ಮಾರುಕಟ್ಟೆಗೆ ಲಾಕ್ಡೌನ್ ಅಡಚಣೆ: ಬೆಳೆದ ಬಾಳೆ ಕಡಿದ ರೈತ
ಯಲ್ಲಾಪುರ: ಲಾಕ್ಡೌನ್ ಕಾರಣದಿಂದ ಬಾಳೆಕಾಯಿಗೂ ಮಾರುಕಟ್ಟೆ ಕುಸಿದಿದೆ. ಇದರಿಂದ ಚಿಂತಿತರಾದ ತಾಲ್ಲೂಕಿನ ಗ್ರಾಮೀಣ ಪ್ರದೇಶದ ರೈತರು ಬಾಳೆ ಗೊನೆ, ಬಾಳೆ ಗಿಡಗಳನ್ನು ಕತ್ತರಿಸಿ ಹಾಕುತ್ತಿದ್ದಾರೆ. ತಾಲ್ಲೂಕು ಅಡಿಕೆಗೆ ಎಷ್ಟು ಪ್ರಖ್ಯಾತವೋ ಬಾಳೆ ಕೃಷಿಗೂ ಅಷ್ಟೇ ಪ್ರಸಿದ್ಧವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ್ರವಾಸಿಗರು ಪಟ್ಟಣದಲ್ಲಿ ಬಾಳೆಹಣ್ಣುಗಳನ್ನು ಖರೀದಿಸಿ ಮುಂದೆ ಸಾಗುತ್ತಾರೆ. ಆದರೆ, ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಾದ ಬಳಿಕ ಬಾಳೆ ಬೆಳೆಗಾರರ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಾಳೆಹಣ್ಣುಗಳನ್ನು ಬಹಳ ದಿನ ಶೇಖರಿಸಿ ಇಡಲಾಗದು. ಹಣ್ಣಾದ ನಂತರ ಅವುಗಳನ್ನು ಮಾರಾಟ ಮಾಡದಿದ್ದರೆ […]
ಮರಳಿ ಪಡೆಯಬೇಕಿರುವ ಜೀವಸಂಕುಲ ಲೋಕ
ಇಂದು ಬೆಳಗ್ಗೆ ಪತ್ರಿಕೆಯಲ್ಲಿ `ವಿಶ್ವಪರಿಸರ ದಿನ’ ಎಂದು ತಿಳಿದಾಗ ಬಾಳ್ವೆ ಮತ್ತು ಬಾಳುವೆಯ ವಿಧಾನಗಳೆರಡೂ ಬೇರೆಯಲ್ಲ ಎಂದು ಬದುಕುತ್ತಿರುವ, ನಾನು ಬಹುವಾಗಿ ಗೌರವಿಸುವ ಮೂವರ ಹೆಸರುಗಳು ಕಣ್ಣ ಮುಂದೆ ಸುಳಿದವು. ಮೇಲುಕೋಟೆಯ ಜನಪದ ಟ್ರಸ್ಟ್ನ ಸಂತೋಷ ಕೌಲಗಿ, ಎಂಬತ್ತು-ತೊಂಬತ್ತರ ದಶಕದಲ್ಲಿ ಉತ್ಸಾಹದಲ್ಲಿ, ರಾಜ್ಯದ ಆದ್ಯಂತ ಪರಿಸರದ ಕುರಿತು ಅರಿವು ಮೂಡಿಸುವ ಪ್ರಯತ್ನದಲ್ಲಿ ತೊಡಗಿದ ‘ಅಪ್ಪಿಕೋ’ ಪಾಂಡುರಂಗ ಹೆಗಡೆ ಮತ್ತು ಹಳೆಯ ಗೆಳೆಯ, ’ಗಿಡಬಾಲಕ’ ಎಲ್ಸಿ ನಾಗರಾಜ. ಅಚ್ಚರಿ ಎನ್ನುವಂತೆ ಬೆಳಗ್ಗೆ ಸಂತೋಷ ಕೌಲಗಿಯವರು ಪುಟ್ಟ ಬರಹವನ್ನು ಕೆಲವು […]
ಸೂರ್ಯ ಸತ್ತೇ ಇವುಗಳ ಸಂತತಿ ಇಲ್ಲವಾಗಬೇಕು!
