Category: ಋತ ಮೀಡಿಯಾ

ಋತ ಮೀಡಿಯಾ, ಕೃಷಿ-ಗ್ರಾಮೀಣಾಭಿವೃದ್ಧಿ, ಪರಿಸರಜೀವಿಶಾಸ್ತ್ರ, ವಿಜ್ಞಾನ-ತಂತ್ರಜ್ಞಾನ, ಹಸಿರು ಉದ್ಯಮ, ಬ್ಯಾಂಕಿಂಗ್-ವಿಮೆ-ಹಣಕಾಸು ಮಾರುಕಟ್ಟೆ ಇತ್ಯಾದಿ ಕ್ಷೇತ್ರಗಳನ್ನು ಆದ್ಯತೆಯಾಗುಳ್ಳ ಸುದ್ದಿ ಮಾಧ್ಯಮ. ಈ ಸಂಬಂಧಿತ ಸುದ್ದಿ, ಪಾಡ್, ವಿಡಿಯೋ, ಡಾಕ್ಯುಮೆಂಟರಿ ಇತ್ಯಾದಿ ಪ್ರಕಟಣೆ ನಮ್ಮ ಉದ್ದೇಶ.

ಅರಾವಳಿ ಪರ್ವತಶ್ರೇಣಿ ಮೇಲೆ ಉದ್ಯಮದ ಕಾಕದೃಷ್ಟಿ

ಸುಪ್ರೀಂ ಕೋರ್ಟ್‌ ಡಿಸೆಂಬರ್‌ 29, 2025ರಂದು ಅರಾವಳಿಯ ಹೊಸ ವ್ಯಾಖ್ಯೆಗೆ ತಡೆ ನೀಡಿದೆ ಮತ್ತು ಈ ಸಂಬಂಧ ಅಧ್ಯಯನ ನಡೆಸಲು ಉನ್ನತಾಧಿಕಾರ ಸಮಿತಿ ರಚಿಸಬೇಕೆಂದು ಹೇಳಿದೆ. ಇದರಿಂದ ಬೀಸುವ ದೊಣ್ಣೆಯಿಂದ ಸದ್ಯಕ್ಕೆ ತಪ್ಪಿಸಿಕೊಂಡಂತಾಗಿದೆ. ಆದರೆ, ಪ್ರಶ್ನೆ ಇರುವುದು- ಪರಿಸರ ಮಂತ್ರಾಲಯದ ಅಧಿಕಾರಿಗಳು ನೀಡಿದ ವ್ಯಾಖ್ಯೆಯನ್ನು ನ್ಯಾಯಾಲಯ ಈಮೊದಲು ಒಪ್ಪಿದ್ದಾದರೂ ಏಕೆ? ನ್ಯಾಯಾಲಯಕ್ಕೆ ವಾಸ್ತವ ಸಂಗತಿ ತಿಳಿಸದೆ ಮುಚ್ಚಿಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ತನ್ನದೇ ಸಚಿವಾಲಯದ ಅಡಿ ಬರುವ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ)ಯ ಶಿಫಾರಸುಗಳನ್ನು ಕೂಡ ಪರಿಸರ ಸಚಿವಾಲಯ […]

