Category: ಸಮಾಜ – ಸಂಸ್ಕೃತಿ

ದೇಶಕ್ಕೆ ಇನ್ನಷ್ಟು ರಾಡ್ರಿಗಸ್, ಕೌರ್‌ ಮತ್ತು ಖುರೇಷಿಗಳು ಅಗತ್ಯ

ಮಹಿಳಾ ವಿಶ್ವ ಕಪ್‌ ನಮ್ಮ ಪಾಲಾಗಿದೆ. 1983ರಲ್ಲಿ ಪುರುಷರ ವಿಶ್ವ ಕಪ್‌, 2011ರಲ್ಲಿ ಐಸಿಸಿ ವಿಶ್ವ ಕಪ್‌ ಗೆಲುವಿನ ನಂತರದ ಚರಿತ್ರಾರ್ಹ ಗೆಲುವು ಇದು. 2005ರಲ್ಲಿ ಆಸ್ಟ್ರೇಲಿಯ ಹಾಗೂ 2017ರಲ್ಲಿ ಇಂಗ್ಲೆಂಡ್‌ ವಿರುದ್ಧ ಮಹಿಳಾ ತಂಡ ಸೋಲುಂಡಿತ್ತು. ಗೆಲುವಿನ ಬಳಿಕ ತಂಡ ಘನತೆಯಿಂದ ನಡೆದುಕೊಂಡಿತು. ಪ್ರತಿಯಾಗಿ 2025ರ ಏಷ್ಯಾ ಕಪ್‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಾಯಕ ಸೂರ್ಯಕುಮಾರ್‌ ಯಾದವ್, ಎದುರಾಳಿ ತಂಡದ ನಾಯಕನ ಹಸ್ತಲಾಘವ ಮಾಡಲಿಲ್ಲ; ಎರಡು ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆ ಮತ್ತು ಕಾಶ್ಮೀರದಲ್ಲಿ […]

ಜಾತಿಯೆಂಬುದು ಕಣ್ಣಿಗೆ ಇರಿಯುವ ವಾಸ್ತವ, ನಿವಾರಣೆಯಾಗದ ಜಾಡ್ಯ

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಒಂದು ವರ್ಗದ ಜನರು, ಧನಾಡ್ಯರು ಹಾಗೂ ಪ್ರತಿಪಕ್ಷ ಬಿಜೆಪಿ ಸಮೀಕ್ಷೆಯನ್ನು ಹೀನಯಿಸಿದ್ದಲ್ಲದೆ, ಸಮಾಜವನ್ನು ಒಡೆಯಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ. ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಸ್ನೇಹಿತರಾದ ಎಚ್‌.ಎಚ್‌. ರೇಣುಕಾರಾಧ್ಯ ಅವರ ಅನುಭವವು ಜಾತಿ ತನ್ನ ಬೇರನ್ನು ಎಷ್ಟು ಆಳವಾಗಿ ಬಿಟ್ಟಿದೆ ಎಂಬು ದನ್ನು ತೋರಿಸಿಕೊಡುತ್ತದೆ. ಇದೇ ಹೊತ್ತಿನಲ್ಲಿ ಅಧ್ಯಯನವೊಂದು ನಗರಗಳಲ್ಲಿ ಪೌರತ್ವವು ಕಾಗದದ ಮೇಲೆ ಮಾತ್ರ ಸಮಾನವಾಗಿದೆ; ಆದರೆ, ಆಚರಣೆಯಲ್ಲಿ ಅಸಮಾನವಾಗಿದೆ ಎಂದು ಹೇಳಿದೆ. ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರವು […]

