Category: ಕೃಷಿ ಗ್ರಾಮಾಭಿವೃದ್ಧಿ

ರೈತರ ದೆಹಲಿ ಚಲೋಗೆ ತಡೆ

ಪಂಜಾಬಿನ ರೈತರ ದೆಹಲಿ ಚಲೋ ಪ್ರತಿಭಟನೆ ಮೆರವಣಿಗೆಯನ್ನು ನಿರ್ಬಂಧಿಸಲು ಮುಂದಾಗಿರುವ ಹರಿಯಾಣ ಸರ್ಕಾರ, ಪಂಜಾಬ್-ಹರಿಯಾಣ ಗಡಿಯಲ್ಲಿನ ಹೆದ್ದಾರಿಗಳನ್ನು ಬಂದ್ ಮಾಡಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದಿಲ್ಲಿ ಚಲೋ ಹಮ್ಮಿಕೊಂಡಿದ್ದಾರೆ. ಪಂಜಾಬ್‌ನ ವಿವಿಧ ಭಾಗಗಳಿಂದ ಹೊರಟು ಗುರುವಾರ ದೆಹಲಿಯನ್ನು ತಲುಪಿ, ಗುರುವಾರ ಮತ್ತು ಶುಕ್ರವಾರ ಧರಣಿ ನಡೆಸಲು ನಿರ್ಧರಿಸಲಾಗಿತ್ತು. ಅಖಿಲ ಭಾರತ ರೈತ ಸಂಘರ್ಷ ಸಹಕಾರ ಸಮಿತಿ, ರಾಷ್ಟ್ರೀಯ ಕಿಸಾನ್ ಮಹಾಸಂಘ, ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳು  ಪ್ರತಿಭಟನಾ ಮೆರವಣಿಗೆಯನ್ನು […]

ನರೇಗಾ: 1,200 ಕೋಟಿ ರೂ. ಹೆಚ್ಚುವರಿ ಅನುದಾನ

ರಾಜ್ಯದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮ-ನರೇಗಾ)ಯಡಿ ಇನ್ನಷ್ಟು ಕಾಮಗಾರಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ 1.200 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲು ಸಮ್ಮತಿ ಸೂಚಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಹಾಲಿ ವರ್ಷ 2 ಕೋಟಿ ಹೆಚ್ಚುವರಿ ಮಾನವ ದಿನಗಳನ್ನು ಸೃಷ್ಟಿಸಲು ಅವಕಾಶ ನೀಡಿದೆ. 2020-21ನೇ ಸಾಲಿಗೆ ಮನರೇಗಾ ಯೋಜನೆಯಡಿ 13 ಕೋಟಿ ಮಾನವ ದಿನಗಳ ಗುರಿ ನಿಗದಿಪಡಿಸಿದೆ. ಪ್ರವಾಹ […]

ಕೊಬ್ಬರಿ ಬೆಲೆ ಹೆಚ್ಚಳ

ಕೊಬ್ಬರಿ ಬೆಲೆ ಸ್ವಲ್ಪ ಹೆಚ್ಚಳವಾಗಿದ್ದು, ಕ್ವಿಂಟಾಲ್‌ಗೆ 14 ಸಾವಿರ ರೂ. ಗಡಿ ದಾಟಿದೆ. ಅರಸೀಕೆರೆಯಲ್ಲಿ ದರ 14,070 ರೂ. ಇದೆ. ಲಾಕ್‌ಡೌನ್‌ಗೆ ಮೊದಲು 10,500 ರೂ. ಇದ್ದ ದರ,ಆನಂತರ ಖರೀದಿ ಮತ್ತೆ ಆರಂಭಗೊAಡಾಗ 11,200 ರೂ.ಗೆ ಹೆಚ್ಚಳಗೊಂಡಿತ್ತು. ಅಂದಾಜು 3-4 ತಿಂಗಳು ಕೊಬ್ಬರಿ ಬೆಲೆ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ನಿಗದಿಪಡಿಸಿದ್ದ ಬೆಲೆಗಿಂತ ಕಡಿಮೆ ಇತ್ತು. ನಾಫೆಡ್ ಖರೀದಿ ಕೇಂದ್ರ ಆರಂಭಗೊಂಡ ಬಳಿಕ 11ರೂ.ಸಾವಿರ ಮತ್ತುದೀಪಾವಳಿ ಸಂದರ್ಭದಲ್ಲಿ೧೩ ಸಾವಿರ ರೂ. ಆಸುಪಾಸಿನಲ್ಲಿತ್ತು. ದೀಪಾವಳಿ ನಂತರ […]