ರಿತ್ವಿಕ್‌ ಘಟಕ್‌ 100: ನೋವಿಗದ್ದಿದ, ಸ್ಪಂದನಶೀಲ ಕ್ಯಾಮೆರಾ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಜೀವವಿಮೆ ಕ್ಷೇತ್ರದಲ್ಲಿ ವಿದೇಶಿ ಹೂಡಿಕೆ, ಸುರಕ್ಷತೆಯ ಖಾತ್ರಿಯಿಲ್ಲದ ಅಣುಶಕ್ತಿ ಕ್ಷೇತ್ರದಲ್ಲಿ ಖಾಸಗಿಯವರಿಗೆ ಅನುಮತಿ ನೀಡುವಿಕೆ ಮಸೂದೆ ಯಲ್ಲದೆ, ಗ್ರಾಮೀಣರ ಜೀವನಾಡಿಯಾಗಿದ್ದ ನರೇಗಾದ ಹೆಸರು ಬದಲಿಸಿ ವಿರೂಪಗೊಳಿಸಲಾಗಿದೆ. ಜನಸಾಮಾನ್ಯರ ಹಿತಾಸಕ್ತಿಗೆ ಧಕ್ಕೆ ತರುವ ಇಂಥ ಮಸೂದೆಗಳ ನಡುವೆಯೇ ಕಟ್ಟಾ ಸಿದ್ಧಾಂತಿ, ಮೂರ್ತಿಭಂಜಕ ಮತ್ತು ಸಿನೆಮಾ ಮಾಧ್ಯಮವನ್ನು ಮಾನವೀಯಗೊಳಿಸಿದ ಚಿತ್ರ ನಿರ್ದೇಶಕ ರಿತ್ವಿಕ್‌ ಘಟಕ್ ನೂರು ವರ್ಷ(ನವೆಂಬರ್‌ 4, 1925- ಫೆಬ್ರವರಿ 6,1976) ಪೂರೈಸಿದ್ದಾರೆ. ಬಂಗಾಳದ ಖ್ಯಾತ ತ್ರಿವಳಿ ನಿರ್ದೇಶಕರಲ್ಲಿ ಘಟಕ್‌ ಕಿರಿಯರು(ಸತ್ಯಜಿತ್‌ ರೇ, ಮೃಣಾಲ್‌ […]

ಮಹುವಾದ ಘಮಲು ಮತ್ತು ಪುಟ್ಟ ಹಕ್ಕಿಯ ಅಳಲು

ಸುಪ್ರೀಂ ಕೋರ್ಟ್‌ ತನ್ನ ನವೆಂಬರ್‌ 2025ರ ಆದೇಶದಲ್ಲಿ ಸಾರಂಡದ 314 ಚದರ ಕಿಲೋಮೀಟರ್‌ ಕಾಡನ್ನು ವನ್ಯಜೀವಿಧಾಮ ಎಂದು ಘೋಷಿಸಬೇಕು; ಕಬ್ಬಿಣದ ಸುಸ್ಥಿರ ಗಣಿಗಾರಿಕೆ ಮತ್ತು ಜೈವಿಕ ವೈವಿಧ್ಯದ ನಡುವೆ ಸಮತೋಲನ ಸಾಧಿಸಬೇಕು ಎಂದು ಹೇಳಿತು. ಸಾರಂಡ ಜಗತ್ತಿನ ಅತ್ಯಂತ ಸಮೃದ್ಧ ಸಾಲ್‌ ಮರಗಳ ಕಾಡು. ಈ ಕಾಡಿನಲ್ಲಿ ನಿರ್ವಂಶದ ಅಂಚಿನಲ್ಲಿರುವ ಆಮೆ, 4 ಕೊಂಬುಗಳ ಜಿಂಕೆ, ಏಷ್ಯಾದ ತಾಳೆ ಮರದ ಪುನುಗಿನ ಬೆಕ್ಕು ಅಲ್ಲದೆ ಕಾಡಾನೆಗಳಿವೆ. ಈ ಅರಣ್ಯದಲ್ಲಿ ಶತಮಾನಗಳಿಂದ ಹೋ, ಮುಂಡಾ, ಉರಾಓನ್‌ ಮತ್ತಿತರ ಆದಿವಾಸಿಗಳು […]

