ಜಾತಿಯೆಂಬುದು ಕಣ್ಣಿಗೆ ಇರಿಯುವ ವಾಸ್ತವ, ನಿವಾರಣೆಯಾಗದ ಜಾಡ್ಯ
ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಒಂದು ವರ್ಗದ ಜನರು, ಧನಾಡ್ಯರು ಹಾಗೂ ಪ್ರತಿಪಕ್ಷ ಬಿಜೆಪಿ ಸಮೀಕ್ಷೆಯನ್ನು ಹೀನಯಿಸಿದ್ದಲ್ಲದೆ, ಸಮಾಜವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ. ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಸ್ನೇಹಿತರಾದ ಎಚ್.ಎಚ್. ರೇಣುಕಾರಾಧ್ಯ ಅವರ ಅನುಭವವು ಜಾತಿ ತನ್ನ ಬೇರನ್ನು ಎಷ್ಟು ಆಳವಾಗಿ ಬಿಟ್ಟಿದೆ ಎಂಬು ದನ್ನು ತೋರಿಸಿಕೊಡುತ್ತದೆ. ಇದೇ ಹೊತ್ತಿನಲ್ಲಿ ಅಧ್ಯಯನವೊಂದು ನಗರಗಳಲ್ಲಿ ಪೌರತ್ವವು ಕಾಗದದ ಮೇಲೆ ಮಾತ್ರ ಸಮಾನವಾಗಿದೆ; ಆದರೆ, ಆಚರಣೆಯಲ್ಲಿ ಅಸಮಾನವಾಗಿದೆ ಎಂದು ಹೇಳಿದೆ. ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರವು […]