ಸುಪ್ರೀಂ ಕೋರ್ಟಿಗೆ ಭಿನ್ನಮತದ ಮೆರುಗು

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಭೂಷಣ್‌ ರಾಮಕೃಷ್ಣ ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನವು ಸನಾತನ ಮನಸ್ಥಿತಿಯ ಗಂಭೀರ ಪ್ರಕರಣ. ಸನಾತನ ಧರ್ಮಕ್ಕೆ ಅಪಮಾನ ವನ್ನು ಸಹಿಸುವುದಿಲ್ಲ ಎಂದು ಈ ಪ್ರಯತ್ನ ನಡೆಸಿದ ಕ್ರಿಮಿ ಹೇಳಿದೆ. ಆತ ಅಪ್ರಬುದ್ಧನಲ್ಲ; ಮಾನಸಿಕ ಅಸ್ವಸ್ಥನಲ್ಲ; ಅಕ್ಷರಸ್ಥ ಮತ್ತು ವೃತ್ತಿಯಲ್ಲಿ ವಕೀಲ. ನ್ಯಾಯಾಲಯದ ತೀರ್ಮಾನ ತಮ್ಮ ಧರ್ಮಕ್ಕೆ ವಿರುದ್ಧವಾಗಿದೆ ಎನ್ನುವ ಅಸಹನೆಯು ಗುಂಪು ಹಲ್ಲೆಗಳು ಮತ್ತು ಬುಲ್ಡೋಜರ್‌ ನ್ಯಾಯದ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರಜಾಸತ್ತೆಗೆ ಧಕ್ಕೆಯುಂಟು ಮಾಡುತ್ತಿದೆ. ದೇಶದ ನಾಯಕತ್ವ ವಹಿಸಿದವರ […]

ಲಡಾಖಿನ ಗಾಯಗಳು ಮಾಯುವುದು ಎಂದು?

ಕಾಶ್ಮೀರ-ಜಮ್ಮು, ಲಡಾಖ್‌ ಸೇರಿದಂತೆ ಹಿಮಾವೃತ ಪರ್ವತಗಳು ಮತ್ತು ಅಲ್ಲಿನ ವಾಸಿಗಳು ಗಾಯಗೊಂಡಿದ್ದಾರೆ. ದೇಶದ ರಕ್ಷಣಾ ಕಾರ್ಯತಂತ್ರದ ದೃಷ್ಟಿಯಲ್ಲಿ ಲಡಾಖ್ ವಿಶಿಷ್ಟ ಸ್ಥಾನ ಹೊಂದಿದೆ; ಪಶ್ಚಿಮದಲ್ಲಿ ಪಾಕಿಸ್ತಾನ ಆಕ್ರಮಿತ ಪ್ರದೇಶ(ಪಿಒಕೆ) ಮತ್ತು ಪೂರ್ವದಲ್ಲಿ ಚೀನಾ ನಿಯಂತ್ರಿತ ಟಿಬೆಟ್ ಇದೆ. ದೇಶದ ಉತ್ತರ ಗಡಿಯನ್ನು ಲಡಾಖಿನ ಹಿಮಭರಿತ ಶಿಖರಗಳು ಮತ್ತು ಕಣಿವೆಗಳು ಬಹಳ ಹಿಂದಿನಿಂದಲೂ ಕಾಯ್ದುಕೊಂಡಿದೆ. ಆದರೆ, ಇಂದು ಲಡಾಖ್‌ ಜನರಲ್ಲಿ ಅಸಮಾಧಾನ ಕುದಿಯುತ್ತಿದೆ. ಲೆಹ್‌ ಅಪೆಕ್ಸ್‌ ಬಾಡಿ(ಎಲ್ಎಬಿ)‌ ಮಾತುಕತೆಯಿಂದ ಹಿಂದೆ ಸರಿದಿರುವುದರಿಂದ, ಎಲ್ಲವೂ ಅಯೋಮಯವಾಗಿದೆ. ಕೇಂದ್ರ ಸರ್ಕಾರ ಆಗಸ್ಟ್ […]

