ಯುಜಿಸಿ, ಸುಪ್ರೀಂ ಮತ್ತು ಸಮಾನತೆಯ ಅವಸಾನ
ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ದ ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೊಸ ನಿಯಮಗಳನ್ನು ವಿರೋಧಿಸಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮೇಲ್ಜಾತಿಗಳು- ಸಾಮಾನ್ಯ ವರ್ಗದ ವಿದ್ಯಾರ್ಥಿ ಗಳು ಪ್ರತಿಭಟನೆ ಆರಂಭಿಸಿದ್ದರು. ಬಿಜೆಪಿಯ ರಾಜಕೀಯ ಶಿಲ್ಪದ ಬುನಾದಿಯಾದ ಯುವಜನರಲ್ಲಿ ಜಾತಿ ಆಧರಿತ ಧ್ರುವೀಕರಣವು ಪಕ್ಷಕ್ಕೆ ದುಬಾರಿಯಾಗುವ ಸಾಧ್ಯತೆ ಇತ್ತು. ಆದರೆ, ಸುಪ್ರೀಂ ತೀರ್ಪಿನಿಂದ 2026ರಲ್ಲಿ ನಡೆಯ ಲಿರುವ ಮತ್ತು 2027ರಲ್ಲಿ ಉತ್ತರಪ್ರದೇಶದಲ್ಲಿ ನಡೆಯಬೇಕಿರುವ ಚುನಾವಣೆಯಲ್ಲಿ ಬಿಜೆಪಿಗೆ ಎದುರಾಗಿದ್ದ ಕಂಟಕವೊಂದು ನಿವಾರಣೆ ಆಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ […]

