ವಿದೇಶಿ ದೇಣಿಗೆ ನಿಯಂತ್ರಣ ಕಾನೂನು 2026: ಎನ್ಜಿಒಗಳಿಗೆ ಅಂಕುಶ
ವಿದೇಶಿ ದೇಣಿಗೆ ನಿಯಂತ್ರಣ ಮಸೂದೆ 2026 ಅನುದಾನ ಪಡೆಯಲು ಪಾಲಿಸಬೇಕಾದ ನಿಯಮಗಳನ್ನು ಬಿಗಿಗೊಳಿಸಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ(ಎಂಎಚ್ಎ)ದ ಹೊಸ ನಿಯಮ ಗಳ ಪ್ರಕಾರ, ದೇಣಿಗೆಯನ್ನು 16 ಧಾರ್ಮಿಕ, 22 ಶೈಕ್ಷಣಿಕ, 19 ಆರ್ಥಿಕ, 18 ಸಾಂಸ್ಕೃತಿಕ ಹಾಗೂ ಸಾಮಾಜಿಕ ಉದ್ದೇಶದ 30 ಸೇರಿದಂತೆ 105 ಚಟುವಟಿಕೆಗಳಿಗೆ ಮಾತ್ರ ಬಳಸಬೇಕು. ನಿಯಮ ಗಳನ್ನು ಜೂನ್ 23, 2026ರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರವು ಮಾರ್ಚ್ 25, 2026ರಂದು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಬಲವಂತದ ಮತಾಂತರ ಹಾಗೂ ಸಂವಿಧಾನದ […]
ಪಂಜಾಬಿನ ಹಳೆಯ ಗಾಯಗಳನ್ನು ತೆರೆದ ʻಸಟ್ಲಜ್ʼ
ಜುಲೈ 5,2026ರಂದು ಜೀ5 ತನ್ನ ಒಟಿಟಿ ವೇದಿಕೆಯಿಂದ ʻಸಟ್ಲಜ್ʼ ಚಲನಚಿತ್ರವನ್ನು ತೆಗೆದುಹಾಕಿತು. ಸರ್ಕಾರ ಹೇಳಿದ್ದರಿಂದ ತೆಗೆಯಲಾಗಿದೆ ಎಂದು ಚಿತ್ರನಿರ್ಮಾಪಕರು ಹೇಳಿದರು. ಕೆಲವೊಮ್ಮೆ ಚಲನಚಿತ್ರಗಳು ಸುದ್ದಿಯಾಗುವುದಿಲ್ಲ; ಬದಲಾಗಿ, ಅವುಗಳ ಹಿಂದಿನ ರಾಜಕೀಯ, ಜನರ ಪೂರ್ವಗ್ರಹಗಳು ಮತ್ತು ಸಮಾಜದಲ್ಲಿನ ಗಾಯಗಳನ್ನು ಕೆದಕುವ ಮೂಲಕ ಸುದ್ದಿಯಾಗುತ್ತವೆ. ಸಿದ್ಧಾಂತ/ಹಿಂಸೆ/ನಾಯಕನನ್ನು ವೈಭವೀಕರಿಸುವ ಸಾವಿರಾರು ಸಿನೆಮಾಗಳು ಬಂದಿವೆ; ಮುಂದೆಯೂ ಬರಲಿವೆ. ಆದರೆ, ʻಸಟ್ಲಜ್ʼನಂಥ ಚಿತ್ರಗಳು ಸಾಮಾಜಿಕ/ರಾಜಕೀಯ ಕಾರಣದಿಂದಾಗಿ ಮುಖ್ಯವಾಗುತ್ತವೆ. ಸಟ್ಲಜ್ ಪ್ರದರ್ಶನ ಜುಲೈ 3ರಿಂದ ಆರಂಭಗೊಂಡಿತು. ಹನಿ ಟ್ರೆಹಾನ್ ನಿರ್ದೇಶನ, ಆರ್ಎಸ್ವಿಪಿ ಮೂವೀಸ್ ಮತ್ತು ಮ್ಯಾಕ್ಗಫಿನ್ […]
