ಚುನಾವಣೆ ಆಯೋಗದ ಕುತಂತ್ರ ಮತ್ತು ವೋಟ್ಬಂದಿ
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್)ಯನ್ನು ʻಅದೊಂದು ಸಾಂವಿಧಾನಿಕ ಹೊಣೆಗಾರಿಕೆʼ ಎಂದಿರುವ ಸುಪ್ರೀಂ ಕೋರ್ಟ್(ಜುಲೈ 10,2025 ರಂದು), ಪ್ರಕ್ರಿಯೆಯನ್ನು ಮುಂದುವರಿಸಲು ಅನುಮತಿ ನೀಡಿದೆ. ತೀರ್ಪಿನಿಂದ ಉತ್ತೇಜಿತವಾಗಿರುವ ಆಯೋಗ, ದೇಶಾದ್ಯಂತ ಈ ಪ್ರಕ್ರಿಯೆಯನ್ನು ನಡೆಸುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪಗಳಿವೆ ಎಂದು ವಿಡಿಯೋ ಮಾಡಿದ್ದ ಪತ್ರಕರ್ತ/ಯುಟ್ಯೂಬರ್ ಅಜಿತ್ ಅಂಜುಂ ಮೇಲೆ ಜುಲೈ 15ರಂದು ಎಫ್ಐಆರ್ ದಾಖಲಿಸಲಾಗಿದೆ. ಪರಿಷ್ಕರಣೆಯನ್ನು ವಿರೋಧಿಸಿದ್ದ ಪ್ರತಿ ಪಕ್ಷಗಳು, ಸುಪ್ರೀಂ ಮೆಟ್ಟಿಲೇರಿವೆ. ಜುಲೈ 28ರಂದು ಈ ಸಂಬಂಧ ವಿಚಾರಣೆ ಬಾಕಿ […]
ಆಪ್ ಅಪಜಯ ಮತ್ತು ಮೈತ್ರಿಕೂಟದ ಭವಿಷ್ಯ
ಕಂಪ್ಟ್ರೋಲರ್ ಆಂಡ್ ಆಡಿಟರ್ ಜನರಲ್ ಆಗಿದ್ದ ವಿನೋ ದ್ ರೈ ಅವರು ಯುಪಿಎ-2 ಸರ್ಕಾರ ತರಂಗಾಂತರ ಹಂಚಿಕೆಯಲ್ಲಿ 1.76 ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆಸಿದೆ ಎಂದು ವರದಿ ನೀಡಿದ್ದರು. ವರದಿಯನ್ನು ಮುಂದಿಟ್ಟು ಕೊಂಡು ಅಣ್ಣಾ ಹಜಾರೆ, ಕಿರಣ್ ಬೇಡಿ, ಅರವಿಂದ್ ಕೇಜ್ರಿವಾಲ್, ಬಾಬಾ ರಾಮದೇವ್ ಹೋರಾಟ ಆರಂಭಿಸಿ ದರು; ಸುಬ್ರಮಣಿಯಂ ಸ್ವಾಮಿ ಪ್ರಕರಣವನ್ನು ನ್ಯಾಯಾಂಗ ಕ್ಕೆ ಕೊಂಡೊಯ್ದರು. ಡಿಸೆಂಬರ್ 2017ರಲ್ಲಿ ʻಇದೊಂದು ಕಲ್ಪಿತ ಪ್ರಕರಣʼ ಎಂದ ಸಿಬಿಐ ವಿಶೇಷ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿತು. ಅಷ್ಟರೊಳಗೆ, ಕೇಜ್ರಿವಾಲ್ […]
ʻಒಂದು ದೇಶ ಒಂದು ಚುನಾವಣೆʼ ರಾಜಕೀಯ ಉತ್ತರದಾಯಿತ್ವಕ್ಕೆ ಹಿನ್ನಡೆ
ʻಒಂದು ದೇಶ ಒಂದು ಚುನಾವಣೆ(ಒಂದೇ ಒಂಚು)ʼ ಕಾರ್ಯನೀತಿಯ ಅನುಷ್ಠಾನಕ್ಕೆ ಮೂರು ಕಾಯಿದೆಗಳ ತಿದ್ದುಪಡಿಗೆ ಒಕ್ಕೂಟ ಸರ್ಕಾರ ಮುಂದಾಗಿದೆ. ಮಸೂದೆಗೆ ಕನಿಷ್ಠ ಅರ್ಧದಷ್ಟು ರಾಜ್ಯಗಳ ಅನುಮತಿ ಅಗತ್ಯವಿದೆ. ಇದು 1983 ರಿಂದ ಚರ್ಚೆಯಲ್ಲಿರುವ ಪರಿಕಲ್ಪನೆ. ಆಗ ಕಾನೂನು ಆಯೋಗ ತನ್ನ ವರದಿಯಲ್ಲಿ ʼಏಕಕಾಲದಲ್ಲಿ ಚುನಾವಣೆಯಿಂದ ವೆಚ್ಚ ಇಳಿಕೆ ಆಗಲಿದೆ. ಚುನಾವಣೆಗೆ ಸರ್ಕಾರಿ ನೌಕರರ ನಿಯೋಜನೆ ಕಡಿಮೆಯಾಗುವುದರಿಂದ, ಉತ್ಪಾದಕತೆ ಹೆಚ್ಚಲಿದೆ. ರಾಜಕೀಯ ಪಕ್ಷಗಳು ಆಡಳಿತದತ್ತ ಗಮನ ನೀಡಲು ಸಾಧ್ಯವಾಗುತ್ತದೆʼ ಎಂದು ಹೇಳಿತ್ತು. ಆನಂತರ 1999ರಲ್ಲಿ ಕಾನೂನು ಆಯೋಗ ತನ್ನ 177ನೇ […]