ಅರುಂಧತಿ ಆತ್ಮಕಥನ: ಮೇರಿ ಅವರ ಕ್ರಾಂತಿ ಇನ್ನೂ ಅಪೂರ್ಣ

ನರ್ಮದಾ ಆಂದೋಲನ ಕುರಿತ ಅರುಂಧತಿ ರಾಯ್‌ ಅವರ ಲೇಖನಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಬ್ರಿಟಿಷ್‌ ಲೇಖಕ ಮತ್ತು ಸಾಂಸ್ಕೃತಿಕ ಚಿಂತಕ ಜಾನ್‌ ಬರ್ಗರ್‌, ʻನಿಮ್ಮ ಕಾದಂಬರಿಗಳು ಮತ್ತು ಕಾದಂಬರಿಯೇತರ ಬರಹಗಳು ನಿಮ್ಮೆರಡು ಕಾಲುಗಳಂತೆ ಜಗತ್ತಿನೆಲ್ಲೆಡೆ ಸುತ್ತುತ್ತವೆʼ ಎಂದು ಹೇಳಿದ್ದರು. ಇದನ್ನು ʻಮದರ್‌ ಮೇರಿ ಕಮ್ಸ್‌ ಟು ಮಿʼ ಹೊತ್ತಗೆಯಲ್ಲಿ ಉಲ್ಲೇಖಿಸಿರುವ ಅರುಂಧತಿ, ʼತಮ್ಮ ಎರಡು ರೀತಿಯ ಬರಹಗಳು ಒಂದರೊಂದಿಗೆ ಇನ್ನೊಂದು ಸಂಘರ್ಷದಲ್ಲಿ ಇಲ್ಲ ಎಂಬುದನ್ನು ಗುರುತಿಸಿದ ಕೆಲವೇ ಕೆಲವು ಜನರಲ್ಲಿ ಬರ್ಗರ್‌ ಒಬ್ಬರುʼ ಎಂದು ಹೇಳಿಕೊಂಡಿದ್ದಾರೆ. ಅರುಂಧತಿ ಅವರ […]

ಮತ ಕಳವು ಮತ್ತು ಚುನಾವಣೆ ಆಯೋಗದ ವಿಶ್ವಾಸಾರ್ಹತೆ ಪ್ರಶ್ನೆ

ರಾಹುಲ್ ಗಾಂಧಿ ಆಗಸ್ಟ್ 7, 2025 ರಂದು ಪತ್ರಿಕಾಗೋಷ್ಠಿಯಲ್ಲಿ ʻ1,00,250 ಮತ ಕಳವುʼ ಆರೋಪ ಹೊರಿಸಿದರು. ಆದರೆ, ಈ ಕುರಿತು ತನಿಖೆ ನಡೆಸದ ಚುನಾವಣೆ ಆಯೋಗವು ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಬೇಕೆಂದು ರಾಹುಲ್‌ ಅವರಿಗೆ ನೋಟಿಸ್‌ ನೀಡಿತು; ಸಂದೇಶವಾಹಕನಿಗೆ ಗುಂಡಿಕ್ಕಿ ಸಂದೇಶವನ್ನು ನಿರ್ಲಕ್ಷಿಸಲು ಮುಂದಾಯಿತು. ಇಂಡಿಯಾ ಒಕ್ಕೂಟ ಮತ ಕಳವು ಪ್ರತಿಭಟಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ; ಇದೇ ಹೊತ್ತಿನಲ್ಲಿ ʻಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗಲೇ ಮತಪಟ್ಟಿ ಸಿದ್ಧಪಡಿಸಲಾಗಿತ್ತುʼ ಎಂದ ಸಚಿವ ಕೆ.ಎನ್.ರಾಜಣ್ಣ […]

ಲಾಭಕೋರತನ, ಮಿಲಿಟರೀಕರಣ ಹಾಗೂ ಹವಾಮಾನ ಬದಲಾವಣೆ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಪೋಟದಿಂದ ಊರೊಂದು ಕೊಚ್ಚಿಹೋಗಿದೆ. ಯುರೋಪಿನ ನಾಗರಿಕರು ಉಷ್ಣ ಅಲೆಯಿಂದ ಬಳಲುತ್ತಿರುವ ಹೊತ್ತಿನಲ್ಲೇ ಅಮೆರಿಕ ಪ್ರವಾಹ/ಚಂಡಮಾರುತಕ್ಕೆ ಈಡಾಗಿದೆ. ಆಗ್ನೇಯ ಏಷ್ಯಾದ ದೇಶಗಳಲ್ಲಿ ಮಳೆ ಋತುಗಳೇ ಬದಲಾಗಿವೆ. ನೇಚರ್‌ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಪ್ರಕಾರ, ಪ್ರತಿದಿನ ವಾತಾವರಣಕ್ಕೆ ಬಿಡುಗಡೆಯಾಗುವ ಇಂಗಾಲದ ಡೈಆಕ್ಸೈಡ್‌ ಪ್ರಮಾಣ 90.5 ದಶಲಕ್ಷ ಟನ್‌ ಮುಟ್ಟಿದೆ (2020). 1850ರಲ್ಲಿ ಭೂಮಿಯ ತಾಪಮಾನವನ್ನು ದಾಖಲಿಸಲು ಆರಂಭಿಸಿದ ಬಳಿಕ 2024ರಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾಗಿದೆ. ಹವಾಮಾನ ಸಂಕಷ್ಟ ಎನ್ನುವುದು ಹೊಸಿಲು ದಾಟಿ ಒಳಗೆ ಪ್ರವೇಶಿಸಿದೆ. ‌ಇದರ […]

