ಎಐ ಶೃಂಗ, ನಿರುದ್ಯೋಗ ಮತ್ತು ಶೈಕ್ಷಣಿಕ ವ್ಯವಸ್ಥೆ
ದಿಲ್ಲಿಯಲ್ಲಿ ನಡೆದ ಎಐ ಶೃಂಗದಲ್ಲಿ ಅಮೆರಿಕ, ಇಂಗ್ಲೆಂಡ್, ಬ್ರೆಜಿಲ್, ಆಸ್ಟ್ರೇಲಿಯ, ಆಸ್ಟ್ರಿಯ, ಚೀನಾ, ಕೆನಡಾ, ಸ್ವಿಡ್ಜರ್ಲ್ಯಾಂಡ್ ಸೇರಿದಂತೆ 89 ರಾಷ್ಟ್ರಗಳು ಎಐ ಸಂಪನ್ಮೂಲಗಳ ಪ್ರಜಾಪ್ರಭುತ್ವೀಕರಣ, ರಾಷ್ಟ್ರೀಯ ಸಾರ್ವಭೌಮತ್ವಕ್ಕೆ ಗೌರವ, ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಒಳಿತು, ಸುರಕ್ಷಿತ ಮತ್ತು ನಂಬಿಕಾರ್ಹ ಎಐ, ಸಾಮಾಜಿಕ ಪ್ರವೇಶಾವಕಾಶ, ಮಾನವ ಸಂಪನ್ಮೂಲದ ಪುನಶ್ಚೇತನ ಇತ್ಯಾದಿ ಒಳಗೊಂಡ ಒಪ್ಪಂದಕ್ಕೆ ಸಹಿ ಹಾಕಿವೆ. ಜತೆಗೆ, ಎಲೆಕ್ಟ್ರಾನಿಕ್ಸ್ ಮತ್ತು ಬಹುಮುಖ್ಯ ಖನಿಜಗಳ ಕೇಂದ್ರೀಕರಣದ ವಿರುದ್ಧದ ಅಮೆರಿಕ ನೇತೃತ್ವದ ʻಪ್ಯಾಕ್ಸ್ ಸಿಲಿಕಾ ಇನಿಷಿಯೇಟಿವ್ʼ ಅನ್ನು ಭಾರತ ಸೇರಿದೆ. […]
ಆಪ್ ಅಪಜಯ ಮತ್ತು ಮೈತ್ರಿಕೂಟದ ಭವಿಷ್ಯ
ಕಂಪ್ಟ್ರೋಲರ್ ಆಂಡ್ ಆಡಿಟರ್ ಜನರಲ್ ಆಗಿದ್ದ ವಿನೋ ದ್ ರೈ ಅವರು ಯುಪಿಎ-2 ಸರ್ಕಾರ ತರಂಗಾಂತರ ಹಂಚಿಕೆಯಲ್ಲಿ 1.76 ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆಸಿದೆ ಎಂದು ವರದಿ ನೀಡಿದ್ದರು. ವರದಿಯನ್ನು ಮುಂದಿಟ್ಟು ಕೊಂಡು ಅಣ್ಣಾ ಹಜಾರೆ, ಕಿರಣ್ ಬೇಡಿ, ಅರವಿಂದ್ ಕೇಜ್ರಿವಾಲ್, ಬಾಬಾ ರಾಮದೇವ್ ಹೋರಾಟ ಆರಂಭಿಸಿ ದರು; ಸುಬ್ರಮಣಿಯಂ ಸ್ವಾಮಿ ಪ್ರಕರಣವನ್ನು ನ್ಯಾಯಾಂಗ ಕ್ಕೆ ಕೊಂಡೊಯ್ದರು. ಡಿಸೆಂಬರ್ 2017ರಲ್ಲಿ ʻಇದೊಂದು ಕಲ್ಪಿತ ಪ್ರಕರಣʼ ಎಂದ ಸಿಬಿಐ ವಿಶೇಷ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿತು. ಅಷ್ಟರೊಳಗೆ, ಕೇಜ್ರಿವಾಲ್ […]

