಡರು ಉಪಸ್ಥಿತರಿದ್ದರು.

ಅನರ್ಹರಿಗೂ ಕಿಸಾನ್ ಸಮ್ಮಾನ್!

ಸರ್ಕಾರದ ಹಣ ಸೋರಿಕೆಯಾಗುವುದು, ಅಪಾತ್ರರಿಗೆ ಸಂದಾಯ ಆಗುವುದು ಆಶ್ರ‍್ಯಪಡಬೇಕಾದ ವಿಷಯವೇನಲ್ಲ. ಸೋರಿಕೆಯ ಇನ್ನೊಂದು ಪ್ರಕರಣದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(ಪಿಎಂಕೆವೈ)ಯಡಿ 20.48 ಲಕ್ಷ ಅನರ್ಹರಿಗೆ 1,364.12 ಕೋಟಿ ರೂ. ಪ್ರೋತ್ಸಾಹಧನ ಪಾವತಿ ಮಾಡಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರಿಗೆ ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ. ಪ್ರೋತ್ಸಾಹಧನ ನೀಡುವ ಈ ಮಹತ್ವಾಕಾಂಕ್ಷಿ ಯೋಜನೆಗೆ 2019ರಲ್ಲಿ ಚಾಲನೆ ನೀಡಲಾಗಿದೆ. ಕಾಮನ್‌ವೆಲ್ತ್‌ ಹ್ಯೂಮನ್‌ ರೈಟ್ಸ್‌ ಇನಿಷಿಯೇಟಿವ್‌  ವೆಂಕಟೇಶ ನಾಯಕ್ ಎಂಬುವರು ಯೋಜನೆ ಕುರಿತು ಮಾಹಿತಿ ಕೋರಿ, ಆರ್‌ಟಿಐ […]

ತೋಟಗಾರಿಕೆ ಮೇಳ ಫೆ.8 ರಿಂದ 

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಆವರಣದಲ್ಲಿ ಫೆ.8ರಿಂದ 12ರವರೆಗೆ  ರಾಷ್ಟ್ರೀಯ ತೋಟಗಾರಿಕೆ ಮೇಳ ನಡೆಯಲಿದ್ದು, ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪ್ರವೇಶ ಇರಲಿದೆ ಎಂದು ಐಐಎಚ್‌ಆರ್ ನಿರ್ದೇಶಕ ಎಂ.ಆರ್.ದಿನೇಶ್ ತಿಳಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಭೌತಿಕ ಹಾಗೂ ಆನ್‌ಲೈನ್ ಮೂಲಕ ಮೇಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 30 ಸಾವಿರ ರೈತರಿಗೆ ಪ್ರವೇಶ ಕಲ್ಪಿಸಲು ನಿರ್ಧರಿಸಲಾಗಿದೆ.  ಪ್ರತಿದಿನ ಆರು ಸಾವಿರ ನೋಂದಾಯಿತ ರೈತರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಎರಡು ಅವಧಿಗಳಲ್ಲಿ ಮೇಳ ವೀಕ್ಷಿಸಬಹುದು. […]

ಹೊಸ ಅಡಕೆಗೆ ದಾಖಲೆ ಬೆಲೆ

ಹೊಸ ಅಡಕೆಗೆ ದಾಖಲೆ ಬೆಲೆ ಲಭ್ಯವಾಗಿದ್ದು, ಕ್ವಿಂಟಾಲ್‌ಗೆ 35,200 ರೂ.ಸಿಕ್ಕಿದೆ. ಆದರೆ, ಹಳೆ ಅಡಕೆ ಬೆಲೆಯಲ್ಲಿ ಹೆಚ್ಚೇನೂ ಏರುಪೇರು ಕಾಣದೆ ಸ್ಥಿರವಾಗಿದೆ.  ಈ ವರ್ಷದ ಹಂಗಾಮಿನ ಹೊಸ ಅಡಕೆಗೆ ಲಭಿಸಿರುವ ಗರಿಷ್ಠ ಧಾರಣೆ ಇದಾಗಿದ್ದು, ಕಳೆದ ಐದು ವರ್ಷಗಳಲ್ಲಿ ಸಿಕ್ಕ ಗರಿಷ್ಠ ಬೆಲೆ ಇದು. ಕಳೆದ ವಾರದಿಂದ ಹಳೆಯ ಅಡಕೆ, ಡಬಲ್ ಚೋಲ್ ಅಡಕೆ ಧಾರಣೆಯಲ್ಲೂ ಗಣನೀಯ ಏರಿಕೆಯಾಗಿದೆ. ಹೊಸ ಅಡಕೆಗೆ ಪುತ್ತೂರು, ಬೆಳ್ತಂಗಡಿ ಮತ್ತು ಕಾರ್ಕಳ ಎಪಿಎಂಸಿಯುಲ್ಲಿ 35,000 ರೂ., ಸುಳ್ಯ, ಬಂಟ್ವಾಳ ಮಾರುಕಟ್ಟೆಯಲ್ಲಿ 34,500 […]