ಬೇರೆ ಗ್ರಹಗಳಲ್ಲಿ ಜೀವಿಗಳಿರಬಹುದು, ಇಲ್ಲದಿರಬಹುದು. ಕಾಲವೆ ಉತ್ತರಿಸಬೇಕು. ಆದರೆ ನಮ್ಮ ಭೂಮಿಯೆ ಏಲಿಯನ್ ತರಹ ಕಾಣುವ ಜೀವಿಯೊಂದನ್ನು ವಿಕಾಸಗೊಳಿಸಿದೆ. ಸೂಕ್ಷ್ಮದರ್ಶಕದಲ್ಲಿ ಮಾತ್ರ ಕಾಣಬಹುದಾದ ಈ ಜೀವಿ 0.5 – 1.0 ಮಿ.ಮೀ. ಉದ್ದವಿದ್ದು ಆಳ ಸಾಗರದಿಂದ ಹಿಡಿದು ಮರುಭೂಮಿಯ ಮರಳು ದಿಬ್ಬಗಳವೆರೆಗೆ ಎಲ್ಲೆಡೆ ವಾಸಿಸಬಲ್ಲದು. ಪಾಚಿ ಬೆಳೆಯುವ ಸಿಹಿನೀರಿನ ಕೊಳ, ಕೆರೆ, ಸರೋವರಗಳಲ್ಲೂ ಯಥೇಚ್ಛ ಕಂಡುಬರುತ್ತದೆ. ಅಂತರಿಕ್ಷದ ನಿರ್ವಾತದಲ್ಲೂ ಸಾಯದೆ ಇರಬಲ್ಲದು. -273 ಡಿಗ್ರಿ ಸೆಲ್ಸಿಯಸ್ ಶೈತ್ಯ(Absolute Zero)ದಿಂದ ಹಿಡಿದು 100 ಡಿಗ್ರಿಗೂ ಹೆಚ್ಚಿನ ತಾಪದಲ್ಲಿ ವಾಸಿಸಬಲ್ಲದು. […]
ಜಿಎಸ್ಟಿ ವ್ಯವಸ್ಥೆ: ವಿಶ್ವಾಸಾರ್ಹತೆಗೆ ಧಕ್ಕೆ
43ನೇ ಜಿಎಸ್ಟಿ ಮಂಡಳಿ ಸಭೆ ಮುಗಿದಿದೆ. ಕರ್ನಾಟಕ ಸರ್ಕಾರ ತನಗೆ ಬರಬೇಕಿರುವ 11,000 ಕೋಟಿ ರೂ.ಗಳನ್ನು ಕೊಡಬೇಕೆಂದು “ಮನವಿ’ ಸಲ್ಲಿಸಿದೆ! ತಮಿಳುನಾಡು ಹಣಕಾಸು ಸಚಿವ ಪಳನಿವೇಲು ತ್ಯಾಗರಾಜನ್ “ಜಿಎಸ್ಟಿ ಸಮಿತಿ ಒಂದು ರಬ್ಬರ್ ಸ್ಟ್ಯಾಂಪ್’ ಎಂದು ಖಂಡಿಸಿದ್ದಾರೆ. ಜಿಎಸ್ಟಿ ಪಾಲು ಪಡೆಯುವುದು ರಾಜ್ಯಗಳ ಹಕ್ಕು. ಅದು ಕೇಂದ್ರದ ಭಿಕ್ಷೆಯಲ್ಲ. ರಾಜ್ಯಗಳಿಗೆ ಪಾಲು ಸಲ್ಲಿಸಲು ಕೇಂದ್ರ ಅಂದಾಜು 1.58 ಲಕ್ಷ ಕೋಟಿ ರೂ. ಸಾಲ ಎತ್ತಬೇಕಿದೆ. ಜಿಎಸ್ಟಿ ವ್ಯವಸ್ಥೆಯನ್ನು ಜಾರಿಗೊಳಿಸಿದ ರೀತಿ ಹಾಗೂ ಆ ವ್ಯವಸ್ಥೆಯೇ ದೋಷಪೂರಿತ/ಅವೈಜ್ಞಾನಿಕವಾಗಿತ್ತು. ಜಿಎಸ್ಟಿ […]
ಪಿಯುಸಿಗೆ ಆನ್ಲೈನ್ ಪರೀಕ್ಷೆ
2ನೇ ಪಿಯುಸಿ ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸಲು ಸಾಧ್ಯವಿದೆಯೇ ಎಂದು ಪಿಯು ಇಲಾಖೆ ಪರಿಶೀಲಿಸುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ತರಗತಿಯಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಕ್ಷೀಣವಾಗಿದೆ. ಹೀಗಾಗಿ, ಪ್ರಮುಖ ವಿಷಯಗಳಲ್ಲಿ 90 ನಿಮಿಷಗಳ ಪರೀಕ್ಷೆ ನಡೆಸಬಹುದು ಹಾಗೂ ಬಹು ಆಯ್ಕೆ ಪ್ರಶ್ನೆಗಳನ್ನು ಮಾತ್ರ ಕೇಳಬೇಕು ಎನ್ನುವ ಸಲಹೆಗಳು ಇಲಾಖೆಗೆ ಬಂದಿವೆ. ಆದರೆ, ಆನ್ಲೈನ್ ಪರೀಕ್ಷೆ ನಡೆಸಲು ಅಂತರ್ಜಾಲ ಸಂಪರ್ಕ, ವಿದ್ಯುತ್ ಸಂಪರ್ಕ, ಮಾತ್ರವಲ್ಲದೆ ಮೂಲಭೂತ ವ್ಯವಸ್ಥೆಯ ಕೊರತೆ ಇದೆ. ಇದನ್ನು ನಿವಾರಿಸಲು ಎಂಜಿನಿಯರಿಂಗ್ ಕಾಲೇಜುಗಳನ್ನು ಬಳಸಿಕೊಳ್ಳಬಹುದೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಆನ್ಲೈನ್ […]
ಮೇಕೆದಾಟು ಜಂಟಿ ಸಮಿತಿ: ರಾಜ್ಯ ಆಕ್ಷೇಪ
ಮೇಕೆದಾಟುವಿನಲ್ಲಿ ಅಕ್ರಮ ನಿರ್ಮಾಣ ನಡೆದಿದೆಯೇ ಎಂಬುದನ್ನು ಪರಿಶೀಲಿಸಲು ಜಂಟಿ ಸಮಿತಿ ರಚನೆಯನ್ನು ಪ್ರಶ್ನಿಸುವುದಾಗಿ ರಾಜ್ಯ ಹೇಳಿದೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ದಕ್ಷಿಣ ವಲಯದ ಪೀಠ ಸೂಮೋಟೋ ಪ್ರಕರಣ ದಾಖಲಿಸಿಕೊಂಡು, ಯೋಜನಾ ಸ್ಥಳದಲ್ಲಿ ಪರಿಸರ ಪರಿಣಾಮ ಲೆಕ್ಕಾಚಾರವನ್ನು ಉಲ್ಲಂಘಿಸಿ ಏನಾದರೂ ಕಾಮಗಾರಿ ನಡೆದಿದೆಯೇ ಎನ್ನುವುದನ್ನು ಪರಿಶೀಲಿಸಲು ಜಂಟಿ ಸಮಿತಿಯನ್ನು ರಚಿಸಿತ್ತು. ಈ ಆದೇಶವನ್ನು ಹಿಂಪಡೆಯಬೇಕೆಂದು ಅರ್ಜಿ ಸಲ್ಲಿಸುವುದಾಗಿ ಸಂಪುಟ ಸಭೆ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಜಂಟಿ ಸಮಿತಿಯು ಜುಲೈ 5ರಂದು ವರದಿ ನೀಡಬೇಕೆಂದು ಎನ್ಜಿಟಿ […]
ಕೋವಿಡ್ ಲಸಿಕೆ ಕೊರತೆಗೆ ರಾಜ್ಯಗಳು ಹೊಣೆ: ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರದ ಕೋವಿಡ್ ಸಲಹೆಗಾರ ವಿ.ಕೆ.ಪಾಲ್, ಲಸಿಕೆ ಕೊರತೆಗೆ ರಾಜ್ಯ ಸರ್ಕಾರಗಳೇ ಹೊಣೆ ಎನ್ನುವ ಮೂಲಕ ಕೈ ತೊಳೆದುಕೊಂಡಿದ್ದಾರೆ. ರಾಜ್ಯ ಹಾಗೂ ದೇಶದೆಲ್ಲೆಡೆ ಲಸಿಕೆ ಕೊರತೆ ತೀವ್ರವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರೈಕೆ ಕೊರತೆ ಇದ್ದು, ಖಾಸಗಿ ಆಸ್ಪತ್ರೆಗಳು ಡೋಸ್ ಒಂದಕ್ಕೆ 800 ರಿಂದ 1400 ರೂ.ವರೆಗೆ ತೆಗೆದುಕೊಳ್ಳುತ್ತಿವೆ. ಜತೆಗೆ, ಸೇವಾ ಶುಲ್ಕವನ್ನು 100 ರೂ.ನಿಂದ 300 ರೂ.ಗೆ ಹೆಚ್ಚಿಸಿಕೊಂಡಿವೆ. ರಾಜ್ಯ ಸರ್ಕಾರಗಳು ನೇರವಾಗಿ ಅಂತಾರಾಷ್ಟ್ರೀಯ ಟೆಂಡರ್ ಕರೆದು, ಲಸಿಕೆ ಪಡೆದುಕೊಳ್ಳಲು ಲಸಿಕೆಗೆ ಸಂಬಂಧಿಸಿದಂತೆ ಸುಪ್ರೀಂ/ಹೈ ಕೋರ್ಟ್ ಸರ್ಕಾರಗಳಿಗೆ […]
