ಮೀರುವುದು ಕ್ರಿಯಾಪದ

 – ವೆಂಕಟ್ರಮಣ ಗೌಡ ಬರೆಯುವುದಿದೆ ಕಥೆಯೊಂದನು ಅವಳೆದೆಯೊಳಗಿನ ಹೂದೋಟವ ತಂದಿರಿಸಿ ಸುಡು ಹಗಲಲಿ ಮೆರೆಸಿ ಮಧುರಾತ್ರಿಯನು ಎಲ್ಲ ಮರೆಯುವಂತೆ ಆಹಾ ಎನ್ನಬೇಡ ರಮ್ಯತೆಯ ಅಧಿದೇವತೆಯೆ, ಮರೆಯುವುದೆಂದರೆ ಇಲ್ಲಿ ನೆನಪುಗಳ ಅಗ್ನಿಪರೀಕ್ಷೆ ಕೇಳು ರಮ್ಯದೇವತೆಯೆ, ಸುಂದರ ಸುಳ್ಳುಗಳ ಹೊದ್ದ ನಿನ್ನಂತಲ್ಲ ಅವಳು ಅವಳೊಳಗಿವೆ ನಿನ್ನ ಬಿನ್ನಾಣವನೆಲ್ಲ ಬಯಲಿಗಿಳಿಸುವ ನಿಗಿನಿಗಿ ಕ್ರಿಯಾಪದಗಳು ಕಥೆ ಬರೆಯುವುದೆಂದರೂ ಹೀಗೆಯೇ ಕ್ರಿಯಾಪದಗಳ ನಡುವೆ ಕನಲುವುದು ಮೊಗೆಮೊಗೆದು ನೆನಪುಗಳೊಳಗೆ ಬಂಧಿಯಾಗುವುದು ವಿಫಲ ಪ್ರೇಮದ ಅಸಹನೀಯತೆಯಲ್ಲಿ ಬೆಳಗುವುದು ಬರೆಯುವುದಿದೆ ಕಥೆಯೊಂದನು ಬರೆಯಲನುವಾಗುವುದನ್ನೇ ಕಾದು ಮೀರುವುದನ್ನು

ಮೋಹಕತೆಯಾಚೆಗಿನ ಕವಿತೆಗೆ ಕೈಚಾಚಿದ ಧ್ಯಾನ

ವೆಂಕಟ್ರಮಣ ಗೌಡ “ಈ ಚಿಟ್ಟೆ ಕಾಡಿದ ಹಾಗೆ” ಸುಚಿತ್ರಾ ಹೆಗಡೆ ಅವರ ಕವಿತೆಗಳ ಮೊದಲ ಸಂಕಲನ. ಅದೇ ಹೆಸರಿನ ಕವಿತೆಯ ಪ್ರಸ್ತಾಪದೊಂದಿಗೆ ಈ ಪುಸ್ತಕದ ಕುರಿತು ಕೆಲವು ಮಾತುಗಳನ್ನು ಹೇಳಲು ನನಗೆ ಇಷ್ಟ. ಬೇಂದ್ರೆಯವರ ‘ಪಾತರಗಿತ್ತಿ ಪಕ್ಕ’ ಕನ್ನಡ ಕಾವ್ಯವನ್ನು ಎಂದೆಂದೂ ಆವರಿಸಿಕೊಂಡೇ ಇರುವ ದಿವ್ಯ. ‘ಪಾತರಗಿತ್ತಿ ಪಕ್ಕ ನೋಡಿದ್ಯೇನ ಅಕ್ಕ’ ಎಂದು ಶುರುವಾಗುವ ಅದು, ‘ಗಾಳಿ ಕೆನೀಲೇನ ಮಾಡಿದ್ದಾರ ತಾನ’ ಎಂದು ವಿಸ್ತರಿಸಿಕೊಳ್ಳುತ್ತ, ಕೊನೆಗೆ ‘ಇನ್ನು ಎಲ್ಲಿಗೋಟ? ನಂದನದ ತೋಟ!’ ಎಂದು ಅನೂಹ್ಯವಾದುದರ, ಅತೀತವಾದುದರ ಕಡೆಗೆ […]

