ಕೆನ್-ಬೆಟ್ವಾ ಯೋಜನೆ ಮತ್ತು ಹನೂರಿನ ಹತ್ಯೆಗಳು
ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಯ ಸಂತ್ರಸ್ಥರಿಗೆ ಸಮರ್ಪಕ ಪರಿಹಾರ ನೀಡುವುದಾಗಿ ಸರ್ಕಾರ ಆಶ್ವಾಸನೆ ನೀಡಿದ ಬಳಿಕ ಪ್ರತಿಭಟನೆಕಾರರು ನಿರಶನ ಅಂತ್ಯಗೊಳಿಸಿದ್ದಾರೆ. ಅತ್ಯಂತ ಪ್ರಗತಿಪರ ಕಾನೂನು ಎಂಬ ಶ್ಲಾಘನೆಗೊಳಗಾದ ಪರಿಶಿಷ್ಟ ವರ್ಗಗಳು ಮತ್ತು ಇತರ ಸಾಂಪ್ರದಾಯಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಗುರುತಿಸುವಿಕೆ) ಕಾಯಿದೆ 2006 ಅಥವಾ ಎಫ್ಆರ್ಎಯನ್ನು ನ್ಯಾಯಾಲಯಗಳು ಸಮರ್ಪಕವಾಗಿ ವ್ಯಾಖ್ಯಾನಿಸದೆ ಇರುವುದರಿಂದ ಅರಣ್ಯವಾಸಿಗಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಅರಣ್ಯವಾಸಿಗಳು ಮತ್ತು ಕಾ ಡಂಚಿನಲ್ಲಿ ವಾಸಿಸುವ ಜನರ ಕುರಿತ ನಿರ್ಲಕ್ಷ್ಯದ ಪರಿಣಾಮವಾಗಿ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಮೂವರು ಬಲಿಯಾಗಿದ್ದಾರೆ. ಏನಿದು ನದಿ […]
ಸಂರಕ್ಷಣೆ ಕಾಯಿದೆಗಳು ನಿಶ್ಶಕ್ತ : ಭ್ರಷ್ಟಾಚಾರ, ಉದ್ಯಮಕ್ಕೆ ಕಾಡುಗಳ ಬಲಿ
ಆಗುಂಬೆಯ ಅರಣ್ಯದಲ್ಲಿ ಕಾಳಿಂಗ ಸರ್ಪಗಳ ದುರ್ಬಳಕೆ ಬಹಿರಂಗಗೊಂಡು ಈಸಂಬಂಧ ದೂರು ಸಲ್ಲಿಕೆಯಾಗಿದ್ದರೂ, ಅರಣ್ಯ ಇಲಾಖೆ-ಸರ್ಕಾರ ಮೌನವಾಗಿವೆ; ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್)ಯ ದೇವದಾರಿ ಗಣಿ ವಿರುದ್ಧ ಗ್ರಾಮಸಭೆ ನಿರ್ಣಯ ಕೈಗೊಂಡಿದೆ. ಕರ್ನಾಟಕ ವಿದ್ಯುತ್ ನಿಗಮ ಯೋಜಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್(ಪಿಎಸ್ಪಿ) ಕುರಿತ ಸಾರ್ವಜನಿಕ ಅಹವಾಲು ಸಭೆಯಲ್ಲಿ ಯೋಜನೆ ವಿರುದ್ಧ ಸುಮಾರು 10 ಸಾವಿರ ಅಹವಾಲುಗಳು ಸಲ್ಲಿಕೆಯಾಗಿವೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಜನ ಎಚ್ಚರಿಸಿದ್ದಾರೆ. ದೇಶದೆಲ್ಲೆಡೆ ಅರಣ್ಯಗಳು ಉದ್ಯಮಕ್ಕೆ, ಭ್ರಷ್ಟಾಚಾರಕ್ಕೆ ಬಲಿಯಾಗುತ್ತಿವೆ. ಸಂಪನ್ಮೂಲ ಸಮೃದ್ಧ ಛತ್ತೀಸ್ಗಢ ರಾಜ್ಯದಲ್ಲಿ […]

