ಸುಳ್ಳು ಸುದ್ದಿ ತಡೆಗೆ ಸೂಚನೆ
ಸುದ್ದಿ ವಾಹಿನಿಗಳು ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ ಒಡ್ಡಲು ವ್ಯವಸ್ಥೆ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತಬ್ಲೀಗ್ ಜಮಾತ್ನಿಂದ ಕೋವಿಡ್ ಹರಡಿತು ಎನ್ನುವ ವರದಿಗಳ ವಿರುದ್ಧ ಜಮಾತ್ ಉಲೇಮಾ ಎ ಹಿಂದ್ ಸಂಘಟನೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರ ಪೀಠ, ಕೇಬಲ್ ಟಿವಿ ಜಾಲ ನಿಯಂತ್ರಣ ಕಾಯ್ದೆ ಅಡಿ ನೀವು ತೆಗೆದುಕೊಂಡಿರುವ ಕ್ರಮಗಳು ಯಾವುವು ಎಂದು ಈ […]




