‘ಕೃಷಿ ಮೇಳ’ ನಾಳೆಯಿಂದ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ನ.11ರಿಂದ 13ರವರೆಗೆ ಕೃಷಿ ಮೇಳವನ್ನು ಆಯೋಜಿಸಿದೆ. ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ನೀಡುವುದು ಮೇಳದ ಉದ್ದೇಶ. ಕರೋನಾ ನಿರ್ಬಂಧಗಳ ಹಿನ್ನಲೆಯಲ್ಲಿ ಮೇಳ ಸರಳವಾಗಿ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಸಕಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಪ್ರತ್ಯಕ್ಷ ಹಾಗೂ ಡಿಜಿಟಲ್ ಮುಖಾಂತರ ಮೇಳ ಹಮ್ಮಿಕೊಳ್ಳಲಾಗಿದೆ. ಭಾರತೀಯ ಕೃಷಿ ಸಂಶೋಧನಾ ಪರಿಷತ್ ಉಪ ಮಹಾನಿರ್ದೇಶಕ ಎ.ಕೆ.ಸಿಂಗ್ ಅವರು ಆನ್ಲೈನ್ ಮೂಲಕ ನ.11ರ ಬೆಳಗ್ಗೆ 11 ಗಂಟೆಗೆ ಮೇಳವನ್ನು ಉದ್ಘಾಟಿಸಲಿದ್ದಾರೆ ಎಂದು […]