ಯುಎಪಿಎ; ಜಾಮೀನು ಇಲ್ಲವೇ ಸೆರೆವಾಸದ ದ್ವಂದ್ವ
ಅಕ್ರಮ ಚಟುವಟಿಕೆ ತಡೆ ಕಾಯಿದೆ(ಯುಎಪಿಎ) ಅಡಿ ಬಂಧಿತರಿಗೆ ಜಾಮೀನು ನೀಡಿಕೆ ವಿಷಯದಲ್ಲಿ ಸುಪ್ರೀಂ ಕೋರ್ಟಿನ ಎರಡು ಪೀಠಗಳು ವಿಭಿನ್ನ ತೀರ್ಪು ನೀಡಿರುವುದರಿಂದ, ಆದೇಶದ ಪರಾಮರ್ಶನಕ್ಕೆ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ. ಸಯೀದ್ ಅಹ್ಮದ್ ಅಬ್ದುಲ್ ವಾಹಿದ್ ಚೌಧರಿ ವಿ/ಎಸ್ ಮಹಾರಾಷ್ಟ್ರ ಸರ್ಕಾರ(2026) ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ನ ನ್ಯಾ.ಮಾಧವ ಜಾಮದಾರ ಅವರು ಶಾಂತಿಯುತ ಪ್ರತಿಭಟನೆ ಪ್ರತಿಯೊಬ್ಬರಿಗೂ ಸಂವಿಧಾನ ನೀಡಿರುವ ಹಕ್ಕು; ಪೊಲೀಸರು ಪ್ರಜೆಗಳ ಸೇವಕರೇ ಹೊರತು ಸರ್ಕಾರದ ಉನ್ನತ ಅಧಿಕಾರಿಗಳ ಸೇವಕರಲ್ಲ ಎಂದು ಜುಲೈ 3, 2026ರಂದು ಹೇಳಿದ್ದಾರೆ. […]
ನೀಟ್-ಯುಜಿ: ಸರ್ಕಾರದ ಲೋಪಕ್ಕೆ ಟೆಲಿಗ್ರಾಂಗೆ ಬರೆ
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಮರುಪರೀಕ್ಷೆ ನಡೆದಿದೆ. ಸರ್ಕಾರ ಪರೀಕ್ಷೆಗೆ ಮುನ್ನ ಟೆಲಿಗ್ರಾಂಗೆ ತಾತ್ಕಾಲಿಕ ನಿಷೇಧ ಹೇರಿತು; ಆನಂತರ ವಾಟ್ಸ್ಆಪ್ ತರಲು ಯೋಜಿಸಿದ್ದ ʻಯೂಸರ್ನೇಮ್ʼ ಸೌಲಭ್ಯದ ವಿವರ ನೀಡುವಂತೆ ನೋಟಿಸ್ ನೀಡಿತು. ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ಬೀಸುವ ದೊಣ್ಣೆಯಿಂದ ವಾಟ್ಸ್ಆಪ್ ತಪ್ಪಿಸಿಕೊಂಡಿದೆ. ಇಂಥದ್ದೇ ನೋಟಿಸ್ ಮೆಟಾ, ಅರಟ್ಟೈ ಹಾಗೂ ಸಿಗ್ನಲ್ಗೂ ರವಾನೆಯಾಗಿದೆ. ದೆಹಲಿ ಹೈಕೋರ್ಟ್ ಕಾಕ್ರೋಚ್ ಜನತಾ ಪಕ್ಷದ ಎಕ್ಸ್ ಖಾತೆಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಿದೆ. ಗೋದಿ ಮಾಧ್ಯಮಗಳ ಯುಗದಲ್ಲಿ ಜನಸಾಮಾನ್ಯರು ಸಂವಹನಕ್ಕೆ ಬಳಸುತ್ತಿರುವ ಸಾಮಾಜಿಕ ಮಾಧ್ಯಮಗಳ […]