ಕೃಷಿ ಸಂಜೀವಿನಿ ಲೋಕಾರ್ಪಣೆ

ರೈತರ ಹೊಲದಲ್ಲೇ ಮಣ್ಣು, ನೀರು, ರೋಗ ಪರೀಕ್ಷೆ ಮಾಡುವ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ “ಕೃಷಿ ಸಂಜೀವಿನಿ’ಯನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಿದ್ದಾರೆ. ಇವುಗಳ ಕಾರ್ಯ ನಿರ್ವಹಣೆಯನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರೈತರ ತಾಕುಗಳಲ್ಲೇ ಬೆಳೆಗಳಿಗೆ ಕಾಡುವ ಕೀಟ, ರೋಗ, ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಮಾರ್ಗೊಪಾಯಗಳನ್ನು ಒದಗಿಸುವುದು ಕೃಷಿ ಸಂಜೀವಿನಿಯ ಉದ್ದೇಶ. 155313 ಶುಲ್ಕರಹಿತ ಸಹಾಯವಾಣಿಗೆ ಕರೆಯು ಜಿಲ್ಲೆಯ […]

ಹವಾಮಾನ ವಿಪರ್ಯಾಸ: ಟ್ರ್ಯಾಕ್ಟರ್ ರ‍್ಯಾಲಿ 7ಕ್ಕೆ

ಪ್ರತಿಕೂಲ ಹವಾಮಾನದಿಂದಾಗಿ ರೈತರು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ‍್ಯಾಲಿಯನ್ನು ಜ.7ಕ್ಕೆ ಮುಂದೂಡಲಾಗಿದೆ. ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ಕುಂಡಲಿ–ಮನೇಸರ್–ಪಲ್ವಾಲ್ ಹೆದ್ದಾರಿವರೆಗೆ ಗುರುವಾರ ಟ್ರ‍್ಯಾಕ್ಟರ್ ರ‍್ಯಾಲಿ ನಡೆಸಲಿದ್ದಾರೆ ಎಂದು ರೈತ ಮುಖಂಡರು ಹೇಳಿದ್ದಾರೆ. ದಿಲ್ಲಿಯಲ್ಲಿ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಮಳೆಯಾಗುತ್ತಿದೆ. ಹವಾಮಾನ ವಿಪರ್ಯಾಸದ ಮುನ್ಸೂಚನೆ ಸಿಕ್ಕಿದ್ದರಿಂದ ರ‍್ಯಾಲಿಯನ್ನು ಮುಂದೂಡಲಾಗಿದೆ ಎಂದು ಸ್ವರಾಜ್ ಅಭಿಯಾನದ ಮುಖಂಡ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ರೈತರು ಪುನರುಚ್ಚರಿಸಿದ್ದಾರೆ. ಹರಿಯಾಣದ ಪ್ರತಿ ಮನೆಯಿಂದ ಒಬ್ಬರು, ಪ್ರತಿ […]

Fixed term jobs should be par with permanent work: govt

The Union labour ministry has proposed that fixed term employment will be on  par with permanent work and salaries must be paid within seven days of a wage period, according to the new draft order for industrial establishments and mines. The move is aimed at institutionalizing the changing work culture in the country. While industries […]

ಏಳನೇ ಸುತ್ತಿನ ಮಾತುಕತೆಯಲ್ಲಿ ವಿಫವಾದ ಸರ್ಕಾರ

ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಜ.4ರಂದು ನಡೆದ ಏಳನೇ ಸುತ್ತಿನ ಮಾತುಕತೆ ಫಲಿಸಲ್ಲಿಲ್ಲ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಸುಧಾರಣೆಯ ಮೂರು ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಯನ್ನು ರೈತರು ಪುನರುಚ್ಚರಿಸಿದ್ದಾರೆ. ಕಾಯ್ದೆಗಳನ್ನು ಕೈಬಿಡಲು ಸರ್ಕಾರ ಒಪ್ಪಿಲ್ಲ. ಮುಂದಿನ ಮಾತುಕತೆ ಜ.8 ರಂದು ನಡೆಯಲಿದೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ. Courtesyg: Google (photo)

ರೈತರ ಕಣ್ಣು ಸುಪ್ರೀಂ ಕೋರ್ಟ್‌ನತ್ತ

ಇತ್ತೀಚಿನ ಮೂರು ಕಾಯ್ದೆಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತು ರೈತರ ಪ್ರತಿನಿಧಿಗಳ ನಡುವಣ ಏಳನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. ಹಾಗಾಗಿ, ಈಗ ಎಲ್ಲರ ಕಣ್ಣು ಸುಪ್ರೀಂ ಕೋರ್ಟ್ನತ್ತ ನೆಟ್ಟಿದೆ. ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರವು ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಮತ್ತು ಕಾಯ್ದೆಗಳಿಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಎಂಟು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಲಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಮೃತಪಟ್ಟ 50ಕ್ಕೂ ಹೆಚ್ಚು ರೈತರಿಗೆ ಸಭೆಯ ಆರಂಭದಲ್ಲಿಯೇ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ರೈತ ಮುಖಂಡರು ಮುಂದಿಟ್ಟ […]

Back To Top