ಯುಎಪಿಎ; ಜಾಮೀನು ಇಲ್ಲವೇ ಸೆರೆವಾಸದ ದ್ವಂದ್ವ
ಅಕ್ರಮ ಚಟುವಟಿಕೆ ತಡೆ ಕಾಯಿದೆ(ಯುಎಪಿಎ) ಅಡಿ ಬಂಧಿತರಿಗೆ ಜಾಮೀನು ನೀಡಿಕೆ ವಿಷಯದಲ್ಲಿ ಸುಪ್ರೀಂ ಕೋರ್ಟಿನ ಎರಡು ಪೀಠಗಳು ವಿಭಿನ್ನ ತೀರ್ಪು ನೀಡಿರುವುದರಿಂದ, ಆದೇಶದ ಪರಾಮರ್ಶನಕ್ಕೆ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ. ಸಯೀದ್ ಅಹ್ಮದ್ ಅಬ್ದುಲ್ ವಾಹಿದ್ ಚೌಧರಿ ವಿ/ಎಸ್ ಮಹಾರಾಷ್ಟ್ರ ಸರ್ಕಾರ(2026) ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ನ ನ್ಯಾ.ಮಾಧವ ಜಾಮದಾರ ಅವರು ಶಾಂತಿಯುತ ಪ್ರತಿಭಟನೆ ಪ್ರತಿಯೊಬ್ಬರಿಗೂ ಸಂವಿಧಾನ ನೀಡಿರುವ ಹಕ್ಕು; ಪೊಲೀಸರು ಪ್ರಜೆಗಳ ಸೇವಕರೇ ಹೊರತು ಸರ್ಕಾರದ ಉನ್ನತ ಅಧಿಕಾರಿಗಳ ಸೇವಕರಲ್ಲ ಎಂದು ಜುಲೈ 3, 2026ರಂದು ಹೇಳಿದ್ದಾರೆ. […]

