ಜನೌಷಧ ಕೇಂದ್ರಗಳಲ್ಲಿ ಆಯುರ್ವೇದ ಔಷಧ
ಜನೌಷಧ ಕೇಂದ್ರಗಳಲ್ಲಿ ಶೀಘ್ರವೇ ಕಡಿಮೆ ಬೆಲೆಯಲ್ಲಿ ಆಯುರ್ವೇದ ಔಷಧಿಗಳು ಲಭ್ಯವಾಗಲಿವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ. ಜನೌಷಧ ಕೇಂದ್ರಗಳಲ್ಲಿ ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಗಳನ್ನು ನೀಡಲಾಗುತ್ತಿದ್ದು, ಶೇ.10 ರಿಂದ ಶೇ.90ರವರೆಗೆ ರಿಯಾಯ್ತಿ ನೀಡಲಾಗುತ್ತಿದೆ. ಜನರಿಕ್ ಮೆಡಿಸಿನ್ ಆ್ಯಪ್ ಬಳಸಿ ಮನೆ ಸಮೀಪದಲ್ಲಿ ಜನೌಷಧ ಮಳಿಗೆ ಎಲ್ಲಿದೆ ಎಂಬುದನ್ನು ಜನ ತಿಳಿದುಕೊಳ್ಳಬಹುದು. ಬೇಕಿರುವ ಔಷಧದ ಹೆಸರನ್ನು ನಮೂದಿಸಿದರೆ, ಅದೇ ಔಷಧಿಯ ಸಂಯೋಜನೆಯ ಬೇರೆ ಕಂಪನಿಗಳ ಉತ್ಪನ್ನಗಳು ಎಲ್ಲಿ ಲಭ್ಯವಿವೆ ಎಂಬುನ್ನು ತಿಳಿದುಕೊಳ್ಳಬಹುದು. ರಾಜ್ಯದ ನಾನಾ […]