ಉಮೇಶ ನಾಯ್ಕರ ಕವಿತೆಗಳು: ನಿಷ್ಕಳಂಕ ಜಗಳದಲ್ಲಿನ ನಿಶ್ಚಯ

ವೆಂಕಟ್ರಮಣ ಗೌಡ ‘ಕತ್ತಲ ಧ್ಯಾನಿಸಿದ ನಂತರ’ ಉಮೇಶ ನಾಯ್ಕ ಅವರ ಎರಡನೇ ಕವನ ಸಂಕಲನ (ಪ್ರಕಟಣೆ ವರ್ಷ: 2021). ಇದಕ್ಕೂ 9 ವರ್ಷಗಳ ಕೆಳಗೆ ಅವರ ಮೊದಲ ಸಂಕಲನ ‘ಪೂರ್ಣ ಸತ್ಯವಲ್ಲ ರಸ್ತೆಗಳು’ (2012) ಪ್ರಕಟವಾಗಿತ್ತು. ಮೊದಲನೆಯದರಲ್ಲಿ 40 ಮತ್ತು ಎರಡನೆಯ ಸಂಕಲದಲ್ಲಿ 45 ಕವಿತೆಗಳಿವೆ. ‘ಲೆಕ್ಕಕ್ಕೆ ಅಷ್ಟಾಗಿವೆ’ ಎಂದು ತಮ್ಮನ್ನು ತಾವೇ ಅಣಕಿಸಿಕೊಂಡು ನಕ್ಕುಬಿಡುವ ಜಾಯಮಾನ ಅವರದು. ಹೊಸ ಸಂಕಲನದ ನೆಪದಲ್ಲಿ ಅವರ ಒಟ್ಟಾರೆ ಕವಿತೆಗಳ ಬಗ್ಗೆ ಬರೆಯುವುದು ಇಲ್ಲಿ ನನ್ನ ಉದ್ದೇಶ. ನನ್ನ ಮತ್ತು […]

ಅಹಮದನ 407

ಅಂಜನಾ ಹೆಗಡೆ ಸಾವಿತ್ರಕ್ಕ ಎರಡೇ ದೋಸೆ ತಿಂದು ಚಹಾವನ್ನೂ ಕುಡಿಯದೇ ಗಡಿಬಿಡಿಯಲ್ಲಿ ಬಚ್ಚಲುಮನೆಗೆ ಹೋಗಿ ಬಿಸಿನೀರಿನಲ್ಲಿ ಕೈ ತೊಳೆದು ಸೆರಗಿನಿಂದ ಒರೆಸಿಕೊಳ್ಳುತ್ತ ಜಗಲಿಗೆ ಓಡಿದಳು. ರಾಮಣ್ಣ ಎಡಗೈಯಲ್ಲಿ ತೊಗರು ತುಂಬಿದ ಚೊಂಬನ್ನು ಹಿಡಿದುಕೊಂಡು ಹಳೆಯ ಬ್ರಷ್ಶಿನಿಂದ ಅಡಿಕೆಚೀಲಗಳ ಮೇಲೆ ಸೊಸೈಟಿಯ ನಂಬರನ್ನೂ, ಪರಮಣ್ಣನ ಹೆಸರನ್ನೂ ಬರೆದು ಒಂದೊಂದೇ ಚೀಲವನ್ನು ಎಳೆದು ಪಕ್ಕಕ್ಕಿಡುತ್ತಿದ್ದ. ಪರಮಣ್ಣ ಮಾತ್ರ ಆರಾಮಾಗಿ ನಾಲ್ಕೈದು ದೋಸೆಗಳನ್ನು ಬೆಲ್ಲ-ತುಪ್ಪದಲ್ಲದ್ದಿ ತಿಂದು, ಒಂದು ಲೋಟ ಚಹಾ ಕುಡಿದು ಕವಳದ ಬಟ್ಟಲು ಹಿಡಿದು ಆರಾಮಕುರ್ಚಿಯಲ್ಲಿ ಕಾಲಮೇಲೆ ಕಾಲು ಹಾಕಿ […]