ಬ್ಯಾಡಗಿ-ಗುಂಟೂರು ಮೆಣಸಿನಕಾಯಿ ಬೆಲೆ ಏರಿಕೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನ.23ರಂದು 32,779 ಚೀಲ ಮೆಣಸಿನಕಾಯಿ ಆವಕವಾಗಿದ್ದು, ಬ್ಯಾಡಗಿ ಕಡ್ಡಿ ಹಾಗೂ ಗುಂಟೂರ ತಳಿ ಮೆಣಸಿನಕಾಯಿ ದರ ಏರಿಕೆಯಾಗಿದೆ. ದೀಪಾವಳಿ ಬಳಿಕ ಆವಕದಲ್ಲಿ ತುಸು ಚೇತರಿಕೆ ಕಂಡಿದೆ. ಬ್ಯಾಡಗಿ ಕಡ್ಡಿ ಗರಿಷ್ಠ ಪ್ರತಿ ಕ್ವಿಂಟಲ್‌ಗೆ 3 ಸಾವಿರ ರೂ. ಏರಿಕೆಯಾಗಿದ್ದರೆ, ಖಾರದ ಅಂಶ ಹೆಚ್ಚಿರುವ ಗುಂಟೂರು ತಳಿ 13 ಸಾವಿರ ರೂ. ತಲುಪಿದೆ. ಖಾರ ಕಡಿಮೆ ಇರುವ ಕಡ್ಡಿ ಹಾಗೂ ಡಬ್ಬಿ ಮೆಣಸಿನಕಾಯಿ ಪುಡಿಯೊಂದಿಗೆ ಇದನ್ನು ಬೆರೆಸಲಾಗುತ್ತಿದ್ದು ಇದರಿಂದ ಮೆಣಸಿನಕಾಯಿ ಬೆಲೆ ಏರಿಕೆಯಾದೆ. Courtesyg: Google […]

ನೀರಾವರಿ ನಿಗಮಕ್ಕೆ 1,650 ಕೋಟಿ ರೂ. ಸಾಲ ಖಾತರಿ

ವಿವಿಧ ನೀರಾವರಿ ನಿಗಮಗಳು ಒಟ್ಟು 1.650 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕೃಷ್ಣಾ ಭಾಗ್ಯ ಜಲನಿಗಮ 500 ಕೋಟಿ ರೂ., ಕರ್ನಾಟಕ ನೀರಾವರಿ ನಿಗಮ 650 ಕೋಟಿ ರೂ., ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳು ತಲಾ 250 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಸರ್ಕಾರ ಖಾತರಿ ನೀಡಲಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ವಿವಿಧ ಸೇವೆಯಲ್ಲಿರುವ ಅಧಿಕಾರಿಗಳು ತಪ್ಪು ಮಾಡಿದಾಗ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ […]

ಕೃಷಿ ವರಮಾನ ಹೆಚ್ಚಳ ಸಾಧ್ಯತೆ: ಕ್ರಿಸಿಲ್

ಕೋವಿಡ್ ಕೃಷಿ ಚಟುವಟಿಕೆ ಮೇಲೆ ಹೆಚ್ಚು ಪರಿಣಾಮ ಬೀರಿಲ್ಲ. ಇದರಿಂದ ಕೃಷಿ ವರಮಾನ ಹೆಚ್ಚಳ ನಿರೀಕ್ಷಿಸಿದ್ದು, ಟ್ರ್ಯಾಕ್ಟರ್‌ ಮಾರಾಟದಲ್ಲೂ ಏರಿಕೆ ಕಂಡುಬರಲಿದೆ ಎಂದು ರೇಟಿಂಗ್ಸ್ ಸಂಸ್ಥೆ ಕ್ರಿಸಿಲ್ ಅಭಿಪ್ರಾಯಪಟ್ಟಿದೆ. ಟ್ರ್ಯಾಕ್ಟರ್‌ ಮಾರಾಟ ಶೇ.1ರಷ್ಟು ಕುಸಿಯಲಿದೆ ಎಂದು ಕ್ರಿಸಿಲ್ ಅಂದಾಜು ಮಾಡಿತ್ತು. ಆದರೆ, ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ನಿರೀಕ್ಷೆಗಿಂತ ವೇಗವಾಗಿ ಚೇತರಿಕೆ ಕಾಣಲಿದ್ದು, ಶೇ.10-12ರಷ್ಟು ಪ್ರಗತಿ ಸಾಧ್ಯವಾಗಲಿದೆ. ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಮುಂಗಾರು ಬಿತ್ತನೆ ಗರಿಷ್ಠ ಮಟ್ಟದಲ್ಲಿದೆ. ಇದರಿಂದ ಕೃಷಿ ವರಮಾನ ಹೆಚ್ಚಾಗಲಿದೆ. ಏಪ್ರಿಲ್-ಸೆಪ್ಟೆಂಬರ್‌ನಲ್ಲಿ ಟ್ರ್ಯಾಕ್ಟರ್‌ ಉದ್ಯಮ […]