ಇಂಡಿಗೋ ಪ್ರಕರಣ: ಏಕಸ್ವಾಮ್ಯ, ದ್ವಿಸ್ವಾಮ್ಯದ ವಿಪತ್ತಿನ ನಿದರ್ಶನ

ಇಂಡಿಗೋ ವಿಮಾನಗಳ ರದ್ದುಗೊಳಿಸುವಿಕೆಯಿಂದ ದೇಶದೆಲ್ಲೆಡೆ ಪ್ರಯಾಣಿಕರು ನರಳಿದರು ಮತ್ತು ನರಳುತ್ತಿದ್ದಾರೆ. ಟಿಕೆಟ್‌ ಮೊತ್ತ ಮರುಪಾವತಿಸುವುದಾಗಿ ಮತ್ತು 10ರಿಂದ 15 ದಿನಗಳಲ್ಲಿ ಸಂಚಾರ ಸಹಜ ಸ್ಥಿತಿಗೆ ಮರಳಲಿದೆ ಎಂದು ಇಂಡಿಗೋ ಹೇಳಿಕೊಂಡಿದೆ. ದೇಶದಲ್ಲಿ ವಿಮಾನದಲ್ಲಿ ಸಂಚರಿಸುವವರ ಪ್ರಮಾಣ ಶೇ.3-4. ಆದ್ದರಿಂದ, ಇದು ಜನಸಾಮಾನ್ಯರ ಸಮಸ್ಯೆಯಲ್ಲ; ನಾವು ತಲೆ ಕೆಡಿಸಿ ಕೊಳ್ಳಬೇಕಿಲ್ಲ ಎಂದುಕೊಳ್ಳಬಾರದು. ಏಕೆಂದರೆ, ಈ ಪ್ರಕರಣ ಯಾವುದೇ ಕ್ಷೇತ್ರದಲ್ಲಿ ಏಕಸ್ವಾಮ್ಯ-ದ್ವಿಸ್ವಾಮ್ಯದಿಂದ ಆಗಬಹುದಾದ ವಿಪತ್ತಿಗೆ ಹಿಡಿದ ಕನ್ನಡಿ. 2007ರಲ್ಲಿ ಹೈಕೋರ್ಟ್‌ ಆದೇಶದ ಮೇರೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡೈರೆಕ್ಟೊರೇಟ್‌ ಜನರಲ್‌ ಆಫ್‌ […]

ಹೊಸ ಕಾರ್ಮಿಕ ಸಂಹಿತೆಗಳಿಂದ ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಸಿಗುವುದೇ?

ಒಕ್ಕೂಟ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ಸಂಯೋಜಿಸಿ, ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಪರಿಚಯಿಸಿದೆ. ವೇತನಗಳ ಸಂಹಿತೆ (2019)ಯು ವೇತನ ಪಾವತಿ ಕಾಯಿದೆ 1936, ಕನಿಷ್ಠ ವೇತನ ಕಾಯಿದೆ 1948, ಬೋನಸ್ ಪಾವತಿ ಕಾಯಿದೆ 1965 ಹಾಗೂ ಸಮಾನ ಸಂಭಾವನೆ ಕಾಯಿದೆ 1976 ರ ಕ್ರೋಡೀಕರಣ. ಇದರೊಟ್ಟಿಗೆ ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಸಾಮಾಜಿಕ ಸುರಕ್ಷೆ ಸಂಹಿತೆ 2020 ಮತ್ತು ಉದ್ಯೋಗಜನ್ಯ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿ ಒಎಸ್‌ಎಚ್‌ಡಬ್ಲ್ಯುಸಿ ಸಂಹಿತೆಯನ್ನು ಜಾರಿಗೊಳಿಸಿದೆ. 32 ರಾಜ್ಯ-ಕೇಂದ್ರಾಡಳಿತ ಪ್ರದೇಶಗಳು […]