ಈ ರಂಗವಲ್ಲಿಯಾಟ

ದಿವ್ಯಾ ಮಂಡೀರ   ಸಾವು ನೆಮ್ಮದಿಯಂತೆ ಸುದೀರ್ಘ ಕತ್ತಲಲ್ಲಿ ನಿಶ್ಚಲವಾಗಿ ಮಲಗುವುದಂತೆ ವಾಸ್ತವತೆಯ ಭೀಕರ ಕತ್ತಲನ್ನು ಮರೆತು ಪ್ರೀತಿ, ಬದುಕು, ಹರಯ, ದ್ವೇಷ-ರೋಷಗಳ ನಡುವೆ ಒಮ್ಮೆ ಸತ್ತು ನೋಡು ಎಂದಿದ್ದ ಕವಿಯನ್ನೊಮ್ಮೆ ಕೇಳಬೇಕೆನ್ನಿಸಿದೆ * ಇದು ಹೊಲಿಗೆ ಸಂಬಂಧಗಳು ಇಲ್ಲಿ ಬದುಕಬೇಕು ನೋವು, ನಿರಾಸೆ, ಭರವಸೆ, ಕನಸುಗಳನ್ನು ಕೇಳಿಕೊಳ್ಳಬೇಕು ಈ ದ್ವಂದ್ವಗಳಿಗೆ ಒಂದಿಷ್ಟು ಉತ್ತರ ಜಡ್ಡುಗಟ್ಟಿದ ಕಲ್ಲುಬಂಡೆಗೆಲ್ಲಿ ತಿಳಿಯಬೇಕು ಕಲ್ಲುಬಾಳೆಯ ನವಿರು ಭಾವಗಳು ರಾತ್ರಿಗಳು ಖಾಲಿಯಾಗುತ್ತಲೇ ಇವೆ ಎದೆಯೊಳಗಿನ ಸಣ್ಣ ಭಯಕ್ಕೆ ಹರೆಯದ್ದು ನಿರ್ಲಿಪ್ತ ನಗು * […]

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಸೌಂದರ್ಯ ಹೆಚ್ಚಿಸಿಕೊಂಡ ಚಾರ್ಮಾಡಿ ಘಾಟ್

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಸತತ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತದಲ್ಲಿದೆ. ಕಳಸ ಪಟ್ಟಣದಿಂದ ಹೊರನಾಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಇದಾಗಿದ್ದು, ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ.ಕುದುರೆಮುಖ ಸುತ್ತಮುತ್ತ ಬಿಟ್ಟು ಬಿಡದೆ ಮುಂಗಾರು ಮಳೆ ಸುರಿಯುತ್ತಿರುವ ಕಾರಣದಿಂದಾಗಿ ಪಶ್ಚಿಮ ಘಟ್ಟ ನದಿಗಳು ಜೀವ ಕಳೆ ಪಡೆದಿವೆ. ಆದರೆ ಧಾರಾಕಾರ ಮಳೆಯಿಂದಾಗಿ ಮಲೆನಾಡು ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸೌಂದರ್ಯದ […]

ಮಾರುಕಟ್ಟೆಗೆ ಲಾಕ್‌ಡೌನ್ ಅಡಚಣೆ: ಬೆಳೆದ ಬಾಳೆ ಕಡಿದ ರೈತ

ಯಲ್ಲಾಪುರ: ಲಾಕ್‌ಡೌನ್ ಕಾರಣದಿಂದ ಬಾಳೆಕಾಯಿಗೂ ಮಾರುಕಟ್ಟೆ ಕುಸಿದಿದೆ. ಇದರಿಂದ ಚಿಂತಿತರಾದ ತಾಲ್ಲೂಕಿನ ಗ್ರಾಮೀಣ ಪ್ರದೇಶದ ರೈತರು ಬಾಳೆ ಗೊನೆ, ಬಾಳೆ ಗಿಡಗಳನ್ನು ಕತ್ತರಿಸಿ ಹಾಕುತ್ತಿದ್ದಾರೆ. ತಾಲ್ಲೂಕು ಅಡಿಕೆಗೆ ಎಷ್ಟು ಪ್ರಖ್ಯಾತವೋ ಬಾಳೆ ಕೃಷಿಗೂ ಅಷ್ಟೇ ಪ್ರಸಿದ್ಧವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ‍್ರವಾಸಿಗರು ಪಟ್ಟಣದಲ್ಲಿ ಬಾಳೆಹಣ್ಣುಗಳನ್ನು ಖರೀದಿಸಿ ಮುಂದೆ ಸಾಗುತ್ತಾರೆ. ಆದರೆ, ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಾದ ಬಳಿಕ ಬಾಳೆ ಬೆಳೆಗಾರರ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಾಳೆಹಣ್ಣುಗಳನ್ನು ಬಹಳ ದಿನ ಶೇಖರಿಸಿ ಇಡಲಾಗದು. ಹಣ್ಣಾದ ನಂತರ ಅವುಗಳನ್ನು ಮಾರಾಟ ಮಾಡದಿದ್ದರೆ […]