ನ್ಯಾಯಾಂಗದ ಮೇಲೆ ಹಿಡಿತ ಸಾಧಿಸುವ ಪ್ರಯತ್ನ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ʻಆಪರೇಷನ್‌ ಸಿಂಧೂರʼ ಸರ್ಕಾರ-ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ಈ ಗದ್ದಲದಿಂದ ನ್ಯಾಯಾಂಗ, ಕಾರ್ಯಾಂಗ ಮತ್ತು ನ್ಯಾಯಾಧೀಶರ ನೇಮಕ-ವರ್ಗಾವಣೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದ ನ್ಯಾಯಾಧೀಶ ನ್ಯಾ.ಯಶವಂತ್‌ ವರ್ಮಾ ಅವರ ಪ್ರಕರಣ ಹಿನ್ನೆಲೆಗೆ ಸರಿದಿದೆ. ಮಾರ್ಚ್‌ 14, 2025ರಂದು ದಿಲ್ಲಿ ಹೈಕೋರ್ಟಿನ ಹಿರಿಯ ನ್ಯಾಯಾಧೀಶ ನ್ಯಾ. ಯಶವಂತ್‌ ವರ್ಮಾ ಅವರ ಅಧಿಕೃತ ನಿವಾಸದ ಹೊರ ಮನೆಯಲ್ಲಿ ಸುಟ್ಟ 500 ರೂ. ನೋಟುಗಳ ಚೀಲಗಳು ಸಿಕ್ಕಿದವು. ಸುಪ್ರೀಂ ಕೋರ್ಟ್‌ ಮು.ನ್ಯಾ. ಸಂಜೀವ್‌ ಖನ್ನಾ ಅವರು ಈ […]

ಚುನಾವಣೆ ಆಯೋಗದ ಕುತಂತ್ರ ಮತ್ತು ವೋಟ್‌ಬಂದಿ

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಯನ್ನು ʻಅದೊಂದು ಸಾಂವಿಧಾನಿಕ ಹೊಣೆಗಾರಿಕೆʼ ಎಂದಿರುವ ಸುಪ್ರೀಂ ಕೋರ್ಟ್‌(ಜುಲೈ 10,2025 ರಂದು), ಪ್ರಕ್ರಿಯೆಯನ್ನು ಮುಂದುವರಿಸಲು ಅನುಮತಿ ನೀಡಿದೆ. ತೀರ್ಪಿನಿಂದ ಉತ್ತೇಜಿತವಾಗಿರುವ ಆಯೋಗ, ದೇಶಾದ್ಯಂತ ಈ ಪ್ರಕ್ರಿಯೆಯನ್ನು ನಡೆಸುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಲೋಪಗಳಿವೆ ಎಂದು ವಿಡಿಯೋ ಮಾಡಿದ್ದ ಪತ್ರಕರ್ತ/ಯುಟ್ಯೂಬರ್‌ ಅಜಿತ್‌ ಅಂಜುಂ ಮೇಲೆ ಜುಲೈ 15ರಂದು ಎಫ್‌ಐಆರ್‌ ದಾಖಲಿಸಲಾಗಿದೆ. ಪರಿಷ್ಕರಣೆಯನ್ನು ವಿರೋಧಿಸಿದ್ದ ಪ್ರತಿ ಪಕ್ಷಗಳು, ಸುಪ್ರೀಂ ಮೆಟ್ಟಿಲೇರಿವೆ. ಜುಲೈ 28ರಂದು ಈ ಸಂಬಂಧ ವಿಚಾರಣೆ ಬಾಕಿ […]

Back To Top