ರೈತ ಹೋರಾಟ ನ್ಯಾಯಯುತ
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಸುಧಾರಣೆಗಾಗಿ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರಿಗೆ ಅಹಿಂಸಾತ್ಮಕವಾದ ಪ್ರತಿಭಟನೆ ನಡೆಸಲು ಸಂಪೂರ್ಣ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ. ಈಗ ಸೃಷ್ಟಿಯಾಗಿರುವ ಬಿಕ್ಕಟ್ಟು ಪರಿಹರಿಸುವುದಕ್ಕಾಗಿ ಕೃಷಿ ಪರಿಣತರು ಮತ್ತು ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ತಾನು ರಚಿಸಲಿರುವುದರಿಂದ, ಮೂರು ಕಾಯ್ದೆಗಳ ಜಾರಿಯನ್ನು ಸರ್ಕಾರವು ತಡೆ ಹಿಡಿಯಬಹುದು ಎಂಬ ಸಲಹೆಯನ್ನೂ ನ್ಯಾಯಾಲಯವು ಮುಂದಿಟ್ಟಿದೆ. ಮುಕ್ತ ಸಂಚಾರ ಮತ್ತು ಅಗತ್ಯ ವಸ್ತುಗಳು ಹಾಗೂ ಇತರ […]