ಕರಿಯರದೊ ಬಿಳಿಯರದೊ ಯಾರದಾದರೆ ಏನು……
ಬಿಡದಿಯಲ್ಲಿ ಸರ್ಕಾರ ಸ್ಥಾಪಿಸಲು ಪ್ರಸ್ತಾಪಿಸಿರುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್(ಜಿಬಿಐಟಿ) ರೈತರಲ್ಲಿ ಆತಂಕ ಮೂಡಿಸಿದೆ. ದೇಶದ ಮೊದಲ ಎಐ ಚಾಲಿತ ಉಪನಗರ ಇದಾ ಗಿದ್ದು, ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುತ್ತದೆ; ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಸುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ರೈತರು ಪ್ರಾಥಮಿಕ ಅಧಿಸೂಚನೆ ಹೊರಡಿ ಸಿದ ಬಳಿಕ ಮಾರ್ಚ್ 2025ರಿಂದ ಪ್ರತಿಭಟನೆ ಆರಂಭಿಸಿದ್ದಾರೆ. ʻನನ್ನ ಭೂಮಿ, ನನ್ನ ಹಕ್ಕುʼ ಎಂದು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಶೇ.80 ರಷ್ಟು ರೈತರು ಜಮೀನು ನೀಡಲು […]
ನೀಟ್ ಅವ್ಯವಸ್ಥೆ: ನಿರ್ಲಕ್ಷ್ಯ, ಉತ್ತರದಾಯಿತ್ವವಿಲ್ಲದ ಆಡಳಿತದ ಫಲ
ಮೇ 3, 2026ರಂದು ನೀಟ್-ಯುಜಿಸಿ(ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತೆ ಪರೀಕ್ಷೆ) ಪರೀಕ್ಷೆ ನಡೆದ 9 ದಿನಗಳ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸಿತು; ಸರ್ಕಾರ ಸಿಬಿಐ ತನಿಖೆಗೆ ಮುಂದಾಯಿತು. ವೈದ್ಯರ ಸಂಘಟನೆಯೊಂದು ಸುಪ್ರೀಂ ಕೋರ್ಟ್ ಕದ ತಟ್ಟಿತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಒಂದು ವಿಷವೃತ್ತ. ರಾಜಕೀಯ ನಾಯಕರ ಖಾಸಗಿ ವೈದ್ಯ ಕಾಲೇಜುಗಳು, ಹಲವು ಸಾವಿರ ಕೋಟಿ ರೂ. ಮೌಲ್ಯದ ಕೋಚಿಂಗ್ ಉದ್ಯಮ ಮತ್ತು ವೈದ್ಯ ಪದವಿಯ ಸಾಮಾಜಿಕ ಪ್ರತಿಷ್ಠೆ ಇದರಲ್ಲಿ ಕೈ […]
ಬಿಜೆಪಿ ಸರಣಿ ವಿಜಯ: ಕಾಂಗ್ರೆಸ್, ಪ್ರತಿಪಕ್ಷಗಳ ಕಾರ್ಯನೀತಿ ಏನು?