ಮರಳಿ ಪಡೆಯಬೇಕಿರುವ ಜೀವಸಂಕುಲ ಲೋಕ

ಇಂದು ಬೆಳಗ್ಗೆ ಪತ್ರಿಕೆಯಲ್ಲಿ `ವಿಶ್ವಪರಿಸರ ದಿನ’ ಎಂದು ತಿಳಿದಾಗ ಬಾಳ್ವೆ ಮತ್ತು ಬಾಳುವೆಯ ವಿಧಾನಗಳೆರಡೂ ಬೇರೆಯಲ್ಲ ಎಂದು ಬದುಕುತ್ತಿರುವ, ನಾನು ಬಹುವಾಗಿ ಗೌರವಿಸುವ ಮೂವರ ಹೆಸರುಗಳು ಕಣ್ಣ ಮುಂದೆ ಸುಳಿದವು. ಮೇಲುಕೋಟೆಯ ಜನಪದ ಟ್ರಸ್ಟ್‌ನ ಸಂತೋಷ ಕೌಲಗಿ, ಎಂಬತ್ತು-ತೊಂಬತ್ತರ ದಶಕದಲ್ಲಿ ಉತ್ಸಾಹದಲ್ಲಿ, ರಾಜ್ಯದ ಆದ್ಯಂತ ಪರಿಸರದ ಕುರಿತು ಅರಿವು ಮೂಡಿಸುವ ಪ್ರಯತ್ನದಲ್ಲಿ ತೊಡಗಿದ ‘ಅಪ್ಪಿಕೋ’ ಪಾಂಡುರಂಗ ಹೆಗಡೆ ಮತ್ತು ಹಳೆಯ ಗೆಳೆಯ, ’ಗಿಡಬಾಲಕ’ ಎಲ್ಸಿ ನಾಗರಾಜ. ಅಚ್ಚರಿ ಎನ್ನುವಂತೆ ಬೆಳಗ್ಗೆ ಸಂತೋಷ ಕೌಲಗಿಯವರು ಪುಟ್ಟ ಬರಹವನ್ನು ಕೆಲವು […]

ಸೂರ್ಯ ಸತ್ತೇ ಇವುಗಳ ಸಂತತಿ ಇಲ್ಲವಾಗಬೇಕು!

ಬೇರೆ ಗ್ರಹಗಳಲ್ಲಿ ಜೀವಿಗಳಿರಬಹುದು, ಇಲ್ಲದಿರಬಹುದು. ಕಾಲವೆ ಉತ್ತರಿಸಬೇಕು. ಆದರೆ ನಮ್ಮ ಭೂಮಿಯೆ ಏಲಿಯನ್ ತರಹ ಕಾಣುವ ಜೀವಿಯೊಂದನ್ನು ವಿಕಾಸಗೊಳಿಸಿದೆ. ಸೂಕ್ಷ್ಮದರ್ಶಕದಲ್ಲಿ ಮಾತ್ರ ಕಾಣಬಹುದಾದ ಈ ಜೀವಿ  0.5 – 1.0 ಮಿ.ಮೀ. ಉದ್ದವಿದ್ದು ಆಳ ಸಾಗರದಿಂದ ಹಿಡಿದು ಮರುಭೂಮಿಯ ಮರಳು ದಿಬ್ಬಗಳವೆರೆಗೆ ಎಲ್ಲೆಡೆ ವಾಸಿಸಬಲ್ಲದು. ಪಾಚಿ ಬೆಳೆಯುವ ಸಿಹಿನೀರಿನ ಕೊಳ, ಕೆರೆ, ಸರೋವರಗಳಲ್ಲೂ ಯಥೇಚ್ಛ ಕಂಡುಬರುತ್ತದೆ. ಅಂತರಿಕ್ಷದ ನಿರ್ವಾತದಲ್ಲೂ ಸಾಯದೆ ಇರಬಲ್ಲದು. -273 ಡಿಗ್ರಿ ಸೆಲ್ಸಿಯಸ್ ಶೈತ್ಯ(Absolute Zero)ದಿಂದ ಹಿಡಿದು 100 ಡಿಗ್ರಿಗೂ ಹೆಚ್ಚಿನ ತಾಪದಲ್ಲಿ ವಾಸಿಸಬಲ್ಲದು. […]

Back To Top