ಸುಪ್ರೀಂ ತೀರ್ಪು ಮತ್ತು ಮಸುಕಾಗುತ್ತಿರುವ ಸಂವಿಧಾನದ ಬೆಳಕು

ನವೆಂಬರ್‌ 20ರಂದು ಎರಡು ಚರಿತ್ರಾರ್ಹ ಘಟನೆಗಳು ನಡೆದವು- ಪಟಣಾದಲ್ಲಿ ನಿತೀಶ್‌ ಕುಮಾರ್‌ ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಅವಧಿಗೆ ಅಧಿಕಾರ ಸ್ವೀಕರಿಸಿದರು ಮತ್ತು ಮುಖ್ಯ ನ್ಯಾಯಮೂರ್ತಿ ಆರ್‌. ಎಸ್‌. ಗವಾಯಿ ನೇತೃತ್ವದ ಸಂವಿಧಾನ ಪೀಠವು ರಾಜ್ಯಪಾಲರು-ರಾಷ್ಟ್ರಪತಿ ಅವರಿಗೆ ಕಡತವೊಂದಕ್ಕೆ ಸಹಿ ಹಾಕಲು ಕಾಲಾವಧಿ ವಿಧಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತು. ನಿತೀಶ್‌ ಕುಮಾರ್‌ ಮತ್ತು ಮೈತ್ರಿ ಪಕ್ಷ ಬಿಜೆಪಿ, ಚುನಾವಣೆಯನ್ನು ತಂತ್ರಗಾರಿಕೆ ಮತ್ತು ಕುಶಲತೆಯಿಂದ ತಿರುಚಿ ಜಯ ಸಾಧಿಸಿತು; ಪ್ರತಿಪಕ್ಷಗಳು ತಂತ್ರಕ್ಕೆ ಶರಣಾದವು. ಆದರೆ, ಸುಪ್ರೀಂ ಕೋರ್ಟ್‌ ತೀರ್ಪು […]

ದೇಶಿ ಕೃಷಿ ಕ್ಷೇತ್ರಕ್ಕೆ ಆಮದು-ಕುಲಾಂತರಿ ಪ್ರಹಾರ

ಡೊನಾಲ್ಡ್‌ ಟ್ರಂಪ್‌ ಅಧಿಕಾರಕ್ಕೆ ಬಂದ ಬಳಿಕ ಜಾಗತಿಕ ಮಟ್ಟದಲ್ಲಿ ಅಮೆರಿಕದ ದಬ್ಬಾಳಿಕೆ ಹೆಚ್ಚಿದೆ. ಮಾಗಾ(ಮೇಕ್‌ ಅಮೆರಿಕ ಗ್ರೇಟ್‌ ಎಗೇನ್‌) ಎಂದು ಘೋಷಿಸುತ್ತ, ಕುಸಿದಿರುವ ಉತ್ಪಾದನೆ ಪ್ರವೃತ್ತಿಯನ್ನು ಪ್ರೋತ್ಸಾಹಿ ಸಲು ಬೇರೆ ದೇಶಗಳ ಕುತ್ತಿಗೆಯನ್ನು ಹಿಚುಕಲಾಗುತ್ತಿದೆ. ಪಾಶ್ಚಾತ್ಯ ದೇಶಗಳ ದಬ್ಬಾಳಿಕೆ ಮನಸ್ಥಿತಿ ಈಗಲೂ ಬದಲಾಗಿಲ್ಲ. 19ನೇ ಶತಮಾನದಲ್ಲಿ ಚೀನಾದ ದೊರೆ ದೇಶದೆಲ್ಲೆಡೆ ಅಫೀಮನ್ನು ನಿಷೇಧಿಸಿದರು. ಭಾರತದಲ್ಲಿ ಬೆಳೆದ ಅಫೀಮನ್ನು ಚೀನಾಕ್ಕೆ ಕಳಿಸಿ ಹಣ ಲೂಟಿ ಹೊಡೆಯುತ್ತಿದ್ದ ಬ್ರಿಟಿಷ್‌ ವರ್ತಕರಿಗೆ ನಷ್ಟವುಂಟಾಗಿ, ಸಿಟ್ಟಿಗೆದ್ದರು. ವ್ಯಾಪಾರ ನೀತಿಯನ್ನು ಬದಲಿಸಬೇಕು ಹಾಗೂ ಚೀನಾದ […]

