ಬಿಸಿಯೂಟ ಸ್ಥಗಿತಕ್ಕೆ ಕೋರ್ಟ್ ಅಸಮಾಧಾನ
ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದು ಸಂವಿಧಾನದ 21ನೇ ವಿಧಿಯಡಿ ದತ್ತವಾಗಿರುವ ಜೀವಿಸುವ ಹಕ್ಕು ಮತ್ತು ಆಹಾರ ಭದ್ರತಾ ಕಾಯ್ದೆಯ ಉಲ್ಲಂಘನೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಿಸಿಯೂಟ ಯೋಜನೆ ಸ್ಥಗಿತವನ್ನು ಪ್ರಶ್ನಿಸಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮು.ನ್ಯಾ. ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾ.ಅರವಿಂದಕುಮಾರ್ ಅವರ ವಿಭಾಗೀಯ ಪೀಠ, ಕೊರೊನಾ ಅವಧಿಯಲ್ಲಿ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿರುವುದು ಮಕ್ಕಳ ಹಕ್ಕಿನ ಉಲ್ಲಂಘನೆ ಎಂದು ಹೇಳಿದೆ. ಬಿಸಿಯೂಟ […]