ಐದು ರಾಜ್ಯಗಳ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಕೇರಳದಲ್ಲಿ ಎಡ ರಂಗ ಸೋಲುಂಡಿವೆ. ಅಸ್ಸಾಮಿನಲ್ಲಿ ಎನ್ಡಿಎ 3ನೇ ಅವಧಿಗೆ ಹಾಗೂ ಪುದು ಚೆರಿಯಲ್ಲಿ ಎನ್.ರಂಗಸ್ವಾಮಿ ಮತ್ತೊಮ್ಮೆ ಗದ್ದುಗೆ ಹಿಡಿದಿದ್ದಾರೆ. ಪ್ರತಿಪಕ್ಷಗಳಿಗೆ 2024ರ ಲೋಕಸಭೆ ಚುನಾವಣೆ ತೆರೆದಿದ್ದ ಬಾಗಿಲು ಈಗ ಬಹುತೇಕ ಮುಚ್ಚಿಹೋಗಿದೆ; ಧರ್ಮ, ಭಾಷೆ ಮತ್ತು ಜಾತಿಗಳ ವಿಸ್ತೃತ ವೈವಿಧ್ಯವಿದ್ದರೂ, ಶೇ.80 ರಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ ಮತ್ತು ಕಾಂಗ್ರೆಸ್ ನಾಲ್ಕು ರಾಜ್ಯಗಳಿಗೆ ಸೀಮಿತವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ […]
ತೂಗುಯ್ಯಾಲೆಯಲ್ಲಿರುವ ಆಪ್ ಮತ್ತು ಕೇಜ್ರಿವಾಲ್ ಭವಿಷ್ಯ
2021-22ರ ದೆಹಲಿ ಮದ್ಯ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್, ಮನಿಶ್ ಸಿಸೋಡಿಯಾ ಸೇರಿದಂತೆ 23 ಮಂದಿಗೆ ನ್ಯಾಯಾಲಯ ಉಪಶಮನ ನೀಡಿದೆ. 100 ಕೋಟಿ ಲಂಚ ಪಡೆಯಲಾಗಿದೆ ಎಂಬುದು ಊಹಾತ್ಮಕ ಮತ್ತು ಅದಕ್ಕೆ ಪುರಾವೆ ನೀಡುವಲ್ಲಿ ವಿಫಲವಾಗಿದೆ ಎಂದು ಹೇಳಿದೆ. ಇದೇ ಹೊತ್ತಿನಲ್ಲಿ 7 ಸಂಸದರು ಆಮ್ ಆದ್ಮಿ ಪಕ್ಷವನ್ನು ತೊರೆದು, ಬಿಜೆಪಿ ಸೇರಿದ್ದಾರೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆ ಗೆ ಬಿಜೆಪಿ ಹತಾರಗಳನ್ನು ಸಜ್ಜುಗೊಳಿಸಲು ಆರಂಭಿಸಿದೆ. ದೆಹಲಿ ವಿಧಾನಸಭೆ ಚುನಾವಣೆ ವೇಳೆ ಮಫ್ಲರ್ ಧರಿಸಿ, ಕೆಮ್ಮುತ್ತ, ಭ್ರಷ್ಟಾಚಾರ […]
ಐಟಿ ಕಾಯಿದೆಗೆ ಮತ್ತೊಂದು ತಿದ್ದುಪಡಿ: ಹಳ್ಳ ಹಿಡಿದ ಅಭಿವ್ಯಕ್ತಿ ಸ್ವಾತಂತ್ರ್ಯ
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ(ಎಂಇಐಟಿವೈ)ವು ಮಾಹಿತಿ ತಂತ್ರಜ್ಞಾನ(ಮಧ್ಯವರ್ತಿ ಮಾರ್ಗಸೂಚಿಗಳು ಹಾಗೂ ಡಿಜಿಟಲ್ ಮಾಧ್ಯಮ ನೀತಿಸಂಹಿತೆ) ನಿಯಮಗಳು 2021ಕ್ಕೆ ಮತ್ತೊಂದು ತಿದ್ದುಪಡಿ ತರಲು ಕರಡು ಪ್ರಸ್ತಾಪವನ್ನು ಪ್ರಕಟಿಸಿದೆ. ಒಂದು ವೇಳೆ ಅಂಗೀಕೃತಗೊಂಡರೆ, ವಾಕ್ ಸ್ವಾತಂತ್ರ್ಯದ ಮೇಲಿನ ನಿರ್ಬಂಧ ಇನ್ನಷ್ಟು ಬಿಗಿ ಯಾಗಲಿದೆ. ಶಾಸಕಾಂಗದ ಸಮ್ಮತಿ ಇಲ್ಲದೆ, ಸಂಸತ್ತಿನಲ್ಲಿ ಚರ್ಚೆ ನಡೆಸದೆ ಜನರ ಮೂಲಭೂತ ಹಕ್ಕುಗಳನ್ನು ಕಸಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಐಟಿ ಕಾಯಿದೆಯನ್ನು ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಸುಪ್ರೀಂ ಕೋರ್ಟ್ ಆನ್ಲೈನ್ ಗೋಪ್ಯತೆ ಮತ್ತು […]

