ರೈತರ ಕಣ್ಣು ಸುಪ್ರೀಂ ಕೋರ್ಟ್ನತ್ತ
ಇತ್ತೀಚಿನ ಮೂರು ಕಾಯ್ದೆಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತು ರೈತರ ಪ್ರತಿನಿಧಿಗಳ ನಡುವಣ ಏಳನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. ಹಾಗಾಗಿ, ಈಗ ಎಲ್ಲರ ಕಣ್ಣು ಸುಪ್ರೀಂ ಕೋರ್ಟ್ನತ್ತ ನೆಟ್ಟಿದೆ. ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರವು ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಪ್ರಶ್ನಿಸಿ ಮತ್ತು ಕಾಯ್ದೆಗಳಿಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಎಂಟು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಲಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಮೃತಪಟ್ಟ 50ಕ್ಕೂ ಹೆಚ್ಚು ರೈತರಿಗೆ ಸಭೆಯ ಆರಂಭದಲ್ಲಿಯೇ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ರೈತ ಮುಖಂಡರು ಮುಂದಿಟ್ಟ […]




