ಆನೆತಜ್ಞ ಅಜಯ್ ದೇಸಾಯಿ ನಿಧನ
ಆನೆಗಳ ಕುರಿತು ಸುದೀರ್ಘ ಅಧ್ಯಯನ ನಡೆಸಿ ಹೊಸ ಆಯಾಮಗಳಿಂದ ವಿಶ್ವವನ್ನು ಅಚ್ಚರಿಗೊಳಿಸಿದ್ದ ಕನ್ನಡಿಗ ಅಜಯ್ ಎ.ದೇಸಾಯಿ(೬೪ವರ್ಷ)ಯವರು ಹೃದಯಾಘಾತದಿಂದ ಸ್ವಗೃಹದಲ್ಲಿ ಶುಕ್ರವಾರ ಅಸ್ತಂಗತರಾದರು. ಪತ್ನಿ, ಇಬ್ಬರು ಪುತ್ರರು, ಸಹೋದರಿ ಹಾಗೂ ಡಾ.ಅರವಿಂದ ದೇಸಾಯಿ ಸೇರಿದಂತೆ ಇಬ್ಬರು ಸಹೋದರರು ಅಗಲಿದ್ದಾರೆ, ಸಂಜೆ ಅಂತ್ಯಕ್ರಿಯೆ ನೆರವೇರಿತು. ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಕೊಣ್ಣೂರಿನವರು. ಬೆಳಗಾವಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮ ದರ್ಶನ ಪಡೆದು ಸಮವಸ್ತ್ರ ಗೌರವ ಸಲ್ಲಿಸಿದರು. ಧಾರವಾಡ ವಿ.ವಿ.ಯಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದ […]




