ಸೇವಾ-ಸಿಂಧು ಆರಂಭಕ್ಕೆ ಇತ್ತಾಯ
ಸೇವಾಸಿಂಧು ಆನ್ಲೈನ್ ನೋಂದಣಿ ಸ್ಥಗಿತಗೊಂಡಿದ್ದರಿಂದ ಲಕ್ಷಾಂತರ ಕಾರ್ಮಿಕರು ಪರದಾಡುವಂತಾಗಿದೆ. ಕಳೆದ ಎರಡು ತಿಂಗಳಿಂದ ಆನ್ಲೈನ್ನಲ್ಲಿ ಯಾವುದೇ ಅರ್ಜಿ ಸ್ವೀಕರಿಸುತ್ತಿಲ್ಲ. ಯಾವುದೇ ಪ್ರಮಾಣ ಪತ್ರವನ್ನೂ ನೀಡುತ್ತಿಲ್ಲ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುದೇವ ಯಳಸಂಗಿ ಆಗ್ರಹಿಸಿದರು. ರಾಜ್ಯದಲ್ಲಿ 2007ರಿಂದ ಇಲ್ಲಿಯವರೆಗೆ 25 ಲಕ್ಷ ಕಟ್ಟಡ ಕಾರ್ಮಿಕರ ನೋಂದಣಿಯಾಗಿದೆ. ಇನ್ನೂ 70 ಲಕ್ಷ ಕಾರ್ಮಿಕರು ನೋಂದಣಿ ಕಾರ್ಡ್ ಪಡೆದುಕೊಂಡಿಲ್ಲ. ಕಾರಣ, ಸರ್ಕಾರದ ವಿವಿಧ ಸವಲತ್ತುಗಳಿಂದ ಅವರು […]