ದೇಶಕ್ಕೆ ಇನ್ನಷ್ಟು ರಾಡ್ರಿಗಸ್, ಕೌರ್‌ ಮತ್ತು ಖುರೇಷಿಗಳು ಅಗತ್ಯ

ಮಹಿಳಾ ವಿಶ್ವ ಕಪ್‌ ನಮ್ಮ ಪಾಲಾಗಿದೆ. 1983ರಲ್ಲಿ ಪುರುಷರ ವಿಶ್ವ ಕಪ್‌, 2011ರಲ್ಲಿ ಐಸಿಸಿ ವಿಶ್ವ ಕಪ್‌ ಗೆಲುವಿನ ನಂತರದ ಚರಿತ್ರಾರ್ಹ ಗೆಲುವು ಇದು. 2005ರಲ್ಲಿ ಆಸ್ಟ್ರೇಲಿಯ ಹಾಗೂ 2017ರಲ್ಲಿ ಇಂಗ್ಲೆಂಡ್‌ ವಿರುದ್ಧ ಮಹಿಳಾ ತಂಡ ಸೋಲುಂಡಿತ್ತು. ಗೆಲುವಿನ ಬಳಿಕ ತಂಡ ಘನತೆಯಿಂದ ನಡೆದುಕೊಂಡಿತು. ಪ್ರತಿಯಾಗಿ 2025ರ ಏಷ್ಯಾ ಕಪ್‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಾಯಕ ಸೂರ್ಯಕುಮಾರ್‌ ಯಾದವ್, ಎದುರಾಳಿ ತಂಡದ ನಾಯಕನ ಹಸ್ತಲಾಘವ ಮಾಡಲಿಲ್ಲ; ಎರಡು ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆ ಮತ್ತು ಕಾಶ್ಮೀರದಲ್ಲಿ […]

ಪ್ರತಿದಿನ 2,000 ರೈತರು ಬೇಸಾಯದಿಂದ ಹೊರಗೆ

ಕರ್ನಾಟಕದ ರಾಜ್ಯ ಪಕ್ಷಿ ನೀಲಕಂಠ(ಇಂಡಿಯನ್‌ ರೋಲರ್‌, ಕೊರಾಸಿಯಸ್‌ ಬೆಂಗಾಲೆನ್ಸಿಸ್)ನ ವೈಶಿಷ್ಟ್ಯವೇನೆಂದರೆ, ಅವನು ಆಂಧ್ರಪ್ರದೇಶ, ಬಿಹಾರ ಮತ್ತು ಒಡಿಷಾದ ರಾಜ್ಯ ಪಕ್ಷಿಯೂ ಹೌದು. ಒಡಿಷಾದಲ್ಲಿ ನೀಲಕಂಠನನ್ನು ತಿಹಾ ಎಂದು ಕರೆಯುತ್ತಾರೆ. ಬೇಡಿದ್ದನ್ನು ನೀಡುತ್ತಾನೆ ಎಂದು ರೈತರು ನಂಬಿರುವುದರಿಂದ, ದಸರಾ ಹಬ್ಬದಂದು ನೀಲಕಂಠನನ್ನು ನೋಡುವ ಸಂಪ್ರದಾಯವಿದೆ. ಆದರೆ, ಈ ವರ್ಷ ಮತುಪಲಿ ಗ್ರಾಮದ ರೈತ ಪಿತಬಷಾ, ಹಕ್ಕಿ ಯನ್ನು ನೋಡಲು ಹೋಗಲಿಲ್ಲ. ಏಕೆ ಎಂಬ ಪ್ರಶ್ನೆಗೆ ʼನಾನು ಬೇಡಿಕೊಳ್ಳುವುದನ್ನು ನಿಲ್ಲಿಸಿದ್ದೇನೆʼ ಎಂಬ ಪ್ರತಿಕ್ರಿಯೆ ಬಂದಿತು. 2025ರ ಸೆಪ್ಟೆಂಬರ್‌ನಲ್ಲಿ ಸುರಿದ ನಿರಂತರ […]

Back To Top