ನಷ್ಟದಲ್ಲಿ ಷೇರು ಹೊಡಿಕೆದಾರ: ಸಂಕಷ್ಟಕ್ಕೆ ಸಿಲುಕಿದ ಗ್ರಾಹಕರು
ಲಕ್ಷ್ಮೀ ವಿಲಾಸ್ ಬ್ಯಾಂಕಿನ(ಎಲ್ವಿಬಿ) ವಹಿವಾಟುಗಳ ಮೇಲೆ ಕೇಂದ್ರ ಸರ್ಕಾರ ಒಂದು ತಿಂಗಳ ಅವಧಿಗೆ ವಿಧಿಸಿರುವ ನಿರ್ಬಂಧಗಳ ಪರಿಣಾಮವಾಗಿ ಬ್ಯಾಂಕಿನ ಗ್ರಾಹಕರು ತಾತ್ಕಾಲಿಕವಾಗಿ ತೊಂದರೆಗೆ ಒಳಗಾ ದರೂ, ಹಣ ಸುರಕ್ಷಿತವಾಗಿ ಇರುತ್ತದೆ. ಬ್ಯಾಂಕ್ನ ಬಾಂಡ್ಗಳನ್ನು ಖರೀದಿ ಮಾಡಿದವರು ಕೂಡ ನಷ್ಟದ ಭೀತಿಯಲ್ಲಿ ಇರಬೇಕಾಗಿಲ್ಲ ಎನ್ನುತ್ತಾರೆ ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ತಜ್ಞರು. ಎಲ್ವಿಬಿ ಷೇರುದಾರರು ಅತಿಹೆಚ್ಚಿನ ನಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈಗ ಪ್ರಸ್ತಾಪಿಸಲಾಗಿರುವ ವಿಲೀನ ಸೂತ್ರದ ಪ್ರಕಾರ, ಎಲ್ವಿಬಿಯು ಸಿಂಗಪುರ ಮೂಲದ ಡಿಬಿಎಸ್ ಬ್ಯಾಂಕಿನಲ್ಲಿ ವಿಲೀನ […]