ಮೇಕೆದಾಟು: ಎನ್ಜಿಟಿಯಿಂದ ಜಂಟಿ ಸಮಿತಿ
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ದಕ್ಷಿಣ ಪೀಠ ಮೇಕೆದಾಟು ಪ್ರದೇಶದಲ್ಲಿ ಅಕ್ರಮ ನಿರ್ಮಾಣ ಕಾರ್ಯಗಳು ನಡೆಯುತ್ತಿವೆಯೇ ಎನ್ನುವುದನ್ನು ಪರಿಶೀಲಿಸಲು ಜಂಟಿ ಸಮಿತಿಯನ್ನು ರಚಿಸಿದೆ. ಜುಲೈ 5ರೊಳಗೆ ವರದಿ ಸಲ್ಲಿಸಬೇಕೆಂದು ನಿರ್ದೇಶಿಸಿದೆ. ಈ ಕುರಿತು ಮಾಧ್ಯಮದಲ್ಲಿ ವರದಿಯೊಂದು ಪ್ರಕಟವಾಗಿತ್ತು. ಸೋಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಎನ್ಜಿಟಿ, ಪರಿಸರ ಪರಿಣಾಮ ಲೆಕ್ಕಾಚಾರ ನಡೆಸದೆ ಹಾಗೂ ಅಗತ್ಯವಿರುವ ಅನುಮತಿಗಳನ್ನು ಪಡೆಯದೆ, ನಿರ್ಮಾಣ ಕಾರ್ಯಕ್ಕೆ ಮುಂದಾಗುವುದು ಅಕ್ರಮವಾಗಲಿದೆ ಎಂದಿದೆ. ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ. ****
ಐಟಿ ಕಾಯಿದೆ: ಹೈಕೋರ್ಟ್ ಕದ ತಟ್ಟಿದ ವಾಟ್ಸ್ ಆಪ್
ನಿಗೂಢಲಿಪಿ(ಎನ್ಕ್ರಿಪ್ಷನ್)ಯನ್ನು ಬಹಿರಂಗಗೊಳಿಸುವುದು ನಾಗರಿಕರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದಿರುವ ವಾಟ್ಸ್ ಆಪ್, ನೂತನ ಐಟಿ ಕಾಯಿದೆಯನ್ನು ಪ್ರಶ್ನಿಸಿ ದಿಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಯಾವ ಮೂಲಭೂತ ಹಕ್ಕು ಕೂಡ ನಿರಂಕುಶವಲ್ಲ ಎಂದು ಹೇಳಿದೆ. ಹೊಸ ಐಟಿ ಕಾಯಿದೆಯಿಂದ ನಾಗರಿಕರ ಖಾಸಗಿತನದ ಹಕ್ಕು ಹಾಗೂ ವಾಕ್-ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ. ಕೆ.ಎಸ್.ಪುಟ್ಟಸ್ವಾಮಿ ವಿರುದ್ಧ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಎಂದಿದೆ. ಮಧ್ಯಸ್ಥ ಕಂಪನಿಗಳು ಮಾಹಿತಿಯನ್ನು ಸೃಷ್ಟಿಸಿದವರ ಗುರುತನ್ನು ನೀಡುವುದು […]