‘ಕೃಷಿ ಮೇಳ’ ನಾಳೆಯಿಂದ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ನ.11ರಿಂದ 13ರವರೆಗೆ ಕೃಷಿ ಮೇಳವನ್ನು ಆಯೋಜಿಸಿದೆ. ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ನೀಡುವುದು ಮೇಳದ ಉದ್ದೇಶ. ಕರೋನಾ ನಿರ್ಬಂಧಗಳ ಹಿನ್ನಲೆಯಲ್ಲಿ ಮೇಳ ಸರಳವಾಗಿ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಸಕಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಪ್ರತ್ಯಕ್ಷ ಹಾಗೂ ಡಿಜಿಟಲ್ ಮುಖಾಂತರ ಮೇಳ ಹಮ್ಮಿಕೊಳ್ಳಲಾಗಿದೆ. ಭಾರತೀಯ ಕೃಷಿ ಸಂಶೋಧನಾ ಪರಿಷತ್ ಉಪ ಮಹಾನಿರ್ದೇಶಕ ಎ.ಕೆ.ಸಿಂಗ್ ಅವರು ಆನ್‌ಲೈನ್ ಮೂಲಕ ನ.11ರ ಬೆಳಗ್ಗೆ 11 ಗಂಟೆಗೆ ಮೇಳವನ್ನು ಉದ್ಘಾಟಿಸಲಿದ್ದಾರೆ ಎಂದು […]

ಹಿಂಗಾರು: 32 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ 32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಗುರಿ ತಲುಪಲು ಮತ್ತು ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಈ ಬಾರಿ ಉತ್ತಮ ಮಳೆ ಆಗಿರುವುದರಿಂದ, ಹಿಂಗಾರಿನಲ್ಲೂ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಾಗುವ ನಿರೀಕ್ಷೆಯಿದೆ. ಅಗತ್ಯವಾದ ರಸಗೊಬ್ಬರ, ಯೂರಿಯಾ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು. ಈಗಾಗಲೇ 11.19ಲಕ್ಷ ಹೆಕ್ಟೇರ್ (ಶೇ.35) […]

ನಂದಿನಿ ಪಶು ಆಹಾರ: ಟನ್‌ಗೆ 500 ರೂ. ಇಳಿಕೆ

ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಫ್) ನಂದಿನಿ ಪಶು ಆಹಾರದ ದರವನ್ನು ಪ್ರತಿ ಟನ್‌ಗೆ 500 ರೂ. ಇಳಿಕೆ ಮಾಡಿದೆ. ಕೋವಿಡ್ ಹಾಗೂ ಅತಿವೃಷ್ಟಿ ಹಿನ್ನೆಲೆಯಲ್ಲಿ ಮಂಡಳಿ ಕಳೆದ ಫೆಬ್ರವರಿಯಿಂದ ಮೇವರೆಗೆ ಪ್ರತಿ ಟನ್ ನಂದಿನಿ ಪಶು ಆಹಾರದ ಮೇಲೆ 500 ರೂ. ರಿಯಾಯಿತಿ ನೀಡಿತ್ತು. ನಾಲ್ಕು ತಿಂಗಳಲ್ಲಿ ಒಟ್ಟು 10 ರೂ. ಕೋಟಿ ರೂ ರಿಯಾಯಿತಿ ಭರಿಸಲಾಗಿದೆ. ಹೀಗಿದ್ದರೂ, ಪರಿಸ್ಥಿತಿ ಸುಧಾರಿಸದ ಕಾರಣ ಮಂಡಳಿ ನ.5 ರಿಂದ ಅನ್ವಯವಾಗುವಂತೆ ಪ್ರತಿ ಟನ್‌ಗೆ 500 ರೂ. ಬೆಲೆ ಇಳಿಕೆ ಮಾಡಿದೆ. […]

Back To Top