ಸುಪ್ರೀಂ ತೀರ್ಪು ಮತ್ತು ಮಸುಕಾಗುತ್ತಿರುವ ಸಂವಿಧಾನದ ಬೆಳಕು
ನವೆಂಬರ್ 20ರಂದು ಎರಡು ಚರಿತ್ರಾರ್ಹ ಘಟನೆಗಳು ನಡೆದವು- ಪಟಣಾದಲ್ಲಿ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಅವಧಿಗೆ ಅಧಿಕಾರ ಸ್ವೀಕರಿಸಿದರು ಮತ್ತು ಮುಖ್ಯ ನ್ಯಾಯಮೂರ್ತಿ ಆರ್. ಎಸ್. ಗವಾಯಿ ನೇತೃತ್ವದ ಸಂವಿಧಾನ ಪೀಠವು ರಾಜ್ಯಪಾಲರು-ರಾಷ್ಟ್ರಪತಿ ಅವರಿಗೆ ಕಡತವೊಂದಕ್ಕೆ ಸಹಿ ಹಾಕಲು ಕಾಲಾವಧಿ ವಿಧಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತು. ನಿತೀಶ್ ಕುಮಾರ್ ಮತ್ತು ಮೈತ್ರಿ ಪಕ್ಷ ಬಿಜೆಪಿ, ಚುನಾವಣೆಯನ್ನು ತಂತ್ರಗಾರಿಕೆ ಮತ್ತು ಕುಶಲತೆಯಿಂದ ತಿರುಚಿ ಜಯ ಸಾಧಿಸಿತು; ಪ್ರತಿಪಕ್ಷಗಳು ತಂತ್ರಕ್ಕೆ ಶರಣಾದವು. ಆದರೆ, ಸುಪ್ರೀಂ ಕೋರ್ಟ್ ತೀರ್ಪು […]
ಸುಪ್ರೀಂ ಕೋರ್ಟಿಗೆ ಭಿನ್ನಮತದ ಮೆರುಗು
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನವು ಸನಾತನ ಮನಸ್ಥಿತಿಯ ಗಂಭೀರ ಪ್ರಕರಣ. ಸನಾತನ ಧರ್ಮಕ್ಕೆ ಅಪಮಾನ ವನ್ನು ಸಹಿಸುವುದಿಲ್ಲ ಎಂದು ಈ ಪ್ರಯತ್ನ ನಡೆಸಿದ ಕ್ರಿಮಿ ಹೇಳಿದೆ. ಆತ ಅಪ್ರಬುದ್ಧನಲ್ಲ; ಮಾನಸಿಕ ಅಸ್ವಸ್ಥನಲ್ಲ; ಅಕ್ಷರಸ್ಥ ಮತ್ತು ವೃತ್ತಿಯಲ್ಲಿ ವಕೀಲ. ನ್ಯಾಯಾಲಯದ ತೀರ್ಮಾನ ತಮ್ಮ ಧರ್ಮಕ್ಕೆ ವಿರುದ್ಧವಾಗಿದೆ ಎನ್ನುವ ಅಸಹನೆಯು ಗುಂಪು ಹಲ್ಲೆಗಳು ಮತ್ತು ಬುಲ್ಡೋಜರ್ ನ್ಯಾಯದ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರಜಾಸತ್ತೆಗೆ ಧಕ್ಕೆಯುಂಟು ಮಾಡುತ್ತಿದೆ. ದೇಶದ ನಾಯಕತ್ವ ವಹಿಸಿದವರ […]

